<p><strong>ಮರಿಯಮ್ಮನಹಳ್ಳಿ</strong>: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗುರುವಾರ ಕೇಂದ್ರದ ಗುತ್ತಿಗೆ ಆಧಾರಿತ ಶುಶ್ರೂಷಕಿ ಕೆ.ಸುನೀತಾ ಎಂಬುವರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿಯುತ್ತಿದ್ದಂತೆ ಪಟ್ಟಣದ ಮುಖಂಡರು ಕೇಂದ್ರಕ್ಕೆ ಭೇಟಿ ನೀಡಿ, ‘ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿರುವ ಡಾ.ಮಂಜುಳಾ ಅವರನ್ನು ಕೂಡಲೇ ವರ್ಗಾವಣೆ ಮಾಡಿ’ ಎಂdಉ ತಾಲ್ಲೂಕು ಪ್ರಭಾರ ವೈದ್ಯಾಧಿಕಾರಿ ಡಾ.ವಿನೋದ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಡಾ. ವಿನೋದ ಮಾತನಾಡಿ, ‘ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಗೈರಾಗಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಯವರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದರ ಜೊತೆಗೆ ಬೇರೆಡೆಗೆ ತಾತ್ಕಾಲಿಕ ನಿಯೋಜನೆ ಮಾಡಲಾಗುವುದು’ ಎಂದರು.</p>.<p>ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಮಂಜುನಾಥ, ಪ್ರಸನ್ನ ಸೇರಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದರ ಪರಶುರಾಮ, ಮುಖಂಡರಾದ ಎಲೆಗಾರ ಮಂಜುನಾಥ, ಪಿ.ಸೋಮಪ್ಪ, ವಿಶ್ವನಾಥ, ರಾಜ, ಎಚ್.ರಮೇಶ್, ಜಿ.ವಿರೂಪಾಕ್ಷ, ಬಸವರಾಜ, ಕೆ.ಮಂಜುನಾಥ, ಪರಶುರಾಮ, ಅಂಕ್ಲೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ</strong>: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗುರುವಾರ ಕೇಂದ್ರದ ಗುತ್ತಿಗೆ ಆಧಾರಿತ ಶುಶ್ರೂಷಕಿ ಕೆ.ಸುನೀತಾ ಎಂಬುವರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿಯುತ್ತಿದ್ದಂತೆ ಪಟ್ಟಣದ ಮುಖಂಡರು ಕೇಂದ್ರಕ್ಕೆ ಭೇಟಿ ನೀಡಿ, ‘ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿರುವ ಡಾ.ಮಂಜುಳಾ ಅವರನ್ನು ಕೂಡಲೇ ವರ್ಗಾವಣೆ ಮಾಡಿ’ ಎಂdಉ ತಾಲ್ಲೂಕು ಪ್ರಭಾರ ವೈದ್ಯಾಧಿಕಾರಿ ಡಾ.ವಿನೋದ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಡಾ. ವಿನೋದ ಮಾತನಾಡಿ, ‘ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಗೈರಾಗಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಯವರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದರ ಜೊತೆಗೆ ಬೇರೆಡೆಗೆ ತಾತ್ಕಾಲಿಕ ನಿಯೋಜನೆ ಮಾಡಲಾಗುವುದು’ ಎಂದರು.</p>.<p>ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಮಂಜುನಾಥ, ಪ್ರಸನ್ನ ಸೇರಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದರ ಪರಶುರಾಮ, ಮುಖಂಡರಾದ ಎಲೆಗಾರ ಮಂಜುನಾಥ, ಪಿ.ಸೋಮಪ್ಪ, ವಿಶ್ವನಾಥ, ರಾಜ, ಎಚ್.ರಮೇಶ್, ಜಿ.ವಿರೂಪಾಕ್ಷ, ಬಸವರಾಜ, ಕೆ.ಮಂಜುನಾಥ, ಪರಶುರಾಮ, ಅಂಕ್ಲೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>