<p><strong>ಹಗರಿಬೊಮ್ಮನಹಳ್ಳಿ</strong>: ‘ಮಠಮಾನ್ಯಗಳು ಉಚಿತವಾಗಿ ಸಾಮೂಹಿಕ ವಿವಾಹ ಹಮ್ಮಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ’ ಎಂದು ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಹೇಳಿದರು.</p>.<p>ತಾಲ್ಲೂಕಿನ ನಂದಿಪುರದಲ್ಲಿ ಬುಧವಾರ ಶ್ರೀಗುರು ದೊಡ್ಡಬಸವೇಶ್ವರ 42ನೇ ವರ್ಷದ ರಥೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ನವ ವಧುವರರು ಪರಸ್ಪರ ಅರಿತುಕೊಂಡು ಬದುಕು ಸಾಗಿಸಬೇಕು, ಒಬ್ಬರು ಕೋಪಿಸಿಕೊಂಡಾಗ ಮತ್ತೊಬ್ಬರು ಶಾಂತರಾಗಬೇಕು ಆಗ ಸಂಸಾರ ಸುಖಮಯವಾಗಿರುತ್ತದೆ’ ಎಂದು ತಿಳಿಹೇಳಿದರು.</p>.<p>‘ಶ್ರೀಮಠದಿಂದ ಪಡೆದ ಗುರು ಚರಂತಾರ್ಯಶ್ರೀ ಪ್ರಶಸ್ತಿ ನಿಮ್ಮ ವಿಷ್ಣುವರ್ಧನ್ಗೆ ಸಲ್ಲುತ್ತದೆ, ಚರಂತೇಶ್ವರರ ಆಶೀರ್ವಾದದಿಂದಲೇ ಎಲ್ಲ ಕಾರ್ಯಕ್ರಮಗಳು ಸುಗಮವಾಗಿ ಸಾಗುತ್ತಿವೆ’ ಎಂದು ತಿಳಿಸಿದರು.</p>.<p>ಶಾಸಕ ಕೆ.ನೇಮರಾಜ ನಾಯ್ಕ ಅವರ ಪತ್ನಿ ವಾಣಿ ನೇಮರಾಜನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. 29ಜೋಡಿ ವಧುವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. </p>.<p>ನಂದಿಪುರದ ಮಹೇಶ್ವರ ಸ್ವಾಮೀಜಿ, ಉತ್ತಂಗಿ ಸೋಮಶಂಕರಸ್ವಾಮೀಜಿ, ಗುರುಪಾದ ದೇವರಮಠದ ಮಲ್ಲಿಕಾರ್ಜುನ ಶಿವಾಚಾರ್ಯ, ಅಭಿನವ ಚರಂತೇಶ್ವರ ಶಿವಾಚಾರ್ಯ, ಬೆಣ್ಣಿಹಳ್ಳಿಯ ಪಂಚಾಕ್ಷರಸ್ವಾಮೀಜಿ, ಹಂಪಸಾಗರದ ನವಲಿ ಹಿರೇಮಠದ ಶಿವಲಿಂಗರುದ್ರಮುನಿಸ್ವಾಮೀಜಿ, ತೆಗ್ಗಿನಮಠದ ವರಸಾದ್ಯೋಜಾತ ಶಿವಾಚಾರ್ಯ, ಕೂಡ್ಲಿಗಿ ಹಿರೇಮಠದ ಪ್ರಶಾಂತಸಾಗರ ಸ್ವಾಮೀಜಿ, ಹಿರೇಮಲ್ಲನಕೇರಿಯ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ, ಮಂಡಲ ಅಧ್ಯಕ್ಷ ಬೆಣ್ಣೆಕಲ್ಲು ಪ್ರಕಾಶ್, ಕನಕಪ್ಪ, ದೊಡ್ಡಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಬನ್ನಿಗೋಳ ವೆಂಕಣ್ಣ, ನಂದಿಪುರ ಯಮುನಪ್ಪ, ಕರಿಬಸವನಗೌಡ, ಎಚ್.ಎಂ.ಗುರುಬಸವರಾಜ, ಕೆ.ಶಾರದಾ ಮಂಜುನಾಥ ಇದ್ದರು.</p>.<p>ರಥೋತ್ಸವ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ, ರಕ್ತದಾನ ಶಿಬಿರ, ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಾರು ಜನ ಭಾಗವಹಿಸಿ, ವೈದ್ಯರಿಂದ ತಪಾಸಣೆ ಮಾಡಿಸಿಕೊಂಡರು.</p>.<p>Quote - ಆಡಂಬರದ ಮದುವೆಗಳಿಂದ ದುಂದು ವೆಚ್ಚವಾಗಿ ಪೋಷಕರು ಸಾಲಗಾರರಾಗುತ್ತಾರೆ. ಇಂಥಹ ಉಚಿತ ಸಾಮೂಹಿಕ ವಿವಾಹಗಳಿಂದ ನೂರಾರು ಕುಟುಂಬಕ್ಕೆ ಸಹಕಾರಿಯಾಗುತ್ತವೆ ಭಾರತಿ ವಿಷ್ಣುವರ್ಧನ್ ನಟಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ‘ಮಠಮಾನ್ಯಗಳು ಉಚಿತವಾಗಿ ಸಾಮೂಹಿಕ ವಿವಾಹ ಹಮ್ಮಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ’ ಎಂದು ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಹೇಳಿದರು.