‘ಸಂವಿಧಾನ ಹಾಗೂ ಪ್ರಜಾಸತ್ತಾತ್ಮಕ ಸಂಸ್ಥೆಗಳ ರಕ್ಷಣೆಗೆ ಆಗ್ರಹಿಸಿ ಜನಾಂದೋಲನ ಆರಂಭಿಸಲಾಗಿದೆ. ಈಗಾಗಲೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ವಿವಿಧ ಸಂಘ ಸಂಸ್ಥೆಗಳು, ಹೋರಾಟಗಾರರು, ಬರಹಗಾರರು ಬೆಂಬಲ ಸೂಚಿಸಿದ್ದಾರೆ’ ಎಂದು ‘ಸಿಟಿಜನ್ಸ್ ಫಾರ್ ಡೆಮಾಕ್ರಸಿ’ಯ ಮುಖ್ಯಸ್ಥರೂ ಆಗಿರುವ ಹಿರೇಮಠ ತಿಳಿಸಿದರು.