ತಹಶೀಲ್ದಾರ್ ಎಸ್.ಬಿ.ಕೂಡಲಗಿ ಮಾತನಾಡಿ, ತಾಲ್ಲೂಕಿನ ರಾವಿಹಾಳ್, ರಾರಾವಿ, ಸಿರಿಗೇರಿ, ಕರೂರು, ತೆಕ್ಕಲಕೋಟೆಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು. ತಾಲ್ಲೂಕು ಪಂಚಾಯ್ತಿ ಇಒ ಶಿವಪ್ಪ ಸುಭೇದಾರ್, ಪೌರಾಯುಕ್ತ ಪ್ರೇಮ್ ಚಾರ್ಲ್ಸ್, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ದೇವರಾಜ್, ಬಿಇಒ ಪಿ.ಡಿ.ಭಜಂತ್ರಿ ಇದ್ದರು.