ಪಟ್ಟಣದ ಪ್ರಮುಖ ರಸ್ತೆಯ ವಿಸ್ತರಣೆ ಕಾರ್ಯ ಪೂರ್ಣಗೊಂಡಿಲ್ಲ. ಗ್ರಾಮ ಪಂಚಾಯಿತಿ ಹಾಗೂ ಬಸ್ ನಿಲ್ದಾಣದ ಮುಂದಿನ ರಸ್ತೆಯೇ ಸರಿ ಇಲ್ಲ. ಸ್ವಲ್ಪ ಮಳೆ ಬಂದರೂ ಇಡೀ ರಸ್ತೆ ಕೊಚ್ಚೆಯಾಗುತ್ತದೆ. ಜನ ಹರಸಾಹಸ ಪಟ್ಟು ಓಡಾಡಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಬಿದ್ದು ಗಾಯಗೊಳ್ಳುವುದು ಖಚಿತ.
ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಮೂರು ವರ್ಷಗಳು ಕಳೆದಿವೆ. ಆದರೆ, ಇದುವರೆಗೆ ಅದನ್ನು ದುರಸ್ತಿಗೊಳಿಸುವ ಗೋಜಿಗೆ ಹೋಗಿಲ್ಲ. ಜನ ಖಾಸಗಿಯವರ ಬಳಿ ಹೆಚ್ಚಿಗೆ ಹಣ ಕೊಟ್ಟು ನೀರು ಕೊಂಡೊಯ್ಯುತ್ತಾರೆ.