<p><strong>ತೆಕ್ಕಲಕೋಟೆ:</strong> ಸಮೀಪದ ಹಳೇಕೋಟೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ತೆಕ್ಕಲಕೋಟೆಯಿಂದ–ಇಬ್ರಾಹಿಂಪುರ ಹೊರವಲಯದ ವರೆಗಿನ 15.68 ಕಿ.ಮೀ ಕಾಮಗಾರಿಯನ್ನು ಚಿತ್ರದುರ್ಗ ವಿಭಾಗೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಪರಿಶೀಲನೆ ನಡೆಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿನ್ಯಾಸ ಅಧೀಕ್ಷಕ ಎಂಜಿನಿಯರ್ ವೆಂಕಟೇಶ ಕೆ.ಜಿ, 'ಹೆದ್ದಾರಿ ಕಾಮಗಾರಿಯ ರಸ್ತೆ ನಿರ್ಮಾಣದ ವೇಳೆ ಹಾಗೂ ನಂತರ ಅದರ ಗುಣಮಟ್ಟ ಪರಿಶೀಲನೆ ನಡೆಸುವ ಭಾಗವಾಗಿ ಸ್ಥಳ ಭೇಟಿ ನೀಡಿರುವುದಾಗಿ' ಹೇಳಿದರು.</p>.<p>'ಟಾರು (ಕಪ್ಪು ಡಾಂಬರು) ಕೊರತೆ ಹಿನ್ನೆಲೆ ಕಾಮಗಾರಿಗೆ ವಿಳಂಬವಾಗಿದ್ದು, ಈಗ ಹೆಚ್ಚಿನ ಪ್ರಮಾಣದಲ್ಲಿ ಟಾರು ಸಂಗ್ರಹಿಸಲಾಗಿದ್ದು ಸೋಮವಾರ ಯಥಾಪ್ರಕಾರ ಕಾಮಗಾರಿ ವೇಗ ಪಡೆಯಲಿದೆ' ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಂದರ್ ಒಡೆಯರ್ ಮಾತನಾಡಿ, 'ಸಿರುಗುಪ್ಪ ನಗರದಲ್ಲಿನ ಕಾಮಗಾರಿ ವೇಗ ಪಡೆಯಲಿದ್ದು ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ' ಎಂದು ಹೇಳಿದರು.</p>.<p>ಪ್ರಾಧಿಕಾರದ ಕಿರಿಯ ಎಂಜಿನಿಯರ್ ಪ್ರತಾಪ್, ಕಿರಿಯ ವಿನ್ಯಾಸ ಎಂಜಿನಿಯರ್ ಅನಿಲ್ ಕುಮಾರ್, ಗುತ್ತಿಗೆದಾರ ಅಂಜನೇಯಲು ಹಾಗೂ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ಸಮೀಪದ ಹಳೇಕೋಟೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ತೆಕ್ಕಲಕೋಟೆಯಿಂದ–ಇಬ್ರಾಹಿಂಪುರ ಹೊರವಲಯದ ವರೆಗಿನ 15.68 ಕಿ.ಮೀ ಕಾಮಗಾರಿಯನ್ನು ಚಿತ್ರದುರ್ಗ ವಿಭಾಗೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಪರಿಶೀಲನೆ ನಡೆಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿನ್ಯಾಸ ಅಧೀಕ್ಷಕ ಎಂಜಿನಿಯರ್ ವೆಂಕಟೇಶ ಕೆ.ಜಿ, 'ಹೆದ್ದಾರಿ ಕಾಮಗಾರಿಯ ರಸ್ತೆ ನಿರ್ಮಾಣದ ವೇಳೆ ಹಾಗೂ ನಂತರ ಅದರ ಗುಣಮಟ್ಟ ಪರಿಶೀಲನೆ ನಡೆಸುವ ಭಾಗವಾಗಿ ಸ್ಥಳ ಭೇಟಿ ನೀಡಿರುವುದಾಗಿ' ಹೇಳಿದರು.</p>.<p>'ಟಾರು (ಕಪ್ಪು ಡಾಂಬರು) ಕೊರತೆ ಹಿನ್ನೆಲೆ ಕಾಮಗಾರಿಗೆ ವಿಳಂಬವಾಗಿದ್ದು, ಈಗ ಹೆಚ್ಚಿನ ಪ್ರಮಾಣದಲ್ಲಿ ಟಾರು ಸಂಗ್ರಹಿಸಲಾಗಿದ್ದು ಸೋಮವಾರ ಯಥಾಪ್ರಕಾರ ಕಾಮಗಾರಿ ವೇಗ ಪಡೆಯಲಿದೆ' ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಂದರ್ ಒಡೆಯರ್ ಮಾತನಾಡಿ, 'ಸಿರುಗುಪ್ಪ ನಗರದಲ್ಲಿನ ಕಾಮಗಾರಿ ವೇಗ ಪಡೆಯಲಿದ್ದು ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ' ಎಂದು ಹೇಳಿದರು.</p>.<p>ಪ್ರಾಧಿಕಾರದ ಕಿರಿಯ ಎಂಜಿನಿಯರ್ ಪ್ರತಾಪ್, ಕಿರಿಯ ವಿನ್ಯಾಸ ಎಂಜಿನಿಯರ್ ಅನಿಲ್ ಕುಮಾರ್, ಗುತ್ತಿಗೆದಾರ ಅಂಜನೇಯಲು ಹಾಗೂ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>