<p><strong>ಬಳ್ಳಾರಿ</strong>: ಓಬುಳಾಪುರಂ ಮೈನಿಂಗ್ ಕಂಪನಿ ಮತ್ತು ಸಹಚರ ಕಂಪನಿಗಳ ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಆಗಿರುವ ₹884 ಕೋಟಿ ನಷ್ಟವನ್ನು ವಸೂಲಿ ಮಾಡಬೇಕೆಂಬ ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡವು ಗಣಿ ಉದ್ಯಮಿ ಟಪಾಲ್ ಗಣೇಶ್ಗೆ ನೋಟಿಸ್ ಜಾರಿ ಮಾಡಿದೆ. </p>.<p>ಸೋಮವಾರ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್ಐಟಿಯ ಪೊಲೀಸ್ ಅಧೀಕ್ಷಕರು ಸೆ. 6ರಂದು ಟಪಾಲ್ ಗಣೇಶ್ ಅವರಿಗೆ ನೋಟಿಸ್ನಲ್ಲಿ ತಿಳಿಸಲಾಗಿದೆ. </p>.<p>ಓಬುಳಾಪುರಂ ಮೈನಿಂಗ್ ಕಂಪನಿ ಮತ್ತು ಅದರ ಸಹಚರ ಕಂಪನಿಗಳು ಸಂಡೂರು ಕ್ಲಸ್ಟರ್ನಲ್ಲಿ ಸುಮಾರು 29 ಲಕ್ಷ ಮೆ.ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ಉತ್ಪಾದನೆ ಮಾಡಿವೆ. ಸಿದ್ದಾಪುರ ಮತ್ತು ಮಲ್ಲಪ್ಪನಗುಡಿ ಗಣಿ ಪ್ರದೇಶಗಳ ಪರ್ಮಿಟ್ಗಳನ್ನು ದುರುಪಯೋಗಪಡಿಸಿಕೊಂಡು ಅದಿರನ್ನು ಸಾಗಿಸಿ ರಾಜ್ಯಕ್ಕೆ ₹884 ಕೋಟಿ ನಷ್ಟ ಉಂಟು ಮಾಡಿವೆ. ಇದನ್ನು ವಸೂಲು ಮಾಡಬೇಕು ಎಂದು ಟಪಾಲ್ ಗಣೇಶ್ ಆ.18ರಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.</p>.<p>ಈ ವಿಷಯಕ್ಕೆ ಸಂಬಂಧಿಸಿದ ಸೂಕ್ತ ಮಾಹಿತಿ ಮತ್ತು ದಾಖಲೆಗಳೊಂದಿಗೆ ಹಾಜರಾಗುವಂತೆ ಎಸ್ಐಟಿ ಅಧೀಕ್ಷಕರು ತಮ್ಮ ನೋಟಿಸ್ನಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಓಬುಳಾಪುರಂ ಮೈನಿಂಗ್ ಕಂಪನಿ ಮತ್ತು ಸಹಚರ ಕಂಪನಿಗಳ ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಆಗಿರುವ ₹884 ಕೋಟಿ ನಷ್ಟವನ್ನು ವಸೂಲಿ ಮಾಡಬೇಕೆಂಬ ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡವು ಗಣಿ ಉದ್ಯಮಿ ಟಪಾಲ್ ಗಣೇಶ್ಗೆ ನೋಟಿಸ್ ಜಾರಿ ಮಾಡಿದೆ. </p>.<p>ಸೋಮವಾರ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್ಐಟಿಯ ಪೊಲೀಸ್ ಅಧೀಕ್ಷಕರು ಸೆ. 6ರಂದು ಟಪಾಲ್ ಗಣೇಶ್ ಅವರಿಗೆ ನೋಟಿಸ್ನಲ್ಲಿ ತಿಳಿಸಲಾಗಿದೆ. </p>.<p>ಓಬುಳಾಪುರಂ ಮೈನಿಂಗ್ ಕಂಪನಿ ಮತ್ತು ಅದರ ಸಹಚರ ಕಂಪನಿಗಳು ಸಂಡೂರು ಕ್ಲಸ್ಟರ್ನಲ್ಲಿ ಸುಮಾರು 29 ಲಕ್ಷ ಮೆ.ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ಉತ್ಪಾದನೆ ಮಾಡಿವೆ. ಸಿದ್ದಾಪುರ ಮತ್ತು ಮಲ್ಲಪ್ಪನಗುಡಿ ಗಣಿ ಪ್ರದೇಶಗಳ ಪರ್ಮಿಟ್ಗಳನ್ನು ದುರುಪಯೋಗಪಡಿಸಿಕೊಂಡು ಅದಿರನ್ನು ಸಾಗಿಸಿ ರಾಜ್ಯಕ್ಕೆ ₹884 ಕೋಟಿ ನಷ್ಟ ಉಂಟು ಮಾಡಿವೆ. ಇದನ್ನು ವಸೂಲು ಮಾಡಬೇಕು ಎಂದು ಟಪಾಲ್ ಗಣೇಶ್ ಆ.18ರಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.</p>.<p>ಈ ವಿಷಯಕ್ಕೆ ಸಂಬಂಧಿಸಿದ ಸೂಕ್ತ ಮಾಹಿತಿ ಮತ್ತು ದಾಖಲೆಗಳೊಂದಿಗೆ ಹಾಜರಾಗುವಂತೆ ಎಸ್ಐಟಿ ಅಧೀಕ್ಷಕರು ತಮ್ಮ ನೋಟಿಸ್ನಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>