<p><strong>ಬಳ್ಳಾರಿ</strong>: ರಾಜ್ಯಸಭಾ ಸದಸ್ಯರಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿಗೆ ಆಗಮಿಸಿರುವ ನಾಸಿರ್ ಹುಸೇನ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಭಾನುವಾರ ಭವ್ಯ ಸಾಗತ ನೀಡಿದರು. </p><p>ಅನಂತಪುರ ಮಾರ್ಗವಾಗಿ ಭಾನುವಾರ ಸಂಜೆ ನಗರದ ಸಂಗಮ್ ವೃತ್ತಕ್ಕೆ ಆಗಮಿಸಿದ ನಾಸಿರ್ ಹುಸೇನ್ ಅವರನ್ನು ನೂರಾರು ಕಾರ್ಯಕರ್ತರು ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ವೇಳೆ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕ ಭರತ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು. </p><p>ನಂತರ ತೆರೆದ ವಾಹನದಲ್ಲಿ ನಾಸಿರ್ ಹುಸೇನ್ ಅವರನ್ನು ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ಸಂಗಮ್ ವೃತ್ತದಿಂದ ಗಡಿಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಮೆರವಣಿಗೆ ನಾಸಿರ್ ನಿವಾಸದತ್ತ ತೆರಳಿತು. ಅವರ ಹಿಂದೆ ಕಾಂಗ್ರೆಸ್ನ ನೂರಾರು ಕಾರ್ಯಕರ್ತರು ಬೈಕ್ಗಳಲ್ಲಿ ತೆರಳಿದರು. </p><p>ಪಾಕ್ ಪರ ಘೋಷಣೆ ವಿವಾದ: ನಾಸಿರ್ ಹುಸೇನ್ ಅವರು ರಾಜ್ಯಸಭೆಗೆ ಆಯ್ಕೆಯಾದ ದಿನ ವಿಧಾನಸೌಧದಲ್ಲಿ ಅವರ ಬೆಂಬಲಿಗನೊಬ್ಬ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದ ಎನ್ನಲಾಗಿದ್ದು, ಅದು ವಿವಾದಕ್ಕೆ ಕಾರಣವಾಗಿತ್ತು. ಘಟನೆಯ ಬಗ್ಗೆ ತನಿಖೆಯೂ ನಡೆಯುತ್ತಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ರಾಜ್ಯಸಭಾ ಸದಸ್ಯರಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿಗೆ ಆಗಮಿಸಿರುವ ನಾಸಿರ್ ಹುಸೇನ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಭಾನುವಾರ ಭವ್ಯ ಸಾಗತ ನೀಡಿದರು. </p><p>ಅನಂತಪುರ ಮಾರ್ಗವಾಗಿ ಭಾನುವಾರ ಸಂಜೆ ನಗರದ ಸಂಗಮ್ ವೃತ್ತಕ್ಕೆ ಆಗಮಿಸಿದ ನಾಸಿರ್ ಹುಸೇನ್ ಅವರನ್ನು ನೂರಾರು ಕಾರ್ಯಕರ್ತರು ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ವೇಳೆ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕ ಭರತ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು. </p><p>ನಂತರ ತೆರೆದ ವಾಹನದಲ್ಲಿ ನಾಸಿರ್ ಹುಸೇನ್ ಅವರನ್ನು ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ಸಂಗಮ್ ವೃತ್ತದಿಂದ ಗಡಿಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಮೆರವಣಿಗೆ ನಾಸಿರ್ ನಿವಾಸದತ್ತ ತೆರಳಿತು. ಅವರ ಹಿಂದೆ ಕಾಂಗ್ರೆಸ್ನ ನೂರಾರು ಕಾರ್ಯಕರ್ತರು ಬೈಕ್ಗಳಲ್ಲಿ ತೆರಳಿದರು. </p><p>ಪಾಕ್ ಪರ ಘೋಷಣೆ ವಿವಾದ: ನಾಸಿರ್ ಹುಸೇನ್ ಅವರು ರಾಜ್ಯಸಭೆಗೆ ಆಯ್ಕೆಯಾದ ದಿನ ವಿಧಾನಸೌಧದಲ್ಲಿ ಅವರ ಬೆಂಬಲಿಗನೊಬ್ಬ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದ ಎನ್ನಲಾಗಿದ್ದು, ಅದು ವಿವಾದಕ್ಕೆ ಕಾರಣವಾಗಿತ್ತು. ಘಟನೆಯ ಬಗ್ಗೆ ತನಿಖೆಯೂ ನಡೆಯುತ್ತಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>