<p>ಕುಡತಿನಿ (ತೋರಣಗಲ್ಲು): ‘ಪಟ್ಟಣದ ಸುತ್ತಲಿನ ಸಣ್ಣ, ಬೃಹತ್ ಕೈಗಾರಿಕೆಗಳಿಂದ ನಿರಂತರವಾಗಿ ಕಲುಷಿತ ದೂಳು ಬರುತ್ತಿದೆ. ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಕೈಗಾರಿಕೆಗಳಲ್ಲಿ ದೂಳು ನಿಯಂತ್ರಣ ಸಾಧನಗಳನ್ನು ಅಳವಡಿಸಿಕೊಳ್ಳುವಂತೆ ಮಾಲೀಕರಿಗೆ ಆದೇಶ ನೀಡಲಾಗುವುದು’ ಎಂದು ಕುಡತಿನಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಸಮ್ಮ ವಂದವಾಗಿಲ ಚಂದ್ರಪ್ಪ ಹೇಳಿದರು.</p>.<p>ಇಲ್ಲಿನ ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪಟ್ಟಣದಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ಮೂಲಸೌಲಭ್ಯಗಳಿಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಕುಡತಿನಿ ಪಟ್ಟಣದಲ್ಲಿ ಭೂಸಂತ್ರಸ್ತರು 620 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲು ಸಂಸದರ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗುವುದು’ ಎಂದರು.</p>.<p>ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕನ್ನಿಕೇರಿಪಂಪಾಪತಿ, ಸದಸ್ಯರಾದ ವಿ.ರಾಜಶೇಖರ್, ವೆಂಕರಮಣಬಾಬು, ರಾಮಲಿಂಗಪ್ಪ, ಮುಖಂಡರಾದ ವಿಸಿಕೆ ಚಂದ್ರಪ್ಪ, ಗೋಪಾಲ್, ಕೃಷ್ಣಪ್ಪ, ಜಿನ್ನದಭೀಮೇಶ್, ವಿ.ಬಸವರಾಜ, ಈರಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಡತಿನಿ (ತೋರಣಗಲ್ಲು): ‘ಪಟ್ಟಣದ ಸುತ್ತಲಿನ ಸಣ್ಣ, ಬೃಹತ್ ಕೈಗಾರಿಕೆಗಳಿಂದ ನಿರಂತರವಾಗಿ ಕಲುಷಿತ ದೂಳು ಬರುತ್ತಿದೆ. ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಕೈಗಾರಿಕೆಗಳಲ್ಲಿ ದೂಳು ನಿಯಂತ್ರಣ ಸಾಧನಗಳನ್ನು ಅಳವಡಿಸಿಕೊಳ್ಳುವಂತೆ ಮಾಲೀಕರಿಗೆ ಆದೇಶ ನೀಡಲಾಗುವುದು’ ಎಂದು ಕುಡತಿನಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಸಮ್ಮ ವಂದವಾಗಿಲ ಚಂದ್ರಪ್ಪ ಹೇಳಿದರು.</p>.<p>ಇಲ್ಲಿನ ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪಟ್ಟಣದಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ಮೂಲಸೌಲಭ್ಯಗಳಿಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಕುಡತಿನಿ ಪಟ್ಟಣದಲ್ಲಿ ಭೂಸಂತ್ರಸ್ತರು 620 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲು ಸಂಸದರ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗುವುದು’ ಎಂದರು.</p>.<p>ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕನ್ನಿಕೇರಿಪಂಪಾಪತಿ, ಸದಸ್ಯರಾದ ವಿ.ರಾಜಶೇಖರ್, ವೆಂಕರಮಣಬಾಬು, ರಾಮಲಿಂಗಪ್ಪ, ಮುಖಂಡರಾದ ವಿಸಿಕೆ ಚಂದ್ರಪ್ಪ, ಗೋಪಾಲ್, ಕೃಷ್ಣಪ್ಪ, ಜಿನ್ನದಭೀಮೇಶ್, ವಿ.ಬಸವರಾಜ, ಈರಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>