<p><strong>ಬಳ್ಳಾರಿ: </strong>ಜಿಲ್ಲಾ ಖನಿಜ ನಿಧಿ (ಡಿಎಂಎಫ್) ಹಂಚಿಕೆ ವಿಷಯವಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹಾಗೂ ಸಂಡೂರು ಕ್ಷೇತ್ರದ ಶಾಸಕ ತುಕಾರಾಂ ಏಕ ವಚನದಲ್ಲಿ ಕಿತ್ತಾಡಿಕೊಂಡು, ಶಾಸಕರು ಸಭೆಯಿಂದ ಹೊರನಡೆದ ಪ್ರಸಂಗ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.</p>.<p>ಅಧಿಕಾರಿಗಳೆದುರೇ ಆನಂದ್ಸಿಂಗ್ ಮತ್ತು ತುಕಾರಾಂ ಸುಮಾರು ಅರ್ಧಗಂಟೆ ಕಿತ್ತಾಡಿದರು. ವಿಧಾನಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ ಮತ್ತು ಅಲ್ಲಂ ವೀರಭದ್ರಪ್ಪ ಅವರು, ಇಬ್ಬರನ್ನೂ ಸಮಾಧಾನಪಡಿಸಲು ನಡೆಸಿದ ಪ್ರಯತ್ನ ಫಲಿಸಲಿಲ್ಲ.</p>.<p>ತಮ್ಮ ಕ್ಷೇತ್ರಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಕೋರ್ಟ್ ಮೊರೆ ಹೋಗುವುದಾಗಿ ಕೂಗಾಡುತ್ತಾ ತುಕಾರಾಂ ಸಭೆಯಿಂದ ಹೊರನಡೆದರು. ಆನಂದ್ಸಿಂಗ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಸಭೆ ಸೇರಿತ್ತು.</p>.<p>ಜಿಲ್ಲಾ ಖನಿಜ ನಿಧಿ ಅನುದಾನದಡಿ ನಡೆಯುತ್ತಿರುವ, ನಡೆಯಲಿರುವ ಕಾಮಗಾರಿಗಳ ಪ್ರಗತಿ ಕುರಿತು ಚರ್ಚೆ ಆಗುತ್ತಿತ್ತು. ಆ ಸಮಯದಲ್ಲಿ ತುಕಾರಾಂ, ‘ಗಣಿಗಾರಿಕೆಯಿಂದ ಹೆಚ್ಚು ಬಾಧಿತವಾಗಿರುವ ಸಂಡೂರಿಗೆ ಡಿಎಂಎಫ್ ಮಾರ್ಗಸೂಚಿಯಂತೆ ಶೇ 60ರಷ್ಟು ಅನುದಾನ ಹಂಚಿಕೆ ಮಾಡದೆ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.</p>.<p>‘ಕ್ರಿಯಾ ಯೋಜನೆ ಸಿದ್ಧವಾಗಿದ್ದು ನಿಮ್ಮ (ಕಾಂಗ್ರೆಸ್) ಸರ್ಕಾರದಲ್ಲೇ. ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ. ಆಗ ಕಣ್ಣು ಮುಚ್ಚಿ ಕುಳಿತುಕೊಂಡು, ಈಗ ಕ್ಯಾತೆ ತೆಗೆಯುವುದು ಸರಿಯಲ್ಲ’ ಎಂದು ಆನಂದ್ ಸಿಂಗ್ ಕೂಗಾಡಿದರು.</p>.