ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ | ನೀರು ಶುದ್ಧೀಕರಣ ಘಟಕಕ್ಕೆ ಸಚಿವ ಬಿ. ನಾಗೇಂದ್ರ ಭೇಟಿ

Published 3 ಸೆಪ್ಟೆಂಬರ್ 2023, 16:10 IST
Last Updated 3 ಸೆಪ್ಟೆಂಬರ್ 2023, 16:10 IST
ಅಕ್ಷರ ಗಾತ್ರ

ಬಳ್ಳಾರಿ: ಇಲ್ಲಿನ ಸಂಗನಕಲ್ಲು ಸಮೀಪದ ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಸುವ ಮೊದಲು ನೀರಿನ ಟ್ಯಾಂಕ್‌ಗಳನ್ನು  ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಶುದ್ಧೀಕರಣ ಘಟಕಗಳ ನೀರನ್ನು ಪರೀಕ್ಷಿಸಿ ಕುಡಿಯಲು ಸೂಕ್ತವಾಗಿದೆ ಎಂಬುದನ್ನು  ಖಾತ್ರಿಪಡಿಸಿಕೊಂಡ ಬಳಿಕ ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರಕ್ಕೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಹೆಚ್ಚುವರಿ ಸೌಲಭ್ಯಗಳು ಬೇಕಾದಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ನಿವೃತ್ತ ಕಾರ್ಯಪಾಲಕ ಎಂಜಿನಿಯರ್‌ ಖಾಜಾ ಮೊಹಿನುದ್ದೀನ್‌, ನಗರ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಗಂಗಾಧರಗೌಡ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT