<p><strong>ಬಳ್ಳಾರಿ: </strong>ನಗರದ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಐಸೊಲೆಷನ್ ವಾರ್ಡಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸೋಂಕಿತರ ಅಹವಾಲುಗಳನ್ನು ಆಲಿಸಿದರು.</p>.<p>ಪಿಪಿಇ ಕಿಟ್ ಧರಿಸಿ ವಿಮ್ಸ್ ನಿರ್ದೇಶಕ ಡಾ.ದೇವಾನಂದ ಅವರೊಂದಿಗೆ ತೆರಳಿದ ಸಚಿವರು ಸೋಂಕಿತರಿಗೆ ಧೈರ್ಯ ತುಂಬಿದರು.</p>.<p>ವಾರ್ಡ್ನಲ್ಲಿಗುಣಮಟ್ಟದ ಊಟ, ಚಿಕಿತ್ಸೆ ಕೊಡಲಾಗುತ್ತಿದೆ ಮತ್ತು ಸ್ವಚ್ಛತೆ ನಿರ್ವಹಣೆಯೂ ಉತ್ತಮವಾಗಿದೆ ಎಂದರು.</p>.<p>ನಂತರ ಸಚಿವರು ಸ್ಥಳದಲ್ಲಿ ಉಪಸ್ಥಿತರಿದ್ದ ಎಲ್ಲ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಇದ್ದರು.</p>.<p><strong>ನಿಯಮಪಾಲಿಸದಿದ್ದರೆ ಸ್ವಯಂಪ್ರೇರಿತ ದೂರು ದಾಖಲಿಸಿ: ಸಚಿವ ಸಿಂಗ್</strong><br /><strong>ಬಳ್ಳಾರಿ:</strong> ಸಾರ್ವಜನಿಕ ಸ್ಥಳಗಳಲ್ಲಿ ಸೋಂಕು ನಿಯಂತ್ರಣ ನಿಯಮಗಳನ್ನುಪಾಲಿಸದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಮತ್ತು ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು. ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರಿದ ಸಂದರ್ಭದಲ್ಲಿ ಈ ನಿಯಮಗಳ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕಿತ ರ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕೊರೊನಾ ವಾರಿಯರ್ಸ್ಗಳು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಅವರಿಗೆ ಧೈರ್ಯ ತುಂಬಿರುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ನಗರದ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಐಸೊಲೆಷನ್ ವಾರ್ಡಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸೋಂಕಿತರ ಅಹವಾಲುಗಳನ್ನು ಆಲಿಸಿದರು.</p>.<p>ಪಿಪಿಇ ಕಿಟ್ ಧರಿಸಿ ವಿಮ್ಸ್ ನಿರ್ದೇಶಕ ಡಾ.ದೇವಾನಂದ ಅವರೊಂದಿಗೆ ತೆರಳಿದ ಸಚಿವರು ಸೋಂಕಿತರಿಗೆ ಧೈರ್ಯ ತುಂಬಿದರು.</p>.<p>ವಾರ್ಡ್ನಲ್ಲಿಗುಣಮಟ್ಟದ ಊಟ, ಚಿಕಿತ್ಸೆ ಕೊಡಲಾಗುತ್ತಿದೆ ಮತ್ತು ಸ್ವಚ್ಛತೆ ನಿರ್ವಹಣೆಯೂ ಉತ್ತಮವಾಗಿದೆ ಎಂದರು.</p>.<p>ನಂತರ ಸಚಿವರು ಸ್ಥಳದಲ್ಲಿ ಉಪಸ್ಥಿತರಿದ್ದ ಎಲ್ಲ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಇದ್ದರು.</p>.<p><strong>ನಿಯಮಪಾಲಿಸದಿದ್ದರೆ ಸ್ವಯಂಪ್ರೇರಿತ ದೂರು ದಾಖಲಿಸಿ: ಸಚಿವ ಸಿಂಗ್</strong><br /><strong>ಬಳ್ಳಾರಿ:</strong> ಸಾರ್ವಜನಿಕ ಸ್ಥಳಗಳಲ್ಲಿ ಸೋಂಕು ನಿಯಂತ್ರಣ ನಿಯಮಗಳನ್ನುಪಾಲಿಸದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಮತ್ತು ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು. ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರಿದ ಸಂದರ್ಭದಲ್ಲಿ ಈ ನಿಯಮಗಳ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕಿತ ರ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕೊರೊನಾ ವಾರಿಯರ್ಸ್ಗಳು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಅವರಿಗೆ ಧೈರ್ಯ ತುಂಬಿರುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>