ರಾಣಿಪೇಟೆ, ಕೌಲ್ಪೇಟೆ, ಹರಿಜನಕೇರಿ, ವರಕೇರಿ, ಚಪ್ಪರದಹಳ್ಳಿ, ಚಿತ್ರಕೇರಿ ಸೇರಿದಂತೆ ಹಲವೆಡೆ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಈ ಕುರಿತು ಸ್ಥಳೀಯ ಜನರೊಂದಿಗೆ ಮಾತುಕತೆ ನಡೆಸಿದರು. ‘ಯಾರಾದರೂ ಹಣ ಹಂಚುತ್ತಿದ್ದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಕೊಡಬೇಕು’ ಎಂದು ತಿಳಿಸಿದರು.