<p><strong>ಹರಪನಹಳ್ಳಿ</strong>: ಅಭಿವೃದ್ದಿ ಕೆಲಸ ಕೈಗೆತ್ತಿಕೊಂಡಾಗ ಸಾರ್ವಜನಿಕರು ಅಡ್ಡಿಪಡಿಸದೇ ಸಹಕರಿಸಬೇಕು ಎಂದು <br> ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.</p>.<p>ಲೋಕೋಪಯೋಗಿ ಇಲಾಖೆ, ಅಪೆಂಡಿಕ್ಸ್ ಯೋಜನೆಯಡಿ ಗುರುವಾರ 2024-25ನೇ ಸಾಲಿನಲ್ಲಿ ₹4.50 ಕೋಟಿ ವೆಚ್ಚದ ಶಿವಮೊಗ್ಗ ಹೊಸಪೇಟೆ ರಾಜ್ಯ ಹೆದ್ದಾರಿ -25ರ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಶಿವಮೊಗ್ಗ ಹೊಸಪೇಟೆ ರಾಜ್ಯ ಹೆದ್ದಾರಿ 25ಕ್ಕೆ ಹೊಂದಿಕೊಂಡಿರುವ ನಂದಿಬೇವೂರು ಗ್ರಾಮದಲ್ಲಿ ₹4.50 ಕೋಟಿ ವೆಚ್ಚದ ಸುಸಜ್ಜಿತ ರಸ್ತೆ, ಚರಂಡಿ ನಿರ್ಮಾಣ ಆಗುತ್ತದೆ. ಗ್ರಾಮಸ್ಥರು ಗುತ್ತಿಗೆದಾರರಿಗೆ ಸಹಕರಿಸಬೇಕು ಎಂದು ತಿಳಿಸಿದರು. ಒಂದು ವೇಳೆ ತಿಪ್ಪೆ ಹಾಕಿರುವುದು, ನಳಕ್ಕಾಗಿ ಗುಂಡಿ ಅಗೆದಿದ್ದರೆ ತೆರವುಗೊಳಿಸಿ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕುಬೇರಪ್ಪ ಮಾತನಾಡಿ, ದಿವಂಗತ ಎಂ.ಪಿ.ಪ್ರಕಾಶ್ ಅವರು ನಂದಿಬೇವೂರು ಗ್ರಾಮದೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದರು.</p>.<p>ಇದಕ್ಕು ಮುನ್ನ ನಡೆದ ಮೆರವಣಿಗೆಯಲ್ಲಿ ಮಲೆನಾಡಿನ ಸುನಂದಾಶೆಟ್ಟಿ ಅವರ ತಂಡದ ಚಂಡೆಮದ್ದಳೆ ಗಮನ ಸೆಳೆಯಿತು. ಸುರಿವ ಮಳೆಯಲ್ಲೆ ಕಾರ್ಯಕ್ರಮ ನಡೆಯಿತು.</p>.<p>ಮುಖಂಡ ಎಚ್.ಎಂ.ಮಲ್ಲಿಕಾರ್ಜುನ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಂ.ಉದಯಶಂಕರ , ಮೈದೂರು ಒ.ರಾಮಪ್ಪ, ಬೋವಿ ಸಂಪತ್ ಕುಮಾರ, ಬೋವಿ ಮಂಜುನಾಥ, ಅಶೋಕ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಚಲುವಾದಿ ಪಾರ್ವತಮ್ಮ, ಉಪಾಧ್ಯಕ್ಷ ಸಿದ್ದೇಶ್ ಹಾವಿನ, ಜಗದೀಶಪ್ಪ, ಹಾಲಮ್ಮ , ಈ.ನಾಗರಾಜ್ ರಾಮಪ್ಪ, ಶಿವಕುಮಾರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ</strong>: ಅಭಿವೃದ್ದಿ ಕೆಲಸ ಕೈಗೆತ್ತಿಕೊಂಡಾಗ ಸಾರ್ವಜನಿಕರು ಅಡ್ಡಿಪಡಿಸದೇ ಸಹಕರಿಸಬೇಕು ಎಂದು <br> ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.</p>.<p>ಲೋಕೋಪಯೋಗಿ ಇಲಾಖೆ, ಅಪೆಂಡಿಕ್ಸ್ ಯೋಜನೆಯಡಿ ಗುರುವಾರ 2024-25ನೇ ಸಾಲಿನಲ್ಲಿ ₹4.50 ಕೋಟಿ ವೆಚ್ಚದ ಶಿವಮೊಗ್ಗ ಹೊಸಪೇಟೆ ರಾಜ್ಯ ಹೆದ್ದಾರಿ -25ರ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಶಿವಮೊಗ್ಗ ಹೊಸಪೇಟೆ ರಾಜ್ಯ ಹೆದ್ದಾರಿ 25ಕ್ಕೆ ಹೊಂದಿಕೊಂಡಿರುವ ನಂದಿಬೇವೂರು ಗ್ರಾಮದಲ್ಲಿ ₹4.50 ಕೋಟಿ ವೆಚ್ಚದ ಸುಸಜ್ಜಿತ ರಸ್ತೆ, ಚರಂಡಿ ನಿರ್ಮಾಣ ಆಗುತ್ತದೆ. ಗ್ರಾಮಸ್ಥರು ಗುತ್ತಿಗೆದಾರರಿಗೆ ಸಹಕರಿಸಬೇಕು ಎಂದು ತಿಳಿಸಿದರು. ಒಂದು ವೇಳೆ ತಿಪ್ಪೆ ಹಾಕಿರುವುದು, ನಳಕ್ಕಾಗಿ ಗುಂಡಿ ಅಗೆದಿದ್ದರೆ ತೆರವುಗೊಳಿಸಿ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕುಬೇರಪ್ಪ ಮಾತನಾಡಿ, ದಿವಂಗತ ಎಂ.ಪಿ.ಪ್ರಕಾಶ್ ಅವರು ನಂದಿಬೇವೂರು ಗ್ರಾಮದೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದರು.</p>.<p>ಇದಕ್ಕು ಮುನ್ನ ನಡೆದ ಮೆರವಣಿಗೆಯಲ್ಲಿ ಮಲೆನಾಡಿನ ಸುನಂದಾಶೆಟ್ಟಿ ಅವರ ತಂಡದ ಚಂಡೆಮದ್ದಳೆ ಗಮನ ಸೆಳೆಯಿತು. ಸುರಿವ ಮಳೆಯಲ್ಲೆ ಕಾರ್ಯಕ್ರಮ ನಡೆಯಿತು.</p>.<p>ಮುಖಂಡ ಎಚ್.ಎಂ.ಮಲ್ಲಿಕಾರ್ಜುನ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಂ.ಉದಯಶಂಕರ , ಮೈದೂರು ಒ.ರಾಮಪ್ಪ, ಬೋವಿ ಸಂಪತ್ ಕುಮಾರ, ಬೋವಿ ಮಂಜುನಾಥ, ಅಶೋಕ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಚಲುವಾದಿ ಪಾರ್ವತಮ್ಮ, ಉಪಾಧ್ಯಕ್ಷ ಸಿದ್ದೇಶ್ ಹಾವಿನ, ಜಗದೀಶಪ್ಪ, ಹಾಲಮ್ಮ , ಈ.ನಾಗರಾಜ್ ರಾಮಪ್ಪ, ಶಿವಕುಮಾರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>