<p>ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು ಒಂದುವರೆ ವರ್ಷವಾಗುತ್ತ ಬಂದಿದೆ. ಕುಮಾರಸ್ವಾಮಿಯವರ ಆಡಳಿತ ವೈಖರಿ ಬೇಸತ್ತು ಶಾಸಕರು ರಾಜೀನಾಮೆ ನೀಡಿದ್ದಾರೆ. ಆದರೆ, ಅದೊಂದೆ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಂದುಕೊಳ್ಳುವಂತಿಲ್ಲ. ಹೀಗಾಗಿಯೇ ಸ್ಪೀಕರ್ ರಮೇಶ ಕುಮಾರ ಅನರ್ಹಗೊಳಿಸಿದ್ದಾರೆ. ಅವರ ನಿರ್ಧಾರ ತಪ್ಪಿಲ್ಲ.</p>.<p>–ಎಚ್.ಎಸ್. ನಾಗರಾಜ, ಹೋಸಪೇಟೆ</p>.<p>ವಿಜಯನಗರ ಜಿಲ್ಲೆ ಮಾಡಬೇಕೆಂಬ ಆನಂದ್ ಸಿಂಗ್ ಅವರ ಆಸೆ ಕೈಗೂಡಲಿಲ್ಲ. ಯಾರೊಬ್ಬರೂ ಅವರಿಗೆ ಸಹಕಾರ ಕೊಡಲಿಲ್ಲ. ಹೀಗಾಗಿ ಮನನೊಂದು ಅವರು ರಾಜೀನಾಮೆ ನೀಡಿದ್ದಾರೆ. ಕುತಂತ್ರ ರಾಜಕಾರಣದ ಭಾಗವಾಗಿ ಸ್ಪೀಕರ್ ಅವರನ್ನು ಅನರ್ಹಗೊಳಿಸಿದ್ದಾರೆ.<br />–ಭೂಪಾಳ್ ರಾಮಣ್ಣ, ಹೊಸಪೇಟೆ</p>.<p>ಇತರೆ ಅತೃಪ್ತ ಶಾಸಕರ ವಿಚಾರದಲ್ಲಿ ಸ್ಪೀಕರ್ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ. ಆದರೆ, ಆನಂದ್ ಸಿಂಗ್ ಜಿಂದಾಲ್ ಭೂ ಪರಭಾರೆ, ವಿಜಯನಗರ ಜಿಲ್ಲೆ ಮಾಡಬೇಕೆಂದು ರಾಜೀನಾಮೆ ಕೊಟ್ಟಿದ್ದರು. ಅವರನ್ನು ಅನರ್ಹಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.<br />–ಹಂಡಿ ಜೋಗಿ ಶಿವು, ಕಮಲಾಪುರ</p>.<p>ಶಾಸಕರನ್ನು ಅನರ್ಹಗೊಳಿಸಿರುವುದು ರಾಜಕಾರಣಿಗಳಿಗೆ ಒಂದು ತಕ್ಕ ಪಾಠ. ಹಣ, ಅಧಿಕಾರದ ಆಸೆಗಾಗಿ ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡಿದ್ದಾರೆ. ಸ್ಪೀಕರ್ ನಿರ್ಧಾರ ಉತ್ತಮವಾದುದು. ಭವಿಷ್ಯದಲ್ಲಾದರೂ ಈ ರೀತಿ ಆಗಬಾರದು.<br />–ಮಹಾಂತೇಶ ಗೆದ್ದಲಹಟ್ಟಿ, ಹಂಪಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು ಒಂದುವರೆ ವರ್ಷವಾಗುತ್ತ ಬಂದಿದೆ. ಕುಮಾರಸ್ವಾಮಿಯವರ ಆಡಳಿತ ವೈಖರಿ ಬೇಸತ್ತು ಶಾಸಕರು ರಾಜೀನಾಮೆ ನೀಡಿದ್ದಾರೆ. ಆದರೆ, ಅದೊಂದೆ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಂದುಕೊಳ್ಳುವಂತಿಲ್ಲ. ಹೀಗಾಗಿಯೇ ಸ್ಪೀಕರ್ ರಮೇಶ ಕುಮಾರ ಅನರ್ಹಗೊಳಿಸಿದ್ದಾರೆ. ಅವರ ನಿರ್ಧಾರ ತಪ್ಪಿಲ್ಲ.</p>.<p>–ಎಚ್.ಎಸ್. ನಾಗರಾಜ, ಹೋಸಪೇಟೆ</p>.<p>ವಿಜಯನಗರ ಜಿಲ್ಲೆ ಮಾಡಬೇಕೆಂಬ ಆನಂದ್ ಸಿಂಗ್ ಅವರ ಆಸೆ ಕೈಗೂಡಲಿಲ್ಲ. ಯಾರೊಬ್ಬರೂ ಅವರಿಗೆ ಸಹಕಾರ ಕೊಡಲಿಲ್ಲ. ಹೀಗಾಗಿ ಮನನೊಂದು ಅವರು ರಾಜೀನಾಮೆ ನೀಡಿದ್ದಾರೆ. ಕುತಂತ್ರ ರಾಜಕಾರಣದ ಭಾಗವಾಗಿ ಸ್ಪೀಕರ್ ಅವರನ್ನು ಅನರ್ಹಗೊಳಿಸಿದ್ದಾರೆ.<br />–ಭೂಪಾಳ್ ರಾಮಣ್ಣ, ಹೊಸಪೇಟೆ</p>.<p>ಇತರೆ ಅತೃಪ್ತ ಶಾಸಕರ ವಿಚಾರದಲ್ಲಿ ಸ್ಪೀಕರ್ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ. ಆದರೆ, ಆನಂದ್ ಸಿಂಗ್ ಜಿಂದಾಲ್ ಭೂ ಪರಭಾರೆ, ವಿಜಯನಗರ ಜಿಲ್ಲೆ ಮಾಡಬೇಕೆಂದು ರಾಜೀನಾಮೆ ಕೊಟ್ಟಿದ್ದರು. ಅವರನ್ನು ಅನರ್ಹಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.<br />–ಹಂಡಿ ಜೋಗಿ ಶಿವು, ಕಮಲಾಪುರ</p>.<p>ಶಾಸಕರನ್ನು ಅನರ್ಹಗೊಳಿಸಿರುವುದು ರಾಜಕಾರಣಿಗಳಿಗೆ ಒಂದು ತಕ್ಕ ಪಾಠ. ಹಣ, ಅಧಿಕಾರದ ಆಸೆಗಾಗಿ ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡಿದ್ದಾರೆ. ಸ್ಪೀಕರ್ ನಿರ್ಧಾರ ಉತ್ತಮವಾದುದು. ಭವಿಷ್ಯದಲ್ಲಾದರೂ ಈ ರೀತಿ ಆಗಬಾರದು.<br />–ಮಹಾಂತೇಶ ಗೆದ್ದಲಹಟ್ಟಿ, ಹಂಪಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>