‘ನಾಯಿಗಳು ಮಗುವಿನ ಬಲಗೈ ಮತ್ತು ಎಡಕಾಲು ತಿಂದಿವೆ. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರು ಮಗುವಿನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಮರಣೋತ್ತರ ಶವಪರೀಕ್ಷೆ ನಡೆಸಿ, ವಾರಸುದಾರರಿಲ್ಲದ ಕಾರಣ ನಗರಸಭೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಮಗುವಿನ ಪೋಷಕರ ಪತ್ತೆಕಾರ್ಯನಡೆದಿದೆ’ ಎಂದು ಗ್ರಾಮೀಣ ಠಾಣೆ ಸಿಪಿಐ ಶ್ರೀನಿವಾಸ ಮೇಟಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.