<p><strong>ಕಂಪ್ಲಿ:</strong> ‘ತಾಲ್ಲೂಕಿನ ದೇವಸಮುದ್ರ ಕ್ರಾಸ್ನಲ್ಲಿ ಆರಂಭಗೊಂಡಿರುವ ಶ್ರೀಕಲ್ಯಾಣಚೌಕಿಮಠ ಕಾಮಧೇನು ಗೋಶಾಲಾ ಅಭಿವೃದ್ಧಿಗೆ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಬಳಸಿಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ಸಂಸದ ಈ. ತುಕಾರಾಂ ತಿಳಿಸಿದರು.</p>.<p>ತಾಲ್ಲೂಕಿನ ದೇವಸಮುದ್ರ ಕ್ರಾಸ್ನಲ್ಲಿ ಶ್ರೀಕಲ್ಯಾಣಚೌಕಿಮಠ ಕಾಮಧೇನು ಗೋಶಾಲಾ ಸೇವಾ ಟ್ರಸ್ಟ್ ಹಮ್ಮಿಕೊಂಡಿದ್ದ ಗೋಶಾಲೆ, ಕಲ್ಯಾಣ ಕೃಷಿ ಆಶ್ರಮ, ಗುರುಕುಲ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ ಪ್ರಯುಕ್ತ ಭಾನುವಾರ ನಡೆದ ಇಷ್ಟಾರ್ಥ ಸಿದ್ಧಿ ಹೋಮ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಗಂಗಾವತಿ– ಕಂಪ್ಲಿ– ದರೋಜಿ ರೈಲು ಮಾರ್ಗ ಕಾಮಗಾರಿ ಆರಂಭಕ್ಕೆ ಅನುದಾನ ಪಡೆಯಲಾಗುವುದು. ಅಖಂಡ ಬಳ್ಳಾರಿ ಜಿಲ್ಲೆಗೆ ₹2,372 ಕೋಟಿ ವೆಚ್ಚದಲ್ಲಿ ಎರಡು ರೈಲು ಮಾರ್ಗ ನಿರ್ಮಾಣಗೊಳ್ಳಲಿವೆ. ತೋರಣಗಲ್ಲು, ಪಾಪಿನಾಯಕನಹಳ್ಳಿ, ಕುಡಿತಿನಿ ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಸಂಸದರ ಅನುದಾನದಡಿ ಕಂಪ್ಲಿ ಸೇರಿ ಎಂಟು ಕ್ಷೇತ್ರಗಳಿಗೆ ತಲಾ ₹80 ಲಕ್ಷ ಮಂಜೂರು ಮಾಡಲಾಗಿದೆ’ ಎಂದು ವಿವರಿಸಿದರು.</p>.<p>ಲೋಕಾಯುಕ್ತ ದಾಳಿಗೆ ಸಿಲುಕಿದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಪ್ರಕರಣ ಕಾನೂನು ಪ್ರಕಾರ ನಡೆಯುತ್ತಿದೆ ಎಂದು ಸಮರ್ಥಿಸಿಕೊಂಡರು.</p>.<p>ನಂದೀಪುರ ಮಹೇಶ್ವರಸ್ವಾಮೀಜಿ, ಅಜಾತ ಶಂಭುಲಿಂಗಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಗೋಶಾಲೆ ಸಂಸ್ಥಾಪಕ ಕೆ.ಎಂ. ಬಸವರಾಜಶಾಸ್ತ್ರಿ, ಪ್ರಮುಖರಾದ ಪಿ. ಮೂಕಯ್ಯಸ್ವಾಮಿ, ಎಂ.ಸುಧೀರ್, ಹೊನ್ನಳ್ಳಿ ಗಂಗಾಧರ, ಎಚ್.ಹನುಮಂತಪ್ಪ, ಕೆ. ಬಸವರಾಜ, ಅಕ್ಕಿ ಜಿಲಾನ್, ಬಿ. ನಾರಾಯಣಪ್ಪ ಇದ್ದರು.</p>.<p>ಸಾವಯುವ ಕೃಷಿ ಮತ್ತು ರೈತರಿಗಾಗಿ ನಡೆದ ಚರ್ಚಾಗೋಷ್ಠಿಯಲ್ಲಿ ಕೃಷಿ ಕೀಟ ಶಾಸ್ತ್ರ ವಿಭಾಗದ ಪಿ.ಆರ್. ಬದರಿಪ್ರಸಾದ್, ಸಾವಯವ ಕೃಷಿಕರಾದ ಬಸಯ್ಯ ಹಿರೇಮಠ, ಎಸ್.ವಿ. ಸಜ್ಜನ್, ಬಿ.