<p><strong>ತೆಕ್ಕಲಕೋಟೆ:</strong> ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಿಟ್ಟೂರು– ಸಿಂಗಾಪುರ ಸೇತುವೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ, ಕಾಮಗಾರಿ ಆರಂಭಿಸುವ ಕುರಿತು ಶಾಸಕ ಬಿ.ಎಂ.ನಾಗರಾಜ ಸೋಮವಾರ ಬೆಂಗಳೂರಿನ ವಿಧಾನಸೌಧದ ಅಧಿವೇಶನದಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಯಲ್ಲಿ ಪ್ರಶ್ನಿಸಿದರು.</p>.<p>ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಚುಕ್ಕೆ ಗುರುತಿನ ಪ್ರಶ್ನೆ ಕೇಳಿದರು.</p>.<p>‘ಸಿರಗುಪ್ಪ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಿಟ್ಟೂರು ಮತ್ತು ಸಿಂಧನೂರು ತಾಲ್ಲೂಕು ಸಿಂಗಾಪುರ ಗ್ರಾಮದ ಮಧ್ಯ ಬರುವ ತುಂಗಭದ್ರ ನದಿಗೆ ಸೇತುವೆ ನಿರ್ಮಾಣದ ಕುರಿತು ಸರ್ಕಾರದ ಗಮನಕ್ಕೆ ಬಂದಿದೆಯೇ’ ಎಂದು ಪ್ರಶ್ನಿಸಿದರು.</p>.<p>ಸೇತುವೆ ನಿರ್ಮಾಣದಿಂದಾಗಿ ಗಂಗಾವತಿಯಿಂದ ಸಿರುಗುಪ್ಪ ಪಟ್ಟಣ (ಗಂಗಾವತಿ– ಕೊಪ್ಪಳ– ಹುಬ್ಬಳ್ಳಿ– ಬೆಳಗಾವಿ– ಅಂಕೋಲಾ) ಸುಮಾರು 50ಕಿ.ಮೀ ದೂರದ ಪ್ರಯಾಣವು ಕಡಿಮೆಯಾಗುತ್ತದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರಕಿಹೊಳಿ, ‘ಈ ಯೋಜನೆಗೆ ರಾಜ್ಯ ಸರ್ಕಾರದಿಂದ ₹6.50 ಕೋಟಿ ಭೂಸ್ವಾಧೀನ ಮೊತ್ತವನ್ನು ರೇಖಾ ಅಂದಾಜು ಪಟ್ಟಿ ಸರ್ಕಾರದಲ್ಲಿ ಸ್ವೀಕೃತವಾಗಿದ್ದು, ಪರಿಶೀಲನೆಯಲ್ಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಿಟ್ಟೂರು– ಸಿಂಗಾಪುರ ಸೇತುವೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ, ಕಾಮಗಾರಿ ಆರಂಭಿಸುವ ಕುರಿತು ಶಾಸಕ ಬಿ.ಎಂ.ನಾಗರಾಜ ಸೋಮವಾರ ಬೆಂಗಳೂರಿನ ವಿಧಾನಸೌಧದ ಅಧಿವೇಶನದಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಯಲ್ಲಿ ಪ್ರಶ್ನಿಸಿದರು.</p>.<p>ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಚುಕ್ಕೆ ಗುರುತಿನ ಪ್ರಶ್ನೆ ಕೇಳಿದರು.</p>.<p>‘ಸಿರಗುಪ್ಪ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಿಟ್ಟೂರು ಮತ್ತು ಸಿಂಧನೂರು ತಾಲ್ಲೂಕು ಸಿಂಗಾಪುರ ಗ್ರಾಮದ ಮಧ್ಯ ಬರುವ ತುಂಗಭದ್ರ ನದಿಗೆ ಸೇತುವೆ ನಿರ್ಮಾಣದ ಕುರಿತು ಸರ್ಕಾರದ ಗಮನಕ್ಕೆ ಬಂದಿದೆಯೇ’ ಎಂದು ಪ್ರಶ್ನಿಸಿದರು.</p>.<p>ಸೇತುವೆ ನಿರ್ಮಾಣದಿಂದಾಗಿ ಗಂಗಾವತಿಯಿಂದ ಸಿರುಗುಪ್ಪ ಪಟ್ಟಣ (ಗಂಗಾವತಿ– ಕೊಪ್ಪಳ– ಹುಬ್ಬಳ್ಳಿ– ಬೆಳಗಾವಿ– ಅಂಕೋಲಾ) ಸುಮಾರು 50ಕಿ.ಮೀ ದೂರದ ಪ್ರಯಾಣವು ಕಡಿಮೆಯಾಗುತ್ತದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರಕಿಹೊಳಿ, ‘ಈ ಯೋಜನೆಗೆ ರಾಜ್ಯ ಸರ್ಕಾರದಿಂದ ₹6.50 ಕೋಟಿ ಭೂಸ್ವಾಧೀನ ಮೊತ್ತವನ್ನು ರೇಖಾ ಅಂದಾಜು ಪಟ್ಟಿ ಸರ್ಕಾರದಲ್ಲಿ ಸ್ವೀಕೃತವಾಗಿದ್ದು, ಪರಿಶೀಲನೆಯಲ್ಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>