<p><strong>ಬಳ್ಳಾರಿ</strong>: ಗ್ರಾಹಕರಿಗೆ ಗೊತ್ತಾಗದಂತೆ ಅವರ ಖಾತೆಗಳಿಂದ ಸಾಲ ಮಂಜೂರು ಮಾಡಿಕೊಂಡು, ಸ್ವಂತಕ್ಕೆ ಬಳಸಿದ ಆರೋಪದ ಮೇಲೆ ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಸಿದ್ದಮ್ಮನಹಳ್ಳಿಯ ಶಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. </p><p>ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕ ಹನುಮಂತರಾಯ ಗಿರಿಡ್ಡಿ ಅವರು ನೀಡಿದ ದೂರು ಆಧರಿಸಿ ಪೊಲೀಸರು ಆರೋಪಿಗಳಾದ ವ್ಯವಸ್ಥಾಪಕ ಬಿ. ನವೀನ್ ಕುಮಾರ್ ಮತ್ತು ಸಹಾಯಕ ವ್ಯವಸ್ಥಾಪಕ ಕನ್ನ ಸುರೇಶ್ ಬಾಬು ಎಂಬುವರ ವಿರುದ್ಧ ನಂಬಿಕೆ ದ್ರೋಹ, ವಂಚನೆ ಪ್ರಕರಣ ದಾಖಲಿಸಿದ್ದಾರೆ.</p><p>‘ಈ ಇಬ್ಬರೂ ಅಧಿಕಾರಿಗಳು 2022–2023ನೇ ಸಾಲಿನಲ್ಲಿ 11 ಗ್ರಾಹಕರ ಹೆಸರಿನಲ್ಲಿ ಒಟ್ಟು ₹16.55 ಲಕ್ಷ ಸಾಲ ಮಂಜೂರು ಮಾಡಿಕೊಂಡು, ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕನ್ನ ಸುರೇಶ್ ಬಾಬು ಇಸಿಒಡಿ ಸಾಲದ ಖಾತೆಗೆ ಅನಧಿಕೃತವಾಗಿ ಹಣ ಜಮಾ ಮಾಡಿ, ಪತ್ನಿ ಶ್ರೀವೇಣಿ ಅವರ ಉಳಿತಾಯ ಖಾತೆಗೆ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಗ್ರಾಹಕರಿಗೆ ಗೊತ್ತಾಗದಂತೆ ಅವರ ಖಾತೆಗಳಿಂದ ಸಾಲ ಮಂಜೂರು ಮಾಡಿಕೊಂಡು, ಸ್ವಂತಕ್ಕೆ ಬಳಸಿದ ಆರೋಪದ ಮೇಲೆ ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಸಿದ್ದಮ್ಮನಹಳ್ಳಿಯ ಶಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. </p><p>ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕ ಹನುಮಂತರಾಯ ಗಿರಿಡ್ಡಿ ಅವರು ನೀಡಿದ ದೂರು ಆಧರಿಸಿ ಪೊಲೀಸರು ಆರೋಪಿಗಳಾದ ವ್ಯವಸ್ಥಾಪಕ ಬಿ. ನವೀನ್ ಕುಮಾರ್ ಮತ್ತು ಸಹಾಯಕ ವ್ಯವಸ್ಥಾಪಕ ಕನ್ನ ಸುರೇಶ್ ಬಾಬು ಎಂಬುವರ ವಿರುದ್ಧ ನಂಬಿಕೆ ದ್ರೋಹ, ವಂಚನೆ ಪ್ರಕರಣ ದಾಖಲಿಸಿದ್ದಾರೆ.</p><p>‘ಈ ಇಬ್ಬರೂ ಅಧಿಕಾರಿಗಳು 2022–2023ನೇ ಸಾಲಿನಲ್ಲಿ 11 ಗ್ರಾಹಕರ ಹೆಸರಿನಲ್ಲಿ ಒಟ್ಟು ₹16.55 ಲಕ್ಷ ಸಾಲ ಮಂಜೂರು ಮಾಡಿಕೊಂಡು, ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕನ್ನ ಸುರೇಶ್ ಬಾಬು ಇಸಿಒಡಿ ಸಾಲದ ಖಾತೆಗೆ ಅನಧಿಕೃತವಾಗಿ ಹಣ ಜಮಾ ಮಾಡಿ, ಪತ್ನಿ ಶ್ರೀವೇಣಿ ಅವರ ಉಳಿತಾಯ ಖಾತೆಗೆ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>