</p>.<p>ತಾಲ್ಲೂಕಿನ ನಂದಿಪುರದಲ್ಲಿ ಬುಧವಾರ ಶ್ರೀಗುರು ದೊಡ್ಡಬಸವೇಶ್ವರ 42ನೇ ವರ್ಷದ ರಥೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ನವ ವಧುವರರು ಪರಸ್ಪರ ಅರಿತುಕೊಂಡು ಬದುಕು ಸಾಗಿಸಬೇಕು, ಒಬ್ಬರು ಕೋಪಿಸಿಕೊಂಡಾಗ ಮತ್ತೊಬ್ಬರು ಶಾಂತರಾಗಬೇಕು ಆಗ ಸಂಸಾರ ಸುಖಮಯವಾಗಿರುತ್ತದೆ’ ಎಂದು ತಿಳಿಹೇಳಿದರು.</p>.<p>‘ಶ್ರೀಮಠದಿಂದ ಪಡೆದ ಗುರು ಚರಂತಾರ್ಯಶ್ರೀ ಪ್ರಶಸ್ತಿ ನಿಮ್ಮ ವಿಷ್ಣುವರ್ಧನ್ಗೆ ಸಲ್ಲುತ್ತದೆ, ಚರಂತೇಶ್ವರರ ಆಶೀರ್ವಾದದಿಂದಲೇ ಎಲ್ಲ ಕಾರ್ಯಕ್ರಮಗಳು ಸುಗಮವಾಗಿ ಸಾಗುತ್ತಿವೆ’ ಎಂದು ತಿಳಿಸಿದರು.</p>.<p>ಶಾಸಕ ಕೆ.ನೇಮರಾಜ ನಾಯ್ಕ ಅವರ ಪತ್ನಿ ವಾಣಿ ನೇಮರಾಜನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. 29ಜೋಡಿ ವಧುವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. </p>.<p>ನಂದಿಪುರದ ಮಹೇಶ್ವರ ಸ್ವಾಮೀಜಿ, ಉತ್ತಂಗಿ ಸೋಮಶಂಕರಸ್ವಾಮೀಜಿ, ಗುರುಪಾದ ದೇವರಮಠದ ಮಲ್ಲಿಕಾರ್ಜುನ ಶಿವಾಚಾರ್ಯ, ಅಭಿನವ ಚರಂತೇಶ್ವರ ಶಿವಾಚಾರ್ಯ, ಬೆಣ್ಣಿಹಳ್ಳಿಯ ಪಂಚಾಕ್ಷರಸ್ವಾಮೀಜಿ, ಹಂಪಸಾಗರದ ನವಲಿ ಹಿರೇಮಠದ ಶಿವಲಿಂಗರುದ್ರಮುನಿಸ್ವಾಮೀಜಿ, ತೆಗ್ಗಿನಮಠದ ವರಸಾದ್ಯೋಜಾತ ಶಿವಾಚಾರ್ಯ, ಕೂಡ್ಲಿಗಿ ಹಿರೇಮಠದ ಪ್ರಶಾಂತಸಾಗರ ಸ್ವಾಮೀಜಿ, ಹಿರೇಮಲ್ಲನಕೇರಿಯ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ, ಮಂಡಲ ಅಧ್ಯಕ್ಷ ಬೆಣ್ಣೆಕಲ್ಲು ಪ್ರಕಾಶ್, ಕನಕಪ್ಪ, ದೊಡ್ಡಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಬನ್ನಿಗೋಳ ವೆಂಕಣ್ಣ, ನಂದಿಪುರ ಯಮುನಪ್ಪ, ಕರಿಬಸವನಗೌಡ, ಎಚ್.ಎಂ.ಗುರುಬಸವರಾಜ, ಕೆ.ಶಾರದಾ ಮಂಜುನಾಥ ಇದ್ದರು.</p>.<p>ರಥೋತ್ಸವ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ, ರಕ್ತದಾನ ಶಿಬಿರ, ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಾರು ಜನ ಭಾಗವಹಿಸಿ, ವೈದ್ಯರಿಂದ ತಪಾಸಣೆ ಮಾಡಿಸಿಕೊಂಡರು.</p>.<p>Quote - ಆಡಂಬರದ ಮದುವೆಗಳಿಂದ ದುಂದು ವೆಚ್ಚವಾಗಿ ಪೋಷಕರು ಸಾಲಗಾರರಾಗುತ್ತಾರೆ. ಇಂಥಹ ಉಚಿತ ಸಾಮೂಹಿಕ ವಿವಾಹಗಳಿಂದ ನೂರಾರು ಕುಟುಂಬಕ್ಕೆ ಸಹಕಾರಿಯಾಗುತ್ತವೆ ಭಾರತಿ ವಿಷ್ಣುವರ್ಧನ್ ನಟಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>