<p><strong>ಬಳ್ಳಾರಿ</strong>: ಭಾನುವಾರದಿಂದ ಜುಲೈ 17 ರವರೆಗೆ ಜರುಗಬೇಕಿದ್ದ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p>ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ಗುಂಪುಗಳ ನಡುವೆ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. </p>.<p>ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ)ರ ಅಡಿಯಲ್ಲಿ ಮೊಹರಂ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ, ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ. </p>.<p>ಮೊಹರಂಗೆ ನಿಷೇಧವಿರುವ ಗ್ರಾಮಗಳು: ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿ) ಮಹಾನಂದಿಕೊಟ್ಟಂ ಒಳ ಭಾಗ.</p>.<p>ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್ ಗ್ರಾಮಗಳು.</p>.<p>ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು.</p>.<p>ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯ ವಣೇನೂರು, ಜಾಲಿಬೆಂಚಿ ಗ್ರಾಮಗಳು.</p>.<p>ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು, ಕಪ್ಪಗಲ್ಲು, ಸಂಜೀವರಾಯನಕೋಟೆ ಗ್ರಾಮಗಳು. ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಡಿ.ಅಂತಾಪುರ, ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಂ.15-ಗೋನಾಳು ಗ್ರಾಮದಲ್ಲಿ ಮೊಹರಂ ನಿಷೇಧಿಸಲಾಗಿದೆ.</p>.<p>ಇವುಗಳನ್ನು ಮಾಡುವಂತಿಲ್ಲ: ಶಸ್ತ್ರ, ಬಡಿಗೆ, ಬರ್ಜಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು, ಸ್ಪೋಟಕ ವಸ್ತು ಒಯ್ಯುವಂತಿಲ್ಲ. ಯಾವುದೇ ವ್ಯಕ್ತಿಗಳ ಭಾವಚಿತ್ರಗಳನ್ನು ಅವಮಾನಕಾರಿ ರೀತಿಯಲ್ಲಿ ಪ್ರದರ್ಶಿಸಬಾರದು.</p>.<p>ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಪ್ರದರ್ಶನವನ್ನು, ಸಭ್ಯತೆ ಅಥವಾ ನೀತಿ ಉಲ್ಲಂಘಿಸುವುದು, ವಸ್ತು, ತಯಾರಿ, ಪ್ರದರ್ಶನ ಅಥವಾ ಪ್ರಸಾರವನ್ನು ತಡೆಯುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಭಾನುವಾರದಿಂದ ಜುಲೈ 17 ರವರೆಗೆ ಜರುಗಬೇಕಿದ್ದ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p>ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ಗುಂಪುಗಳ ನಡುವೆ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. </p>.<p>ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ)ರ ಅಡಿಯಲ್ಲಿ ಮೊಹರಂ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ, ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ. </p>.<p>ಮೊಹರಂಗೆ ನಿಷೇಧವಿರುವ ಗ್ರಾಮಗಳು: ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿ) ಮಹಾನಂದಿಕೊಟ್ಟಂ ಒಳ ಭಾಗ.</p>.<p>ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್ ಗ್ರಾಮಗಳು.</p>.<p>ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು.</p>.<p>ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯ ವಣೇನೂರು, ಜಾಲಿಬೆಂಚಿ ಗ್ರಾಮಗಳು.</p>.<p>ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು, ಕಪ್ಪಗಲ್ಲು, ಸಂಜೀವರಾಯನಕೋಟೆ ಗ್ರಾಮಗಳು. ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ಡಿ.ಅಂತಾಪುರ, ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಂ.15-ಗೋನಾಳು ಗ್ರಾಮದಲ್ಲಿ ಮೊಹರಂ ನಿಷೇಧಿಸಲಾಗಿದೆ.</p>.<p>ಇವುಗಳನ್ನು ಮಾಡುವಂತಿಲ್ಲ: ಶಸ್ತ್ರ, ಬಡಿಗೆ, ಬರ್ಜಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು, ಸ್ಪೋಟಕ ವಸ್ತು ಒಯ್ಯುವಂತಿಲ್ಲ. ಯಾವುದೇ ವ್ಯಕ್ತಿಗಳ ಭಾವಚಿತ್ರಗಳನ್ನು ಅವಮಾನಕಾರಿ ರೀತಿಯಲ್ಲಿ ಪ್ರದರ್ಶಿಸಬಾರದು.</p>.<p>ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಪ್ರದರ್ಶನವನ್ನು, ಸಭ್ಯತೆ ಅಥವಾ ನೀತಿ ಉಲ್ಲಂಘಿಸುವುದು, ವಸ್ತು, ತಯಾರಿ, ಪ್ರದರ್ಶನ ಅಥವಾ ಪ್ರಸಾರವನ್ನು ತಡೆಯುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>