ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಸಂಡೂರಿನ ಸರ್ಕಾರಿ ಶಿಕ್ಷಕ ಇಸ್ಮಾಯಿಲ್ ಎಂಬುವವರು, ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಅವರೊಂದಿಗೆ ಇರುವ ಫೋಟೊವನ್ನು ಏ.2 ರಂದು ವಾಟ್ಸ್ಆಪ್ ಸ್ಟೇಟಸ್ ಹಾಕಿಕೊಂಡು, ಪರೋಕ್ಷವಾಗಿ ಪ್ರಚಾರ ಮಾಡಿದ್ದಾರೆ. ಇಸ್ಮಾಯಿಲ್ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಸಂಡೂರು ಬಿಇಒ, ಸ್ವೀಪ್ ಸಮಿತಿ ನೋಡಲ್ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ, ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅವರು ಆಪಾದಿಸಿದರು.