<p>ಕೊಟ್ಟೂರು: ಪಟ್ಟಣದ ಕೂಡ್ಲಿಗಿ ರಸ್ತೆಯ ಮಲ್ಲನಾಯ್ಕನಹಳ್ಳಿ ಬಳಿ ಹಾದು ಹೋಗಿರುವ ವಡ್ಡರಹಳ್ಳಕ್ಕೆ ಶಾಸಕ ಕೆ.ನೇಮರಾಜನಾಯ್ಕ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಧಾರಕಾರವಾಗಿ ಮಳೆ ಬಂದರೆ ಹಳ್ಳದಲ್ಲಿ ಹಾದು ಹೋಗಿರುವ ರಸ್ತೆ ಕಾಣದಂತೆ ಜಲಾವೃತವಾಗುತ್ತದೆ. ನೀರಿನ ರಭಸ ಕಡಿಮೆಯಾಗುವವರೆಗೂ ವಾಹನ ಚಾಲಕರು ಕಾದು ನಂತರ ವಾಹನಗಳನ್ನು ಚಲಾಯಿಸುವಂತಹ ಪರಿಸ್ಥಿತಿ ಇತ್ತು. ಹಲವಾರು ವರ್ಷಗಳಿಂದ ಸೇತುವೆ ನಿರ್ಮಿಸಬೇಕೆಂಬುದು ಜನತೆಯ ಒತ್ತಾಸೆಯಾಗಿತ್ತು.</p>.<p>ಮಳೆಗಾಲದಲ್ಲಿ ರಸ್ತೆ ಕಾಣದೆ ವಾಹನಗಳು ಸಂಚರಿಸಿದಾಗ ಅವಘಡಗಳು ಸಂಭವಿಸಿದ ಉದಾಹರಣೆಗಳಿವೆ. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೇತುವೆ ನಿರ್ಮಾಣ ಕಾರ್ಯ ಇದುವರೆಗೂ ಕೈಗೂಡಿರಲಿಲ್ಲ.</p>.<p>ನಾಲ್ಕೈದು ದಿನಗಳಿಂದ ಸುರಿದ ನಿರಂತರ ಮಳೆಗೆ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂದಾಜು ವೆಚ್ಚ ಕೂಡಲೇ ನೀಡುವಂತೆ ಸೂಚಿಸಿದರು.</p>.<p>ನಂತರ ಶಾಸಕರು ಮಾತನಾಡಿ, ‘ಶೀಘ್ರದಲ್ಲಿಯೇ ಸೇತುವೆ ನಿರ್ಮಾಣ ಮಾಡಲಾಗುವುದು. ಪಟ್ಟಣದಲ್ಲಿ ಮಿನಿ ವಿಧಾನಸೌಧ, ಬಸ್ ನಿಲ್ದಾಣ ಮುಂತಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ಸರ್ಕಾರದ ಬಿಟ್ಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಅನುದಾನಗಳು ಬಿಡುಗಡೆಗೊಳಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಮುಖಂಡರಾದ ಎಂ.ಎಂ.ಜೆ.ಹರ್ಷವರ್ಧನ್, ಬೂದಿ ಶಿವಕುಮಾರ್, ಮಹಾಂತೇಶ್,ವೈ.ಮಲ್ಲಿಕಾರ್ಜುನ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ಪಟ್ಟಣದ ಕೂಡ್ಲಿಗಿ ರಸ್ತೆಯ ಮಲ್ಲನಾಯ್ಕನಹಳ್ಳಿ ಬಳಿ ಹಾದು ಹೋಗಿರುವ ವಡ್ಡರಹಳ್ಳಕ್ಕೆ ಶಾಸಕ ಕೆ.ನೇಮರಾಜನಾಯ್ಕ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಧಾರಕಾರವಾಗಿ ಮಳೆ ಬಂದರೆ ಹಳ್ಳದಲ್ಲಿ ಹಾದು ಹೋಗಿರುವ ರಸ್ತೆ ಕಾಣದಂತೆ ಜಲಾವೃತವಾಗುತ್ತದೆ. ನೀರಿನ ರಭಸ ಕಡಿಮೆಯಾಗುವವರೆಗೂ ವಾಹನ ಚಾಲಕರು ಕಾದು ನಂತರ ವಾಹನಗಳನ್ನು ಚಲಾಯಿಸುವಂತಹ ಪರಿಸ್ಥಿತಿ ಇತ್ತು. ಹಲವಾರು ವರ್ಷಗಳಿಂದ ಸೇತುವೆ ನಿರ್ಮಿಸಬೇಕೆಂಬುದು ಜನತೆಯ ಒತ್ತಾಸೆಯಾಗಿತ್ತು.</p>.<p>ಮಳೆಗಾಲದಲ್ಲಿ ರಸ್ತೆ ಕಾಣದೆ ವಾಹನಗಳು ಸಂಚರಿಸಿದಾಗ ಅವಘಡಗಳು ಸಂಭವಿಸಿದ ಉದಾಹರಣೆಗಳಿವೆ. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೇತುವೆ ನಿರ್ಮಾಣ ಕಾರ್ಯ ಇದುವರೆಗೂ ಕೈಗೂಡಿರಲಿಲ್ಲ.</p>.<p>ನಾಲ್ಕೈದು ದಿನಗಳಿಂದ ಸುರಿದ ನಿರಂತರ ಮಳೆಗೆ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂದಾಜು ವೆಚ್ಚ ಕೂಡಲೇ ನೀಡುವಂತೆ ಸೂಚಿಸಿದರು.</p>.<p>ನಂತರ ಶಾಸಕರು ಮಾತನಾಡಿ, ‘ಶೀಘ್ರದಲ್ಲಿಯೇ ಸೇತುವೆ ನಿರ್ಮಾಣ ಮಾಡಲಾಗುವುದು. ಪಟ್ಟಣದಲ್ಲಿ ಮಿನಿ ವಿಧಾನಸೌಧ, ಬಸ್ ನಿಲ್ದಾಣ ಮುಂತಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ಸರ್ಕಾರದ ಬಿಟ್ಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಅನುದಾನಗಳು ಬಿಡುಗಡೆಗೊಳಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಮುಖಂಡರಾದ ಎಂ.ಎಂ.ಜೆ.ಹರ್ಷವರ್ಧನ್, ಬೂದಿ ಶಿವಕುಮಾರ್, ಮಹಾಂತೇಶ್,ವೈ.ಮಲ್ಲಿಕಾರ್ಜುನ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>