<p><strong>ವಿಜಯನಗರ (ಹೊಸಪೇಟೆ): </strong>ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆ ಅಡಿ ನಗರದಲ್ಲಿ ಅಳವಡಿಸಲು ₹2 ಕೋಟಿ ಮೊತ್ತದ ವಿದ್ಯುತ್ ದೀಪಗಳನ್ನು ದೇಣಿಗೆ ನೀಡಿದ ದಾನಿಗಳ ಸನ್ಮಾನ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆಯಿತು.</p>.<p>ಆರ್.ಬಿ.ಎಸ್.ಎಸ್.ಎನ್, ಪಿಬಿಎಸ್ ಅಂಡ್ ಸನ್, ಸ್ಮಯೋರ್ ಹಾಗೂ ವೆಸ್ಕೊ ಸಂಸ್ಥೆಯ ಅಜಿತ್ ಕುಮಾರ್, ಬಸವರಾಜ, ಮಲ್ಲಿ, ಧನಂಜಯ್ ಹಾಗೂ ಸಂತೋಷ್ ಅವರನ್ನು ಸತ್ಕರಿಸಲಾಯಿತು.</p>.<p>ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮನ್ಸೂರ್ ಅಲಿ ಮಾತನಾಡಿ, ‘ವಿದ್ಯುತ್ ಉಳಿತಾಯ ಯೋಜನೆ ಅಡಿಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಹೊಸ ಎಲ್ಇಡಿ ದೀಪಗಳನ್ನು ಅಳವಡಿಸಲಾಗುತ್ತಿದೆ. ₹2 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸುರಂಗ ಮಾರ್ಗದ ಎರಡು ಕಡೆ ಹೈಮಾಸ್ಟ್ ದೀಪ, ನಗರದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪ ಅಳವಡಿಸಲಾಗುವುದು. ಪ್ರತಿ ತಿಂಗಳು ನಗರಸಭೆಯು ಜೆಸ್ಕಾಂಗೆ ₹40 ಲಕ್ಷ ಬೀದಿ ದೀಪಗಳ ವಿದ್ಯುತ್ ಬಿಲ್ ತುಂಬುತ್ತದೆ. ಹೊಸ ದೀಪಗಳಿಂದ ಶೇ 50ರಷ್ಟು ಹಣ ಉಳಿತಾಯ ಆಗಲಿದೆ’ ಎಂದು ಹೇಳಿದರು.</p>.<p>ಹುಡಾ ಅಧ್ಯಕ್ಷ ಅಶೋಕ್ ಜೀರೆ, ಡಿವೈಎಸ್ಪಿ ವಿ.ರಘುಕುಮಾರ್, ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಮಹಾಂತೇಶ್ ಸಜ್ಜನ್, ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಶ್ರೀನಿವಾಸ್ ಮೇಟಿ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್, ಸಂದೀಪ್ ಸಿಂಗ್, ಧರ್ಮೇಂದ್ರ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯನಗರ (ಹೊಸಪೇಟೆ): </strong>ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆ ಅಡಿ ನಗರದಲ್ಲಿ ಅಳವಡಿಸಲು ₹2 ಕೋಟಿ ಮೊತ್ತದ ವಿದ್ಯುತ್ ದೀಪಗಳನ್ನು ದೇಣಿಗೆ ನೀಡಿದ ದಾನಿಗಳ ಸನ್ಮಾನ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆಯಿತು.</p>.<p>ಆರ್.ಬಿ.ಎಸ್.ಎಸ್.ಎನ್, ಪಿಬಿಎಸ್ ಅಂಡ್ ಸನ್, ಸ್ಮಯೋರ್ ಹಾಗೂ ವೆಸ್ಕೊ ಸಂಸ್ಥೆಯ ಅಜಿತ್ ಕುಮಾರ್, ಬಸವರಾಜ, ಮಲ್ಲಿ, ಧನಂಜಯ್ ಹಾಗೂ ಸಂತೋಷ್ ಅವರನ್ನು ಸತ್ಕರಿಸಲಾಯಿತು.</p>.<p>ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮನ್ಸೂರ್ ಅಲಿ ಮಾತನಾಡಿ, ‘ವಿದ್ಯುತ್ ಉಳಿತಾಯ ಯೋಜನೆ ಅಡಿಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಹೊಸ ಎಲ್ಇಡಿ ದೀಪಗಳನ್ನು ಅಳವಡಿಸಲಾಗುತ್ತಿದೆ. ₹2 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸುರಂಗ ಮಾರ್ಗದ ಎರಡು ಕಡೆ ಹೈಮಾಸ್ಟ್ ದೀಪ, ನಗರದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪ ಅಳವಡಿಸಲಾಗುವುದು. ಪ್ರತಿ ತಿಂಗಳು ನಗರಸಭೆಯು ಜೆಸ್ಕಾಂಗೆ ₹40 ಲಕ್ಷ ಬೀದಿ ದೀಪಗಳ ವಿದ್ಯುತ್ ಬಿಲ್ ತುಂಬುತ್ತದೆ. ಹೊಸ ದೀಪಗಳಿಂದ ಶೇ 50ರಷ್ಟು ಹಣ ಉಳಿತಾಯ ಆಗಲಿದೆ’ ಎಂದು ಹೇಳಿದರು.</p>.<p>ಹುಡಾ ಅಧ್ಯಕ್ಷ ಅಶೋಕ್ ಜೀರೆ, ಡಿವೈಎಸ್ಪಿ ವಿ.ರಘುಕುಮಾರ್, ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಮಹಾಂತೇಶ್ ಸಜ್ಜನ್, ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಶ್ರೀನಿವಾಸ್ ಮೇಟಿ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್, ಸಂದೀಪ್ ಸಿಂಗ್, ಧರ್ಮೇಂದ್ರ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>