<p><strong>ಬಳ್ಳಾರಿ:</strong> ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 16 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ ಎಂಬುದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಂಕಿ ಅಂಶಗಳಿಂದ ಗೊತ್ತಾಗಿದೆ.</p>.<p>ರಾಜ್ಯದ ಜೂನ್ ತಿಂಗಳ ವಾಡಿಕೆ ಮಳೆ 19.94 ಸೆಂ.ಮೀ. ಆದರೆ, 20.33 ಸೆಂ.ಮೀ ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಸುರಿದಿದೆ. </p>.<p>ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಜೂನ್ 30ರ ವೇಳೆಗೆ ಸರಾಸರಿ 6.55 ಸೆಂ.ಮೀ ಮಳೆ ಆಗಬೇಕಿತ್ತು. ಆದರೆ, 5 ಸೆಂ.ಮೀ ಸುರಿದಿದೆ. ಕೋಲಾರ, ತುಮಕೂರು, ಚಾಮರಾಜನಗರ ಜಿಲ್ಲೆಗಳು ಮಳೆ ಕೊರತೆ ಎದುರಿಸಿವೆ. ದಾವಣಗೆರೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. </p>.<p>ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಸರಾಸರಿ 10.30 ಸೆಂ.ಮೀ ಮಳೆಯಾಗಬೇಕಿತ್ತು. 9.66 ಸೆಂ.ಮೀ ಮಳೆಯಾಗಿದೆ. ಬಳ್ಳಾರಿ, ಬೀದರ್, ಕೊಪ್ಪಳ, ಯಾದಗಿರಿಯಲ್ಲಿ ವಾಡಿಕೆಗಿಂತ ಅರ್ಧದಷ್ಟು ಮಳೆಯಾಗಿದೆ. ಬೆಳಗಾವಿ, ಧಾರವಾಡ, ವಿಜಯನಗರ ಮತ್ತು ಹಾವೇರಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. </p>.<p>ಮಲೆನಾಡಿನ 4 ಜಿಲ್ಲೆಗಳಲ್ಲಿ ಸರಾಸರಿ 36.30 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ, 41.51 ಸೆಂ.ಮೀ ಮಳೆ ಸುರಿದಿದೆ. ಕರಾವಳಿಯಲ್ಲಿ 88.14 ಸೆಂ.ಮೀ ಮಳೆ ಸುರಿದಿದೆ.</p>.<p>ಮೇ ತಿಂಗಳಲ್ಲಿ ಸುರಿದ ಮಳೆಯಿಂದ ಬೇಗನೇ ಬಿತ್ತನೆಯಾಗಿತ್ತು. ಆದರೆ, ಜೂನ್ ಮಧ್ಯದಿಂದ ಮಳೆ ಕಡಿಮೆಯಾಗಿದೆ. ಬೀಜ ಮೊಳಕೆಯುವ ಈ ಹಂತದಲ್ಲಿ ಮಳೆಯ ಅಗತ್ಯವಿದೆ’ ಎಂದು ಕೃಷಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು. </p>.<p><strong>ಶೇ 53ರಷ್ಟು ಬಿತ್ತನೆ</strong> ನೀರಾವರಿ ಮತ್ತು ಮಳೆಯಾಶ್ರಿತ ಪ್ರದೇಶಗಳು ಸೇರಿ ರಾಜ್ಯದ ಒಟ್ಟು 82.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಬಿತ್ತನೆ ಗುರಿಯಿದೆ. ಈವರೆಗೆ 43.55 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 16 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ ಎಂಬುದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಂಕಿ ಅಂಶಗಳಿಂದ ಗೊತ್ತಾಗಿದೆ.</p>.<p>ರಾಜ್ಯದ ಜೂನ್ ತಿಂಗಳ ವಾಡಿಕೆ ಮಳೆ 19.94 ಸೆಂ.ಮೀ. ಆದರೆ, 20.33 ಸೆಂ.ಮೀ ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಸುರಿದಿದೆ. </p>.<p>ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಜೂನ್ 30ರ ವೇಳೆಗೆ ಸರಾಸರಿ 6.55 ಸೆಂ.ಮೀ ಮಳೆ ಆಗಬೇಕಿತ್ತು. ಆದರೆ, 5 ಸೆಂ.ಮೀ ಸುರಿದಿದೆ. ಕೋಲಾರ, ತುಮಕೂರು, ಚಾಮರಾಜನಗರ ಜಿಲ್ಲೆಗಳು ಮಳೆ ಕೊರತೆ ಎದುರಿಸಿವೆ. ದಾವಣಗೆರೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. </p>.<p>ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಸರಾಸರಿ 10.30 ಸೆಂ.ಮೀ ಮಳೆಯಾಗಬೇಕಿತ್ತು. 9.66 ಸೆಂ.ಮೀ ಮಳೆಯಾಗಿದೆ. ಬಳ್ಳಾರಿ, ಬೀದರ್, ಕೊಪ್ಪಳ, ಯಾದಗಿರಿಯಲ್ಲಿ ವಾಡಿಕೆಗಿಂತ ಅರ್ಧದಷ್ಟು ಮಳೆಯಾಗಿದೆ. ಬೆಳಗಾವಿ, ಧಾರವಾಡ, ವಿಜಯನಗರ ಮತ್ತು ಹಾವೇರಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. </p>.<p>ಮಲೆನಾಡಿನ 4 ಜಿಲ್ಲೆಗಳಲ್ಲಿ ಸರಾಸರಿ 36.30 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ, 41.51 ಸೆಂ.ಮೀ ಮಳೆ ಸುರಿದಿದೆ. ಕರಾವಳಿಯಲ್ಲಿ 88.14 ಸೆಂ.ಮೀ ಮಳೆ ಸುರಿದಿದೆ.</p>.<p>ಮೇ ತಿಂಗಳಲ್ಲಿ ಸುರಿದ ಮಳೆಯಿಂದ ಬೇಗನೇ ಬಿತ್ತನೆಯಾಗಿತ್ತು. ಆದರೆ, ಜೂನ್ ಮಧ್ಯದಿಂದ ಮಳೆ ಕಡಿಮೆಯಾಗಿದೆ. ಬೀಜ ಮೊಳಕೆಯುವ ಈ ಹಂತದಲ್ಲಿ ಮಳೆಯ ಅಗತ್ಯವಿದೆ’ ಎಂದು ಕೃಷಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು. </p>.<p><strong>ಶೇ 53ರಷ್ಟು ಬಿತ್ತನೆ</strong> ನೀರಾವರಿ ಮತ್ತು ಮಳೆಯಾಶ್ರಿತ ಪ್ರದೇಶಗಳು ಸೇರಿ ರಾಜ್ಯದ ಒಟ್ಟು 82.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಬಿತ್ತನೆ ಗುರಿಯಿದೆ. ಈವರೆಗೆ 43.55 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>