ಪಟ್ಟಣದ ಹೊರವಲಯದಲ್ಲಿ ವಾಹನಗಳ ನಿಲುಗಡೆಗೆ ಪೊಲೀಸ್ ಇಲಾಖೆ ವ್ಯವಸ್ಥೆ ಕಲ್ಪಿಸಿತ್ತು. ಭಕ್ತರ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿತ್ತು. ನಾಡಿನಾದ್ಯಂತ ಆಗಮಿಸಿದ್ದ ಭಕ್ತರು ಸ್ವಾಮಿಯ ದರ್ಶನ ಪಡೆದ ನಂತರ ಕೊಟ್ಟೂರಿನ ವಿಶೇಷ ತಿನಿಸಾದ ಮಂಡಕ್ಕಿ ಮಿರ್ಚಿ ಸವಿಯಲು ಪಳಾರದ ಅಂಗಡಿಗಳಿಗೆ ಮುಗಿಬಿದ್ದು ಖರೀದಿಸಿದ್ದು ವಿಶೇಷವಾಗಿತ್ತು.