<p><strong>ಬಳ್ಳಾರಿ</strong>: ರೈತರಿಂದ ಪಡೆಯುವ ಹಾಲಿನ ಖರೀದಿ ದರವನ್ನು ‘ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟ’ ₹1.50ರಷ್ಟು ಕಡಿಮೆ ಮಾಡಿದ್ದು, ರೈತರಿಂದ ಆಕ್ಷೇಪ ವ್ಯಕ್ತವಾಗಿದೆ.</p><p>ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ರಾಬಕೊವಿ ‘ಸದ್ಯ ಒಕ್ಕೂಟ ತೀವ್ರ ನಷ್ಟದಲ್ಲಿದೆ. ಇದನ್ನು ಸರಿದೂಗಿಸಲು ರೈತರಿಂದ ಖರೀದಿಸುತ್ತಿರುವ ಹಾಲಿನ ದರ ಇಳಿಸಲಾಗಿದೆ. ಆದರೆ, ಇದು ತಾತ್ಕಾಲಿಕ’ ಎಂದು ಒಕ್ಕೂಟ ಹೇಳಿದೆ.</p><p>‘ದೇಶದಲ್ಲಿರುವ ಎಲ್ಲ ಒಕ್ಕೂಟಗಳಲ್ಲೂ ಇದು ಸಾಮಾನ್ಯ ಪ್ರಕ್ರಿಯೆ. ಹಾಲು ಉತ್ಪಾದನೆ ಹೆಚ್ಚಾದಾಗೆಲ್ಲ ಇಂಥ ಸಮಸ್ಯೆ ಎದುರಾಗುತ್ತದೆ. ನಮಗೆ ಹಾಲಿನ ಮಾರಾಟ ದರವನ್ನು ಹೆಚ್ಚಿಸಲು ಅವಕಾಶವಿಲ್ಲ. ಅಂಥ ಸಂದರ್ಭದಲ್ಲಿ ನಷ್ಟ ಉಂಟಾಗುತ್ತದೆ. ದರ ಇಳಿಸದೇ ಹೋಗಿದ್ದಿದ್ದರೆ ನಷ್ಟ ಬೆಳೆಯುತ್ತಾ ಹೋಗುತ್ತಿತ್ತು. ಆಗ ಏಕಾಏಕಿ ₹3–4 ಇಳಿಸಬೇಕಾದ ಪರಿಸ್ಥಿತಿ ಬರುತ್ತಿತ್ತು. ಕೆಲವು ಒಕ್ಕೂಟಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರ ನಮಗಿಂತಲೂ ಕಡಿಮೆ ಇದೆ. ಒಕ್ಕೂಟದಿಂದ ತೆಲಂಗಾಣಕ್ಕೆ ಹಾಲು ಪೂರೈಕೆ ಆರಂಭವಾದರೆ, ನಷ್ಟ ಸರಿದೂಗಿಸಿಕೊಳ್ಳಬಹುದು. ರೈತರಿಗೂ ಲಾಭಾಂಶ ನೀಡಲಾಗುವುದು‘ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪೀರ್ಯ ನಾಯಕ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ರೈತರಿಂದ ಪಡೆಯುವ ಹಾಲಿನ ಖರೀದಿ ದರವನ್ನು ‘ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟ’ ₹1.50ರಷ್ಟು ಕಡಿಮೆ ಮಾಡಿದ್ದು, ರೈತರಿಂದ ಆಕ್ಷೇಪ ವ್ಯಕ್ತವಾಗಿದೆ.</p><p>ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ರಾಬಕೊವಿ ‘ಸದ್ಯ ಒಕ್ಕೂಟ ತೀವ್ರ ನಷ್ಟದಲ್ಲಿದೆ. ಇದನ್ನು ಸರಿದೂಗಿಸಲು ರೈತರಿಂದ ಖರೀದಿಸುತ್ತಿರುವ ಹಾಲಿನ ದರ ಇಳಿಸಲಾಗಿದೆ. ಆದರೆ, ಇದು ತಾತ್ಕಾಲಿಕ’ ಎಂದು ಒಕ್ಕೂಟ ಹೇಳಿದೆ.</p><p>‘ದೇಶದಲ್ಲಿರುವ ಎಲ್ಲ ಒಕ್ಕೂಟಗಳಲ್ಲೂ ಇದು ಸಾಮಾನ್ಯ ಪ್ರಕ್ರಿಯೆ. ಹಾಲು ಉತ್ಪಾದನೆ ಹೆಚ್ಚಾದಾಗೆಲ್ಲ ಇಂಥ ಸಮಸ್ಯೆ ಎದುರಾಗುತ್ತದೆ. ನಮಗೆ ಹಾಲಿನ ಮಾರಾಟ ದರವನ್ನು ಹೆಚ್ಚಿಸಲು ಅವಕಾಶವಿಲ್ಲ. ಅಂಥ ಸಂದರ್ಭದಲ್ಲಿ ನಷ್ಟ ಉಂಟಾಗುತ್ತದೆ. ದರ ಇಳಿಸದೇ ಹೋಗಿದ್ದಿದ್ದರೆ ನಷ್ಟ ಬೆಳೆಯುತ್ತಾ ಹೋಗುತ್ತಿತ್ತು. ಆಗ ಏಕಾಏಕಿ ₹3–4 ಇಳಿಸಬೇಕಾದ ಪರಿಸ್ಥಿತಿ ಬರುತ್ತಿತ್ತು. ಕೆಲವು ಒಕ್ಕೂಟಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರ ನಮಗಿಂತಲೂ ಕಡಿಮೆ ಇದೆ. ಒಕ್ಕೂಟದಿಂದ ತೆಲಂಗಾಣಕ್ಕೆ ಹಾಲು ಪೂರೈಕೆ ಆರಂಭವಾದರೆ, ನಷ್ಟ ಸರಿದೂಗಿಸಿಕೊಳ್ಳಬಹುದು. ರೈತರಿಗೂ ಲಾಭಾಂಶ ನೀಡಲಾಗುವುದು‘ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪೀರ್ಯ ನಾಯಕ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>