<p><strong>ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ‘</strong>ಹಳೆಕೋಟೆ ಗ್ರಾಮದ ಮರಿಸ್ವಾಮಿ ಮಠದ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿದ್ದು, ಇದಕ್ಕೆ ಕಲ್ಲು ಗಣಿಕಾರಿಕೆಗಾಗಿ ನಡೆದ ಸ್ಫೋಟವೇ ಕಾರಣ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ಈಚೆಗೆ ಬೆಟ್ಟದಲ್ಲಿ ನಡೆದ ಕಲ್ಲು ಗಣಿಗಾರಿಕೆ ಸ್ಫೋಟದಿಂದ ಕೆರೆಯ ಮೇಲೆಲ್ಲ ಬಿಳಿ ಬೂದಿ ಹರಡಿತ್ತು. ನಂತರದ ದಿನಗಳಲ್ಲಿ ಮೀನುಗಳು ಸಾಯಲು ಆರಂಭಿಸಿದವು. ಮೃತ ಮೀನುಗಳನ್ನು ನಾಯಿ, ಕಾಡುಪ್ರಾಣಿ ಮತ್ತು ಪಕ್ಷಿಗಳು ಕಚ್ಚಿಕೊಂಡು ಒಯ್ಯುತ್ತಿದ್ದು, ಅವುಗಳಿಗೂ ಅಪಾಯ ಇದೆ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>‘ಮಠಕ್ಕೆ ಅಂಟಿಕೊಂಡಿರುವ ಬೆಟ್ಟಗಳಲ್ಲಿ ಇತ್ತೀಚೆಗೆ ನಡೆಸಿದ ಭಾರಿ ಪ್ರಮಾಣದ ರಾಸಾಯನಿಕ ಸ್ಫೋಟದಿಂದ ಮೀನುಗಳು ಸತ್ತಿರುವ ಶಂಕೆ ಇದೆ. ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕು' ಎಂದು ಮರಿಸ್ವಾಮಿ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ ಆಗ್ರಹಿಸಿದರು.</p>.<p>‘ಕೆರೆಯಲ್ಲಿನ ಮೀನುಗಳು ಸತ್ತ ಬಗ್ಗೆ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುತ್ತೇನೆ’ ಎಂದು ಹಳೆಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ): ‘</strong>ಹಳೆಕೋಟೆ ಗ್ರಾಮದ ಮರಿಸ್ವಾಮಿ ಮಠದ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿದ್ದು, ಇದಕ್ಕೆ ಕಲ್ಲು ಗಣಿಕಾರಿಕೆಗಾಗಿ ನಡೆದ ಸ್ಫೋಟವೇ ಕಾರಣ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ಈಚೆಗೆ ಬೆಟ್ಟದಲ್ಲಿ ನಡೆದ ಕಲ್ಲು ಗಣಿಗಾರಿಕೆ ಸ್ಫೋಟದಿಂದ ಕೆರೆಯ ಮೇಲೆಲ್ಲ ಬಿಳಿ ಬೂದಿ ಹರಡಿತ್ತು. ನಂತರದ ದಿನಗಳಲ್ಲಿ ಮೀನುಗಳು ಸಾಯಲು ಆರಂಭಿಸಿದವು. ಮೃತ ಮೀನುಗಳನ್ನು ನಾಯಿ, ಕಾಡುಪ್ರಾಣಿ ಮತ್ತು ಪಕ್ಷಿಗಳು ಕಚ್ಚಿಕೊಂಡು ಒಯ್ಯುತ್ತಿದ್ದು, ಅವುಗಳಿಗೂ ಅಪಾಯ ಇದೆ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>‘ಮಠಕ್ಕೆ ಅಂಟಿಕೊಂಡಿರುವ ಬೆಟ್ಟಗಳಲ್ಲಿ ಇತ್ತೀಚೆಗೆ ನಡೆಸಿದ ಭಾರಿ ಪ್ರಮಾಣದ ರಾಸಾಯನಿಕ ಸ್ಫೋಟದಿಂದ ಮೀನುಗಳು ಸತ್ತಿರುವ ಶಂಕೆ ಇದೆ. ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕು' ಎಂದು ಮರಿಸ್ವಾಮಿ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ ಆಗ್ರಹಿಸಿದರು.</p>.<p>‘ಕೆರೆಯಲ್ಲಿನ ಮೀನುಗಳು ಸತ್ತ ಬಗ್ಗೆ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುತ್ತೇನೆ’ ಎಂದು ಹಳೆಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>