ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಆನಂದ್ ಸಿಂಗ್‌ಗೆ ಪಿತೃ ವಿಯೋಗ

Last Updated 18 ಜುಲೈ 2021, 7:59 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ (84) ಭಾನುವಾರ ಇಲ್ಲಿನ ರಾಣಿಪೇಟೆಯ ಅವರ ನಿವಾಸದಲ್ಲಿ ನಿಧನ ಹೊಂದಿದರು.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಮನೆಗೆ ಮರಳಿದ್ದರು. ಭಾನುವಾರ ಪುನಃ ಅವರ ಆರೋಗ್ಯದಲ್ಲಿ ಏರುಪೇರಾಗಿ ಮಧ್ಯಾಹ್ನ 12ಕ್ಕೆ ನಿಧನರಾದರು. ಸಂಜೆ ನಾಲ್ಕು ಗಂಟೆಗೆ ರಾಣಿಪೇಟೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂದವರು ಪ್ರಜಾವಾಣಿಗೆ ತಿಳಿಸಿದ್ದಾರೆ.

ಮೂಲತಃ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲ್ಲೂಕಿನ ಶಂಕರ್ ಸಿಂಗ್ ಕ್ಯಾಂಪಿನ ನಿವಾಸಿಯಾದ ಪೃಥ್ವಿರಾಜ್ ಸಿಂಗ್ ಅವರು ಸಾರಿಗೆ ಉದ್ಯಮ ನಡೆಸುತ್ತಿದ್ದರು. ಮೃತರ ಮೊದಲ ಪತ್ನಿ ಅನೇಕ ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಅವರಿಗೆ ಇಬ್ಬರು ಗಂಡು, ಒಬ್ಬ ಹೆಣ್ಣು ಮಗಳಿದ್ದಾರೆ. ಎರಡನೇ ಪತ್ನಿ ಹಾಗೂ ಅವರ ಮಗ ಆನಂದ್ ಸಿಂಗ್ ಇದ್ದಾರೆ.

ತಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಅವರು ಎಲ್ಲ ಕೆಲಸ ಬದಿಗೊತ್ತಿ, ಅನೇಕ ದಿನಗಳಿಂದ ಕ್ಷೇತ್ರದಿಂದ ದೂರ ಉಳಿದು ಅವರೊಂದಿಗೆ ಆಸ್ಪತ್ರೆಯಲ್ಲಿಯೇ ಇದ್ದರು.

ಪೃಥ್ವಿರಾಜ್ ಸಿಂಗ್ ಅವರು ಅವರ ಎರಡು ಕಣ್ಣುಗಳನ್ನು ಆಸ್ಪತ್ರೆಗೆ ದಾನ ಮಾಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT