ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳು ಬಂದು ಸಕ್ಕರೆ ಬೆಲ್ಲದ ನೈವೇದ್ಯ ಸಮರ್ಪಿಸಿದ್ದರಿಂದ ಮಸೀದಿಯ ಬಳಿ ಅದರ ಗುಡ್ಡೆ ನಿರ್ಮಾಣವಾಗಿತ್ತು. ತುಂತುರು ಮಳೆಯನ್ನೂ ಲೆಕ್ಕಿಸದೇ ಭಕ್ತರು ಬಂದು ದೇವರ ದರ್ಶನ ಪಡೆದರು. ಪೀರಲ ದೇವರನ್ನು ಹೂಗಳಿಂದ ಅಲಂಕರಿಸಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಬೆಳಿಗ್ಗೆ ದರ್ಶನಕ್ಕೆ ಜನ ಮುಗಿಬಿದ್ದಿದ್ದರು. ಮುಸ್ಲಿಮರು ಸೇರಿದಂತೆ ವಿವಿಧ ಜಾತಿ, ಜನಾಂಗಗಳ ಜನ ಬಂದು ದರ್ಶನ ಪಡೆದರು.