<p><strong>ಹೊಸಪೇಟೆ</strong>: ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯವರು ಗುರುವಾರ ಇಲ್ಲಿನ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಬಳಿಕ ಸ್ಥಳಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಆಪ್ತ ಕಾರ್ಯದರ್ಶಿ ಧರ್ಮೇಂದ್ರ ಸಿಂಗ್ ಬಂದು ಮನವಿ ಪತ್ರ ಸ್ವೀಕರಿಸಿದರು.</p>.<p>‘ರಾಜ್ಯದ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಂತ ಕೈಯಿಂದ ಹಣ ಭರಿಸಿ, ಆನ್ಲೈನ್ ತರಗತಿಗಳನ್ನು ನಡೆಸಿಕೊಡುತ್ತಿದ್ದಾರೆ. 20–25 ವರ್ಷಗಳಿಂದ ‘ಅತಿಥಿ’ಗಳಾಗಿದ್ದುಕೊಂಡೇ ಸೇವೆ ಸಲ್ಲಿಸುತ್ತಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50,000 ವೇತನ ನಿಗದಿಪಡಿಸಬೇಕೆಂದು ಹೋದ ವರ್ಷ ಯುಜಿಸಿ ಸುತ್ತೋಲೆ ಹೊರಡಿಸಿದೆ. ಹೀಗಿದ್ದರೂ ಅದು ಜಾರಿಗೆ ಬಂದಿಲ್ಲ. ಕೆಲವರಿಗಂತೂ ನಾಲ್ಕೈದು ತಿಂಗಳಿಂದ ವೇತನ ಬಂದಿಲ್ಲ’ ಎಂದು ಮನವಿಯಲ್ಲಿ ಗೋಳು ತೋಡಿಕೊಂಡಿದ್ದಾರೆ.</p>.<p>‘ಲಾಕ್ಡೌನ್ ಬಳಿಕ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಮನೆ ನಡೆಸುವುದು ಕಷ್ಟವಾಗಿದೆ. ಕೆಲವರಂತೂ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನಷ್ಟು ಜನ ಪ್ರಾಣ ಬಿಡುವುದಕ್ಕೂ ಮೊದಲು ಸರ್ಕಾರ ಎಚ್ಚೆತ್ತುಕೊಂಡು ತಕ್ಷಣವೇ ನೆರವಿಗೆ ಧಾವಿಸಬೇಕು’ ಎಂದು ಹಕ್ಕೊತ್ತಾಯ ಮಾಡಿದ್ದಾರೆ. </p>.<p>ಸಮಿತಿಯ ಜಿಲ್ಲಾ ಸಂಚಾಲಕ ಪ್ರಶಾಂತ್ ಬಡಿಗೇರ್, ಸಂಯೋಜಕ ಪಂಪಾಪತಿ, ಸಂಘಟಕರಾದ ಅಭಿಷೇಕ್, ಹುಲುಗಪ್ಪ, ಅರ್ಜುನ, ಪ್ರಾಧ್ಯಾಪಕರಾದ ದೀಪಕ್, ಬಸವರಾಜ್, ಷಣ್ಮುಖಪ್ಪ, ಗೋಣಿಬಸಪ್ಪ, ಅನ್ನಪೂರ್ಣ ಗೋಸ್ವಾಳ್, ಕುಸುಮಾ, ಪದ್ಮಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯವರು ಗುರುವಾರ ಇಲ್ಲಿನ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಬಳಿಕ ಸ್ಥಳಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಆಪ್ತ ಕಾರ್ಯದರ್ಶಿ ಧರ್ಮೇಂದ್ರ ಸಿಂಗ್ ಬಂದು ಮನವಿ ಪತ್ರ ಸ್ವೀಕರಿಸಿದರು.</p>.<p>‘ರಾಜ್ಯದ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಂತ ಕೈಯಿಂದ ಹಣ ಭರಿಸಿ, ಆನ್ಲೈನ್ ತರಗತಿಗಳನ್ನು ನಡೆಸಿಕೊಡುತ್ತಿದ್ದಾರೆ. 20–25 ವರ್ಷಗಳಿಂದ ‘ಅತಿಥಿ’ಗಳಾಗಿದ್ದುಕೊಂಡೇ ಸೇವೆ ಸಲ್ಲಿಸುತ್ತಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50,000 ವೇತನ ನಿಗದಿಪಡಿಸಬೇಕೆಂದು ಹೋದ ವರ್ಷ ಯುಜಿಸಿ ಸುತ್ತೋಲೆ ಹೊರಡಿಸಿದೆ. ಹೀಗಿದ್ದರೂ ಅದು ಜಾರಿಗೆ ಬಂದಿಲ್ಲ. ಕೆಲವರಿಗಂತೂ ನಾಲ್ಕೈದು ತಿಂಗಳಿಂದ ವೇತನ ಬಂದಿಲ್ಲ’ ಎಂದು ಮನವಿಯಲ್ಲಿ ಗೋಳು ತೋಡಿಕೊಂಡಿದ್ದಾರೆ.</p>.<p>‘ಲಾಕ್ಡೌನ್ ಬಳಿಕ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಮನೆ ನಡೆಸುವುದು ಕಷ್ಟವಾಗಿದೆ. ಕೆಲವರಂತೂ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನಷ್ಟು ಜನ ಪ್ರಾಣ ಬಿಡುವುದಕ್ಕೂ ಮೊದಲು ಸರ್ಕಾರ ಎಚ್ಚೆತ್ತುಕೊಂಡು ತಕ್ಷಣವೇ ನೆರವಿಗೆ ಧಾವಿಸಬೇಕು’ ಎಂದು ಹಕ್ಕೊತ್ತಾಯ ಮಾಡಿದ್ದಾರೆ. </p>.<p>ಸಮಿತಿಯ ಜಿಲ್ಲಾ ಸಂಚಾಲಕ ಪ್ರಶಾಂತ್ ಬಡಿಗೇರ್, ಸಂಯೋಜಕ ಪಂಪಾಪತಿ, ಸಂಘಟಕರಾದ ಅಭಿಷೇಕ್, ಹುಲುಗಪ್ಪ, ಅರ್ಜುನ, ಪ್ರಾಧ್ಯಾಪಕರಾದ ದೀಪಕ್, ಬಸವರಾಜ್, ಷಣ್ಮುಖಪ್ಪ, ಗೋಣಿಬಸಪ್ಪ, ಅನ್ನಪೂರ್ಣ ಗೋಸ್ವಾಳ್, ಕುಸುಮಾ, ಪದ್ಮಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>