<p><strong>ಹೂವಿನಹಡಗಲಿ</strong>: ‘ಸಮತೋಲಿತ ಆಹಾರ ಪದ್ಧತಿ ಹಾಗೂ ಯೋಗ, ಪ್ರಾಣಾಯಾಮ, ಧ್ಯಾನದಂತಹ ಉತ್ತಮ ಜೀವನಶೈಲಿ ಅಳವಡಿಸಿಕೊಂಡಲ್ಲಿ ರೋಗಗಳಿಂದ ಮುಕ್ತಿ ಪಡೆಯಬಹುದು’ ಎಂದು ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ಹೇಳಿದರು.</p>.<p>ಪಟ್ಟಣದ ಲಿಟಲ್ ಚಾಂಪ್ಸ್ ಶಾಲೆಯಲ್ಲಿ ಶನಿವಾರ ಜನನಿ ಆಸ್ಪತ್ರೆ, ಪರಿಪೂರ್ಣ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ತುರ್ತು ಹಾಗೂ ಶಸ್ತ್ರಚಿಕಿತ್ಸೆ ಹೊರತುಪಡಿಸಿ ಎಲ್ಲ ರೋಗಗಳಿಗೆ ಔಷಧ ರಹಿತ ವೈದ್ಯಪದ್ಧತಿಯಲ್ಲಿ ಚಿಕಿತ್ಸೆ ಇದೆ. ಇದರ ಪ್ರಯೋಜನ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ರೋಗ ಬಾರದಂತೆ ತಡೆಯುವ, ರೋಗ ಗುಣಪಡಿಸುವ ಹಾಗೂ ದೇಹವನ್ನು ಸದೃಢಗೊಳಿಸುವ ಚಿಕಿತ್ಸೆಗಳು ಪ್ರಕೃತಿ ಚಿಕಿತ್ಸಾ ಪದ್ದತಿಯಲ್ಲಿವೆ. ಈ ಕುರಿತು ಅರಿವು ಮೂಡಿಸಲು ಇಂತಹ ಶಿಬಿರ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಸಂಸ್ಥೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಉದಯಶಂಕರ ಭಟ್ ಮಾತನಾಡಿದರು.</p>.<p>ಪರಿಪೂರ್ಣ ಎಜ್ಯುಕೇಶನಲ್ ಟ್ರಸ್ಟ್ ಆಡಳಿತಾಧಿಕಾರಿ ಜಿ.ಕೊಟ್ರೇಶ್, ಮುಖ್ಯಶಿಕ್ಷಕರಾದ ಜಿ.ಮಲ್ಲಿಕಾರ್ಜುನ, ಎಸ್.ಶಿಲ್ಪಾ, ಶಿಕ್ಷಕ ಸೊಪ್ಪಿನ ಪ್ರಭುಗೌಡ ಉಪಸ್ಥಿತರಿದ್ದರು. 250ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ‘ಸಮತೋಲಿತ ಆಹಾರ ಪದ್ಧತಿ ಹಾಗೂ ಯೋಗ, ಪ್ರಾಣಾಯಾಮ, ಧ್ಯಾನದಂತಹ ಉತ್ತಮ ಜೀವನಶೈಲಿ ಅಳವಡಿಸಿಕೊಂಡಲ್ಲಿ ರೋಗಗಳಿಂದ ಮುಕ್ತಿ ಪಡೆಯಬಹುದು’ ಎಂದು ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ಹೇಳಿದರು.</p>.<p>ಪಟ್ಟಣದ ಲಿಟಲ್ ಚಾಂಪ್ಸ್ ಶಾಲೆಯಲ್ಲಿ ಶನಿವಾರ ಜನನಿ ಆಸ್ಪತ್ರೆ, ಪರಿಪೂರ್ಣ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ತುರ್ತು ಹಾಗೂ ಶಸ್ತ್ರಚಿಕಿತ್ಸೆ ಹೊರತುಪಡಿಸಿ ಎಲ್ಲ ರೋಗಗಳಿಗೆ ಔಷಧ ರಹಿತ ವೈದ್ಯಪದ್ಧತಿಯಲ್ಲಿ ಚಿಕಿತ್ಸೆ ಇದೆ. ಇದರ ಪ್ರಯೋಜನ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ರೋಗ ಬಾರದಂತೆ ತಡೆಯುವ, ರೋಗ ಗುಣಪಡಿಸುವ ಹಾಗೂ ದೇಹವನ್ನು ಸದೃಢಗೊಳಿಸುವ ಚಿಕಿತ್ಸೆಗಳು ಪ್ರಕೃತಿ ಚಿಕಿತ್ಸಾ ಪದ್ದತಿಯಲ್ಲಿವೆ. ಈ ಕುರಿತು ಅರಿವು ಮೂಡಿಸಲು ಇಂತಹ ಶಿಬಿರ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಸಂಸ್ಥೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಉದಯಶಂಕರ ಭಟ್ ಮಾತನಾಡಿದರು.</p>.<p>ಪರಿಪೂರ್ಣ ಎಜ್ಯುಕೇಶನಲ್ ಟ್ರಸ್ಟ್ ಆಡಳಿತಾಧಿಕಾರಿ ಜಿ.ಕೊಟ್ರೇಶ್, ಮುಖ್ಯಶಿಕ್ಷಕರಾದ ಜಿ.ಮಲ್ಲಿಕಾರ್ಜುನ, ಎಸ್.ಶಿಲ್ಪಾ, ಶಿಕ್ಷಕ ಸೊಪ್ಪಿನ ಪ್ರಭುಗೌಡ ಉಪಸ್ಥಿತರಿದ್ದರು. 250ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>