ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಕಲ್ಲುಗಣಿಗಾರಿಕೆ ಸ್ಥಗಿತಕ್ಕೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥ ತಿಮ್ಮಪ್ಪ ಮಾತನಾಡಿ, ಗಣಿಗಾರಿಕೆಯ ಸ್ಪೋಟದಿಂದ ಮನೆಗಳು ಬಿರುಕು ಬಿಟ್ಟಿವೆ, ರಾಸಾಯನಿಕ ಹೆಚ್ಚು ಬಳಸುವುದರಿಂದ ಶ್ವಾಸಕೋಶ ಸಂಬಂಧಿ ರೋಗಗಳು ಬರುತ್ತಿದ್ದು, ಕಲ್ಲಿನ ಕ್ವಾರೆಗಳನ್ನು ಶಾಶ್ವತ ಬಂದ್ ಮಾಡಿಸಿ ಸಾರ್' ಎಂದು ಅಲವತ್ತುಕೊಂಡರು.