<p><strong>ಹೊಸಪೇಟೆ:</strong> ‘ವಿಶ್ವವಿದ್ಯಾಲಯಗಳ ಭೌತಿಕ ಮತ್ತು ಬೌದ್ಧಿಕ ಗುಣಮಟ್ಟ ಪರೀಕ್ಷಿಸಿ, ಶಿಕ್ಷಣದಲ್ಲಿ ಗುಣಮಟ್ಟ ಸುಧಾರಣೆಗೆ ಶ್ರಮಿಸುತ್ತಿರುವ ಸಂಸ್ಥೆ ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ತು (ನ್ಯಾಕ್)’ ಎಂದು ನ್ಯಾಕ್ ಸಲಹೆಗಾರ ಗಣೇಶ್ ಹೆಗಡೆ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನ್ಯಾಕ್ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ 1994ರಲ್ಲಿ ನ್ಯಾಕ್ ಆರಂಭಿಸಲಾಗಿದೆ. ಪ್ರತಿವರ್ಷ ವಿಶ್ವವಿದ್ಯಾಲಯದ ಪ್ರಗತಿಯ ಯೋಜನೆ ರೂಪಿಸಲು ಆಂತರಿಕ ಗುಣಮಟ್ಟ ಭರವಸೆ ಕೋಶ ಆರಂಭಿಸಲಾಗಿದೆ’ ಎಂದರು.</p>.<p>ಕುಲಪತಿ ಪ್ರೊ.ಸ.ಚಿ. ರಮೇಶ ಮಾತನಾಡಿ, ‘ವಿಶ್ವವಿದ್ಯಾಲಯಗಳು ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿದರೂ ಅದನ್ನು ಸರಿಯಾಗಿ ದಾಖಲಿಸಿ ನ್ಯಾಕ್ ಸಂಸ್ಥೆಯ ಮುಂದೆ ಪ್ರಸ್ತುತಪಡಿಸದಿದ್ದರೆ ವಿಶ್ವವಿದ್ಯಾಲಯಗಳು ತಮ್ಮ ಗುಣಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ಮತ್ತು ಉತ್ತಮಪಡಿಸಿಕೊಳ್ಳುವಲ್ಲಿ ವಿಫಲವಾಗುವ ಸಾಧ್ಯತೆ ಹೆಚ್ಚು’ ಎಂದು ಹೇಳಿದರು.</p>.<p>‘ಕನ್ನಡ ವಿಶ್ವವಿದ್ಯಾಲಯದ ಎಲ್ಲಾ ಅಧ್ಯಾಪಕರು ತಮ್ಮ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಅಧ್ಯಾಪಕರು ತಮ್ಮ ವಿಭಾಗದ ಎಲ್ಲಾ ಕಾರ್ಯಕ್ರಮಗಳನ್ನು ಮತ್ತು ಶೈಕ್ಷಣಿಕ ಸಾಧನೆಯನ್ನು ದಾಖಲೀಕರಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ನ್ಯಾಕ್ ಸಲಹೆಗಾರ ಪೊನ್ನಮುಡಿ ರಾಜ್, ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಎ. ಮೋಹನ ಕುಂಟಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ವಿಶ್ವವಿದ್ಯಾಲಯಗಳ ಭೌತಿಕ ಮತ್ತು ಬೌದ್ಧಿಕ ಗುಣಮಟ್ಟ ಪರೀಕ್ಷಿಸಿ, ಶಿಕ್ಷಣದಲ್ಲಿ ಗುಣಮಟ್ಟ ಸುಧಾರಣೆಗೆ ಶ್ರಮಿಸುತ್ತಿರುವ ಸಂಸ್ಥೆ ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ತು (ನ್ಯಾಕ್)’ ಎಂದು ನ್ಯಾಕ್ ಸಲಹೆಗಾರ ಗಣೇಶ್ ಹೆಗಡೆ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನ್ಯಾಕ್ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ 1994ರಲ್ಲಿ ನ್ಯಾಕ್ ಆರಂಭಿಸಲಾಗಿದೆ. ಪ್ರತಿವರ್ಷ ವಿಶ್ವವಿದ್ಯಾಲಯದ ಪ್ರಗತಿಯ ಯೋಜನೆ ರೂಪಿಸಲು ಆಂತರಿಕ ಗುಣಮಟ್ಟ ಭರವಸೆ ಕೋಶ ಆರಂಭಿಸಲಾಗಿದೆ’ ಎಂದರು.</p>.<p>ಕುಲಪತಿ ಪ್ರೊ.ಸ.ಚಿ. ರಮೇಶ ಮಾತನಾಡಿ, ‘ವಿಶ್ವವಿದ್ಯಾಲಯಗಳು ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿದರೂ ಅದನ್ನು ಸರಿಯಾಗಿ ದಾಖಲಿಸಿ ನ್ಯಾಕ್ ಸಂಸ್ಥೆಯ ಮುಂದೆ ಪ್ರಸ್ತುತಪಡಿಸದಿದ್ದರೆ ವಿಶ್ವವಿದ್ಯಾಲಯಗಳು ತಮ್ಮ ಗುಣಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ಮತ್ತು ಉತ್ತಮಪಡಿಸಿಕೊಳ್ಳುವಲ್ಲಿ ವಿಫಲವಾಗುವ ಸಾಧ್ಯತೆ ಹೆಚ್ಚು’ ಎಂದು ಹೇಳಿದರು.</p>.<p>‘ಕನ್ನಡ ವಿಶ್ವವಿದ್ಯಾಲಯದ ಎಲ್ಲಾ ಅಧ್ಯಾಪಕರು ತಮ್ಮ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಅಧ್ಯಾಪಕರು ತಮ್ಮ ವಿಭಾಗದ ಎಲ್ಲಾ ಕಾರ್ಯಕ್ರಮಗಳನ್ನು ಮತ್ತು ಶೈಕ್ಷಣಿಕ ಸಾಧನೆಯನ್ನು ದಾಖಲೀಕರಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ನ್ಯಾಕ್ ಸಲಹೆಗಾರ ಪೊನ್ನಮುಡಿ ರಾಜ್, ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಎ. ಮೋಹನ ಕುಂಟಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>