<p><strong>ತೆಕ್ಕಲಕೋಟೆ</strong>: ‘ನಿಟ್ಟೂರು ಹಾಗೂ ಸಿಂಗಾಪುರ ಗ್ರಾಮದ ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಾಗಿ ಕೇಂದ್ರ ಸರ್ಕಾರದ ಸೇತುಬಂಧ ಯೋಜನೆಯಡಿ ಮಂಜೂರಾಗಿದ್ದ ಸೇತುವೆ ನಿರ್ಮಾಣ ಕಾಮಗಾರಿಗೆ ವಿಳಂಬವಾಗಿದೆ’ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ಹೇಳಿದರು.</p>.<p>ಪಟ್ಟಣದ ನಿಟ್ಟೂರು ರಸ್ತೆಯ ಆದೋನಿ ಸಾಹೇಬ್ ಉರುಸು ಪ್ರಯುಕ್ತ ದರ್ಗಾಕ್ಕೆ ಚಾದರ ಸಮರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಈಗಾಗಲೇ ₹ 6.5 ಕೋಟಿ ಮಂಜೂರಾತಿ ನೀಡಿದೆ. ಆದರೆ ಕೇಂದ್ರ ಸರ್ಕಾರ ಸಿಆರ್ಎಫ್ ಯೋಜನೆಯ ಅಡಿ ಅನುದಾನ ಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ’ ಎಂದು ತಿಳಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 150ಎ ನಿಧಾನಗತಿ ಕಾಮಗಾರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದರು, ‘ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರ ನೇರ ಕಾರಣನಾಗಿದ್ದು, ಕಾಮಗಾರಿ ಮುಗಿದ ನಂತರ ತಕ್ಷಣವೇ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದರು.</p>.<p>ಅಖಿಲ ಕರ್ನಾಟಕ ಪಿಂಜಾರ್ ನದಾಫ್ ಸಂಘದ ವತಿಯಿಂದ ಗ್ರಂಥಾಲಯ, ಸಾರ್ವಜನಿಕ ಶೌಚಾಲಯ ಹಾಗೂ ಮಸೀದಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಆನಂದ, ಮುಖಂಡರಾದ ಮಲ್ಲಿಕಾರ್ಜುನ ಬಾಲಪ್ಪ, ನರೇಂದ್ರ ಸಿಂಹ, ದೇವರಮನೆ ನಾಗಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್. ಅಜರುದ್ದೀನ್, ವಕೀಲ ಖಾದರ್ ಬಾಷ, ವಲಿಭಾಷ ಹಾಗೂ ಸಾರ್ವಜನಿಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ‘ನಿಟ್ಟೂರು ಹಾಗೂ ಸಿಂಗಾಪುರ ಗ್ರಾಮದ ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಾಗಿ ಕೇಂದ್ರ ಸರ್ಕಾರದ ಸೇತುಬಂಧ ಯೋಜನೆಯಡಿ ಮಂಜೂರಾಗಿದ್ದ ಸೇತುವೆ ನಿರ್ಮಾಣ ಕಾಮಗಾರಿಗೆ ವಿಳಂಬವಾಗಿದೆ’ ಎಂದು ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ಹೇಳಿದರು.</p>.<p>ಪಟ್ಟಣದ ನಿಟ್ಟೂರು ರಸ್ತೆಯ ಆದೋನಿ ಸಾಹೇಬ್ ಉರುಸು ಪ್ರಯುಕ್ತ ದರ್ಗಾಕ್ಕೆ ಚಾದರ ಸಮರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಈಗಾಗಲೇ ₹ 6.5 ಕೋಟಿ ಮಂಜೂರಾತಿ ನೀಡಿದೆ. ಆದರೆ ಕೇಂದ್ರ ಸರ್ಕಾರ ಸಿಆರ್ಎಫ್ ಯೋಜನೆಯ ಅಡಿ ಅನುದಾನ ಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ’ ಎಂದು ತಿಳಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 150ಎ ನಿಧಾನಗತಿ ಕಾಮಗಾರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದರು, ‘ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರ ನೇರ ಕಾರಣನಾಗಿದ್ದು, ಕಾಮಗಾರಿ ಮುಗಿದ ನಂತರ ತಕ್ಷಣವೇ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದರು.</p>.<p>ಅಖಿಲ ಕರ್ನಾಟಕ ಪಿಂಜಾರ್ ನದಾಫ್ ಸಂಘದ ವತಿಯಿಂದ ಗ್ರಂಥಾಲಯ, ಸಾರ್ವಜನಿಕ ಶೌಚಾಲಯ ಹಾಗೂ ಮಸೀದಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಆನಂದ, ಮುಖಂಡರಾದ ಮಲ್ಲಿಕಾರ್ಜುನ ಬಾಲಪ್ಪ, ನರೇಂದ್ರ ಸಿಂಹ, ದೇವರಮನೆ ನಾಗಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್. ಅಜರುದ್ದೀನ್, ವಕೀಲ ಖಾದರ್ ಬಾಷ, ವಲಿಭಾಷ ಹಾಗೂ ಸಾರ್ವಜನಿಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>