ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಎಚ್.ಸಿ.ಮಹದೇವಪ್ಪ ಸೇವೆ ರಾಜ್ಯಕ್ಕೆ ಅಗತ್ಯ: ಸಿ.ಮಾರಪ್ಪ

Published 6 ಫೆಬ್ರುವರಿ 2024, 15:22 IST
Last Updated 6 ಫೆಬ್ರುವರಿ 2024, 15:22 IST
ಅಕ್ಷರ ಗಾತ್ರ

ಕಾನಹೊಸಹಳ್ಳಿ: ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ.ಮಹದೇವಪ್ಪ ಅವರ ಸೇವೆ ರಾಜ್ಯಕ್ಕೆ ಅಗತ್ಯವಿದ್ದು, ಅವರನ್ನು ಕೇಂದ್ರಕ್ಕೆ ಕಳುಹಿಸದೆ ರಾಜ್ಯದಲ್ಲಿಯೇ ಅವರ ಸೇವೆಯನ್ನು ಮುಂದುವರೆಸಬೇಕು ಎಂದು ಛಲವಾದಿ ಮಹಾಸಭದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಮಾರಪ್ಪ ಒತ್ತಾಯಿಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಎಚ್.ಸಿ.ಮಹಾದೇವಪ್ಪ ಅವರ ಸೇವೆ ರಾಜ್ಯದ ದೀನ, ದಲಿತರ, ಶೋಷಿತರ ಏಳ್ಗೆಗಾಗಿ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅವರಿಗೆ ಲೋಕಸಭಾ ಟಿಕೆಟ್ ನೀಡಿ ಕೇಂದ್ರಕ್ಕೆ ಕಳುಹಿಸಬೇಡಿ, ಸಚಿವ ಸ್ಥಾನದಲ್ಲೇ ಮುಂದುವರಿಸಿ ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.

ಪ್ರಧಾನ ಕಾರ್ಯದರ್ಶಿ ಆಲೂರು ಲೋಕೇಶ್, ಗೌರವಾಧ್ಯಕ್ಷ ಸಿ.ಮಹಾಲಿಂಗಪ್ಪ, ಖಜಾಂಚಿ ಸಿ.ಪ್ರಕಾಶ್, ಸದಸ್ಯರಾದ ಸಿ.ಅಶ್ವತ್ಥ, ಇಮಡಾಪುರ ಎ.ಇ.ರಾಮಾಂಜಿನಿ, ಸಿ.ಈರಣ್ಣ, ಗುಂಡುಮುಣುಗು ಸಿದ್ದಪ್ಪ, ಬೆಳ್ಳೆಕಟ್ಟೆ ಶಶಿಧರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT