<p><strong>ಕೂಡ್ಲಿಗಿ:</strong> ಒನಕೆ ಓಬವ್ವ ಉತ್ಸವ ತಾಲ್ಲೂಕಿನ ಕೀರಿಟಕ್ಕೆ ಒಂದು ಗರಿಮೆ ಇದ್ದಂತೆ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.</p>.<p>ತಾಲ್ಲೂಕಿನ ಗುಡೇಕೋಟೆಯಲ್ಲಿ ಜ. 31 ಹಾಗೂ ಫೆ. 1ರಂದು ನಡೆಯಲಿರುವ ಒನಕ ಓಬವ್ವ ಉತ್ಸವದ ಲಾಂಛನವನ್ನು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಈ ನೆಲದ ಗತವೈಭವವನ್ನು ಸಾರುವ ಈ ಉತ್ಸವವು ನಾಡ ಹಬ್ಬವಿದ್ದಂತೆ. ಆದ್ದರಿಂದ ಸ್ಥಳೀಯರು ಸೇರಿದಂತೆ ಎಲ್ಲರ ಸಹಕಾರದಿಂದ ವಿನೂತನವಾಗಿ ಅದ್ದೂರಿಯಾಗಿ ಆಚರಿಸೋಣ. ಇದಕ್ಕಾಗಿ ₹ 1.5 ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆಯಾಗಲಿದೆ. ಕಾರ್ಯಕ್ರಮ ವೀಕ್ಷಣೆಗೆ ಬರುವವರಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಮತ್ತು ಮೂಲ ಸೌಕರ್ಯ ಒದಗಿಸಲಾಗುವುದು. ಇನ್ನೂ ಉತ್ತಮವಾಗಿ ಕಾರ್ಯಕ್ರಮ ಅಯೋಜಿಸುವ ಬಗ್ಗೆ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗುವುದು’ ಎಂದು ಹೇಳಿದರು.</p>.<p>ತಹಶೀಲ್ದಾರ್ ವಿ.ಕೆ. ನೇತ್ರಾವತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ, ಗುಡೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಕೃಷ್ಣ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಜಿಲಾನ್, ಮುಖಂಡರಾದ ರಾಘವೇಂದ್ರರಾವ್, ಶಿವಪ್ರಸಾದ್ ಗೌಡ, ಉಪನ್ಯಾಸ ನಾಗರಾಜ ಕೊಟ್ರಪ್ಪಗಳ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ಒನಕೆ ಓಬವ್ವ ಉತ್ಸವ ತಾಲ್ಲೂಕಿನ ಕೀರಿಟಕ್ಕೆ ಒಂದು ಗರಿಮೆ ಇದ್ದಂತೆ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.</p>.<p>ತಾಲ್ಲೂಕಿನ ಗುಡೇಕೋಟೆಯಲ್ಲಿ ಜ. 31 ಹಾಗೂ ಫೆ. 1ರಂದು ನಡೆಯಲಿರುವ ಒನಕ ಓಬವ್ವ ಉತ್ಸವದ ಲಾಂಛನವನ್ನು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಈ ನೆಲದ ಗತವೈಭವವನ್ನು ಸಾರುವ ಈ ಉತ್ಸವವು ನಾಡ ಹಬ್ಬವಿದ್ದಂತೆ. ಆದ್ದರಿಂದ ಸ್ಥಳೀಯರು ಸೇರಿದಂತೆ ಎಲ್ಲರ ಸಹಕಾರದಿಂದ ವಿನೂತನವಾಗಿ ಅದ್ದೂರಿಯಾಗಿ ಆಚರಿಸೋಣ. ಇದಕ್ಕಾಗಿ ₹ 1.5 ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆಯಾಗಲಿದೆ. ಕಾರ್ಯಕ್ರಮ ವೀಕ್ಷಣೆಗೆ ಬರುವವರಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಮತ್ತು ಮೂಲ ಸೌಕರ್ಯ ಒದಗಿಸಲಾಗುವುದು. ಇನ್ನೂ ಉತ್ತಮವಾಗಿ ಕಾರ್ಯಕ್ರಮ ಅಯೋಜಿಸುವ ಬಗ್ಗೆ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗುವುದು’ ಎಂದು ಹೇಳಿದರು.</p>.<p>ತಹಶೀಲ್ದಾರ್ ವಿ.ಕೆ. ನೇತ್ರಾವತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ, ಗುಡೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಕೃಷ್ಣ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಜಿಲಾನ್, ಮುಖಂಡರಾದ ರಾಘವೇಂದ್ರರಾವ್, ಶಿವಪ್ರಸಾದ್ ಗೌಡ, ಉಪನ್ಯಾಸ ನಾಗರಾಜ ಕೊಟ್ರಪ್ಪಗಳ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>