<p>‘ಅನುದಾನ ಹಂಚಿಕೆಯಲ್ಲಿ ರಾಜಕಾರಣ ನಡೆಯುತ್ತಿದೆ’ ಎಂದು ತುಕಾರಾಂ ಆರೋಪಿಸಿದರು. ಈ ಹಂತದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ತಾರಕಕ್ಕೆ ಹೋಗಿ<br />ಕೊನೆಗೆ ಶಾಸಕರು ಸಭೆಯಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಜಿಲ್ಲಾ ಖನಿಜ ನಿಧಿ (ಡಿಎಂಎಫ್) ಹಂಚಿಕೆ ವಿಷಯವಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹಾಗೂ ಸಂಡೂರು ಕ್ಷೇತ್ರದ ಶಾಸಕ ತುಕಾರಾಂ ಏಕ ವಚನದಲ್ಲಿ ಕಿತ್ತಾಡಿಕೊಂಡು, ಶಾಸಕರು ಸಭೆಯಿಂದ ಹೊರನಡೆದ ಪ್ರಸಂಗ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.</p>.<p>ಅಧಿಕಾರಿಗಳೆದುರೇ ಆನಂದ್ಸಿಂಗ್ ಮತ್ತು ತುಕಾರಾಂ ಸುಮಾರು ಅರ್ಧಗಂಟೆ ಕಿತ್ತಾಡಿದರು. ವಿಧಾನಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ ಮತ್ತು ಅಲ್ಲಂ ವೀರಭದ್ರಪ್ಪ ಅವರು, ಇಬ್ಬರನ್ನೂ ಸಮಾಧಾನಪಡಿಸಲು ನಡೆಸಿದ ಪ್ರಯತ್ನ ಫಲಿಸಲಿಲ್ಲ.</p>.<p>ತಮ್ಮ ಕ್ಷೇತ್ರಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಕೋರ್ಟ್ ಮೊರೆ ಹೋಗುವುದಾಗಿ ಕೂಗಾಡುತ್ತಾ ತುಕಾರಾಂ ಸಭೆಯಿಂದ ಹೊರನಡೆದರು. ಆನಂದ್ಸಿಂಗ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಸಭೆ ಸೇರಿತ್ತು.</p>.<p>ಜಿಲ್ಲಾ ಖನಿಜ ನಿಧಿ ಅನುದಾನದಡಿ ನಡೆಯುತ್ತಿರುವ, ನಡೆಯಲಿರುವ ಕಾಮಗಾರಿಗಳ ಪ್ರಗತಿ ಕುರಿತು ಚರ್ಚೆ ಆಗುತ್ತಿತ್ತು. ಆ ಸಮಯದಲ್ಲಿ ತುಕಾರಾಂ, ‘ಗಣಿಗಾರಿಕೆಯಿಂದ ಹೆಚ್ಚು ಬಾಧಿತವಾಗಿರುವ ಸಂಡೂರಿಗೆ ಡಿಎಂಎಫ್ ಮಾರ್ಗಸೂಚಿಯಂತೆ ಶೇ 60ರಷ್ಟು ಅನುದಾನ ಹಂಚಿಕೆ ಮಾಡದೆ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.</p>.<p>‘ಕ್ರಿಯಾ ಯೋಜನೆ ಸಿದ್ಧವಾಗಿದ್ದು ನಿಮ್ಮ (ಕಾಂಗ್ರೆಸ್) ಸರ್ಕಾರದಲ್ಲೇ. ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ. ಆಗ ಕಣ್ಣು ಮುಚ್ಚಿ ಕುಳಿತುಕೊಂಡು, ಈಗ ಕ್ಯಾತೆ ತೆಗೆಯುವುದು ಸರಿಯಲ್ಲ’ ಎಂದು ಆನಂದ್ ಸಿಂಗ್ ಕೂಗಾಡಿದರು.</p>.<p>‘ಅನುದಾನ ಹಂಚಿಕೆಯಲ್ಲಿ ರಾಜಕಾರಣ ನಡೆಯುತ್ತಿದೆ’ ಎಂದು ತುಕಾರಾಂ ಆರೋಪಿಸಿದರು. ಈ ಹಂತದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ತಾರಕಕ್ಕೆ ಹೋಗಿ<br />ಕೊನೆಗೆ ಶಾಸಕರು ಸಭೆಯಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>