<p><strong>ಸಂಡೂರು</strong>: ‘ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮಗಳ ಬಡ ಜನರ ಉತ್ತಮ ಆರೋಗ್ಯಕ್ಕೆ ನೂತನ ಡಯಾಲಿಸಿಸ್ ಯಂತ್ರಗಳು ಬಹಳ ಅನುಕೂಲವಾಗಿದ್ದು, ಎಲ್ಲ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಸಂಸದ ಇ.ತುಕಾರಾಂ ಹೇಳಿದರು.</p>.<p>ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಜಿಂದಾಲ್ ಫೌಂಡೇಶನ್ ವತಿಯಿಂದ ಸಿಎಸ್ಆರ್ ಚಟುವಟಿಕೆಯಲ್ಲಿ ನೀಡಿದ ಎರಡು ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ಮಾತನಾಡಿದರು.</p>.<p>‘ಆರ್ಥಿಕವಾಗಿ ಹಿಂದುಳಿದ ಬಡ ರೋಗಿಗಳಿಗೆ ಈ ಯಂತ್ರಗಳ ಮೂಲಕ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ. ಒಂದು ವರ್ಷಕ್ಕೆ ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ಒದಗಿಸಬಹುದು. ಆಸ್ಪತ್ರೆಯ ಅಧಿಕಾರಿ, ಸಿಬ್ಬಂದಿಗಳು ನೂತನ ಯಂತ್ರಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಿ ಜನರಿಗೆ ಸಕಾಲಕ್ಕೆ ಸೇವೆ ಒದಗಿಸಬೇಕು’ ಎಂದು ಹೇಳಿದರು.</p>.<p>ಶಾಸಕಿ ಅನ್ನಪೂರ್ಣ ತುಕಾರಾಂ, ಸಂಡೂರು ಪುರಸಭೆಯ ಅಧ್ಯಕ್ಷ ಸಿರಾಜ್ಹುಸೇನ್, ಉಪಾಧ್ಯಕ್ಷೆ ಲತಾ, ತಹಶೀಲ್ದಾರ್ ಅನಿಲ್ಕುಮಾರ್ ಜಿ. ತಾಲ್ಲೂಕು ಪಂಚಾಯಿತಿ ಎಡಿಸಿ ರೇಣುಕಾಚಾರ್ಯಸ್ವಾಮಿ, ಜಿಂದಾಲ್ ನ ಮುಖ್ಯಸ್ಥ ಪೆದ್ದಣ್ಣ, ಆಸ್ಪತ್ರೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: ‘ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮಗಳ ಬಡ ಜನರ ಉತ್ತಮ ಆರೋಗ್ಯಕ್ಕೆ ನೂತನ ಡಯಾಲಿಸಿಸ್ ಯಂತ್ರಗಳು ಬಹಳ ಅನುಕೂಲವಾಗಿದ್ದು, ಎಲ್ಲ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಸಂಸದ ಇ.ತುಕಾರಾಂ ಹೇಳಿದರು.</p>.<p>ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಜಿಂದಾಲ್ ಫೌಂಡೇಶನ್ ವತಿಯಿಂದ ಸಿಎಸ್ಆರ್ ಚಟುವಟಿಕೆಯಲ್ಲಿ ನೀಡಿದ ಎರಡು ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ಮಾತನಾಡಿದರು.</p>.<p>‘ಆರ್ಥಿಕವಾಗಿ ಹಿಂದುಳಿದ ಬಡ ರೋಗಿಗಳಿಗೆ ಈ ಯಂತ್ರಗಳ ಮೂಲಕ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ. ಒಂದು ವರ್ಷಕ್ಕೆ ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ಒದಗಿಸಬಹುದು. ಆಸ್ಪತ್ರೆಯ ಅಧಿಕಾರಿ, ಸಿಬ್ಬಂದಿಗಳು ನೂತನ ಯಂತ್ರಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಿ ಜನರಿಗೆ ಸಕಾಲಕ್ಕೆ ಸೇವೆ ಒದಗಿಸಬೇಕು’ ಎಂದು ಹೇಳಿದರು.</p>.<p>ಶಾಸಕಿ ಅನ್ನಪೂರ್ಣ ತುಕಾರಾಂ, ಸಂಡೂರು ಪುರಸಭೆಯ ಅಧ್ಯಕ್ಷ ಸಿರಾಜ್ಹುಸೇನ್, ಉಪಾಧ್ಯಕ್ಷೆ ಲತಾ, ತಹಶೀಲ್ದಾರ್ ಅನಿಲ್ಕುಮಾರ್ ಜಿ. ತಾಲ್ಲೂಕು ಪಂಚಾಯಿತಿ ಎಡಿಸಿ ರೇಣುಕಾಚಾರ್ಯಸ್ವಾಮಿ, ಜಿಂದಾಲ್ ನ ಮುಖ್ಯಸ್ಥ ಪೆದ್ದಣ್ಣ, ಆಸ್ಪತ್ರೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>