ಎಂ. ವೀರಪ್ಪಯ್ಯ, ಕೆ. ತಿಮ್ಮಣ್ಣ ಪಡಿಯಪ್ಪ ಉಳಸದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ‘ತಾಲ್ಲೂಕಿನ ದೇವಸಮುದ್ರ ಕ್ರಾಸ್ನಲ್ಲಿ ಆರಂಭಗೊಂಡಿರುವ ಶ್ರೀಕಲ್ಯಾಣಚೌಕಿಮಠ ಕಾಮಧೇನು ಗೋಶಾಲಾ ಅಭಿವೃದ್ಧಿಗೆ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಬಳಸಿಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ಸಂಸದ ಈ. ತುಕಾರಾಂ ತಿಳಿಸಿದರು.</p>.<p>ತಾಲ್ಲೂಕಿನ ದೇವಸಮುದ್ರ ಕ್ರಾಸ್ನಲ್ಲಿ ಶ್ರೀಕಲ್ಯಾಣಚೌಕಿಮಠ ಕಾಮಧೇನು ಗೋಶಾಲಾ ಸೇವಾ ಟ್ರಸ್ಟ್ ಹಮ್ಮಿಕೊಂಡಿದ್ದ ಗೋಶಾಲೆ, ಕಲ್ಯಾಣ ಕೃಷಿ ಆಶ್ರಮ, ಗುರುಕುಲ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ ಪ್ರಯುಕ್ತ ಭಾನುವಾರ ನಡೆದ ಇಷ್ಟಾರ್ಥ ಸಿದ್ಧಿ ಹೋಮ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಗಂಗಾವತಿ– ಕಂಪ್ಲಿ– ದರೋಜಿ ರೈಲು ಮಾರ್ಗ ಕಾಮಗಾರಿ ಆರಂಭಕ್ಕೆ ಅನುದಾನ ಪಡೆಯಲಾಗುವುದು. ಅಖಂಡ ಬಳ್ಳಾರಿ ಜಿಲ್ಲೆಗೆ ₹2,372 ಕೋಟಿ ವೆಚ್ಚದಲ್ಲಿ ಎರಡು ರೈಲು ಮಾರ್ಗ ನಿರ್ಮಾಣಗೊಳ್ಳಲಿವೆ. ತೋರಣಗಲ್ಲು, ಪಾಪಿನಾಯಕನಹಳ್ಳಿ, ಕುಡಿತಿನಿ ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಸಂಸದರ ಅನುದಾನದಡಿ ಕಂಪ್ಲಿ ಸೇರಿ ಎಂಟು ಕ್ಷೇತ್ರಗಳಿಗೆ ತಲಾ ₹80 ಲಕ್ಷ ಮಂಜೂರು ಮಾಡಲಾಗಿದೆ’ ಎಂದು ವಿವರಿಸಿದರು.</p>.<p>ಲೋಕಾಯುಕ್ತ ದಾಳಿಗೆ ಸಿಲುಕಿದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಪ್ರಕರಣ ಕಾನೂನು ಪ್ರಕಾರ ನಡೆಯುತ್ತಿದೆ ಎಂದು ಸಮರ್ಥಿಸಿಕೊಂಡರು.</p>.<p>ನಂದೀಪುರ ಮಹೇಶ್ವರಸ್ವಾಮೀಜಿ, ಅಜಾತ ಶಂಭುಲಿಂಗಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಗೋಶಾಲೆ ಸಂಸ್ಥಾಪಕ ಕೆ.ಎಂ. ಬಸವರಾಜಶಾಸ್ತ್ರಿ, ಪ್ರಮುಖರಾದ ಪಿ. ಮೂಕಯ್ಯಸ್ವಾಮಿ, ಎಂ.ಸುಧೀರ್, ಹೊನ್ನಳ್ಳಿ ಗಂಗಾಧರ, ಎಚ್.ಹನುಮಂತಪ್ಪ, ಕೆ. ಬಸವರಾಜ, ಅಕ್ಕಿ ಜಿಲಾನ್, ಬಿ. ನಾರಾಯಣಪ್ಪ ಇದ್ದರು.</p>.<p>ಸಾವಯುವ ಕೃಷಿ ಮತ್ತು ರೈತರಿಗಾಗಿ ನಡೆದ ಚರ್ಚಾಗೋಷ್ಠಿಯಲ್ಲಿ ಕೃಷಿ ಕೀಟ ಶಾಸ್ತ್ರ ವಿಭಾಗದ ಪಿ.ಆರ್. ಬದರಿಪ್ರಸಾದ್, ಸಾವಯವ ಕೃಷಿಕರಾದ ಬಸಯ್ಯ ಹಿರೇಮಠ, ಎಸ್.ವಿ. ಸಜ್ಜನ್, ಬಿ.ಎಂ. ವೀರಪ್ಪಯ್ಯ, ಕೆ. ತಿಮ್ಮಣ್ಣ ಪಡಿಯಪ್ಪ ಉಳಸದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>