‘ಟಿಎಸ್ಪಿ ಹಳೆಯ ಕಟ್ಟಡದ ನವೀಕರಣ, ಅಗತ್ಯ ಮೂಲ ಸೌಲಭ್ಯ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ ಸಿದ್ಧಪಡಿಸಿ, ಆದಷ್ಟು ಶೀಘ್ರ ಕೆಲಸ ಪ್ರಾರಂಭಿಸಬೇಕು’ ಎಂದು ಸಚಿವರು, ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಅವರು ಜೋಳದರಾಶಿ ಗುಡ್ಡದಲ್ಲಿ ನಡೆಯುತ್ತಿರುವ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.