<p><strong>ಕೂಡ್ಲಿಗಿ</strong>: ತಾಲ್ಲೂಕಿನ ಗುಡೇಕೋಟೆಯಲ್ಲಿ ಜ. 31 ರಂದು ಹಾಗೂ ಫೆ. 1 ರಂದು ನಡೆಯಲಿರುವ ಒನಕೆ ಓಬವ್ವ ಉತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ವಿ.ಕೆ. ನೇತ್ರಾವತಿ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ನಡೆಸಲು ಮೊಳಕಾಲ್ಮುರು ರಸ್ತೆಯ ಪಕ್ಕದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದ್ದು, 10 ಸಾವಿರ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗದಲ್ಲಿ 2ರಿಂದ 3 ಸಾವಿರ ಗಣ್ಯರು ಕುಳಿತುಕೊಳ್ಳಲು ಸ್ಥಳಾವಕಾಶ ಮಾಡಲಾಗಿದೆ. ಮಾಧ್ಯಮದವರಿಗೆ ಪ್ರತ್ಯೇಕ ಆಸನ ಸೇರಿದಂತೆ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಕಾರ್ಯಕ್ರಮ ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಗ್ರಾಮದಲ್ಲಿ ಸ್ವಚ್ಛತೆ ಕೈಗೊಳ್ಳಲಾಗಿದ್ದು, ಮೆರವಣಿಗೆಯ ಸಂದರ್ಭದಲ್ಲಿ ದೂಳು ಬಾರದಂತೆ ರಸ್ತೆಗೆ ನೀರು ಬಿಡಲು ಗ್ರಾಮ ಪಂಚಾಯಿತಿಯಿಂದ ಕ್ರಮ ಕೈಗೊಳ್ಳಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ ಹೇಳಿದರು.</p>.<p>‘ಉತ್ಸವ ನೋಡಲು ಬರುವವರ ವಾಹನ ನಿಲುಗಡೆಗೆ ವೇದಿಕೆಯ ಬಳಿಯೇ ಸ್ಥಳ ನಿಗದಿ ಮಾಡಲಾಗಿದ್ದು, 3 ಸಿಪಿಐ, 6 ಪಿಎಸ್ಐ ಹಾಗೂ ಗೃಹ ರಕ್ಷಕ ದಳ ಸೇರಿ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ, 1 ಡಿಆರ್ ತುಕಡಿಯನ್ನು ಬಂದೋಬಸ್ತಿಗಾಗಿ ನಿಯೋಜನೆ ಮಾಡಲಾಗಿದೆ’ ಎಂದು ಅವರು ವಿವರಿಸಿದರು. ಸಿಪಿಐ ಪ್ರಲ್ಹಾದ್ ಆರ್. ಚೆನ್ನಗಿರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ</strong>: ತಾಲ್ಲೂಕಿನ ಗುಡೇಕೋಟೆಯಲ್ಲಿ ಜ. 31 ರಂದು ಹಾಗೂ ಫೆ. 1 ರಂದು ನಡೆಯಲಿರುವ ಒನಕೆ ಓಬವ್ವ ಉತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ವಿ.ಕೆ. ನೇತ್ರಾವತಿ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ನಡೆಸಲು ಮೊಳಕಾಲ್ಮುರು ರಸ್ತೆಯ ಪಕ್ಕದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದ್ದು, 10 ಸಾವಿರ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗದಲ್ಲಿ 2ರಿಂದ 3 ಸಾವಿರ ಗಣ್ಯರು ಕುಳಿತುಕೊಳ್ಳಲು ಸ್ಥಳಾವಕಾಶ ಮಾಡಲಾಗಿದೆ. ಮಾಧ್ಯಮದವರಿಗೆ ಪ್ರತ್ಯೇಕ ಆಸನ ಸೇರಿದಂತೆ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಕಾರ್ಯಕ್ರಮ ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಗ್ರಾಮದಲ್ಲಿ ಸ್ವಚ್ಛತೆ ಕೈಗೊಳ್ಳಲಾಗಿದ್ದು, ಮೆರವಣಿಗೆಯ ಸಂದರ್ಭದಲ್ಲಿ ದೂಳು ಬಾರದಂತೆ ರಸ್ತೆಗೆ ನೀರು ಬಿಡಲು ಗ್ರಾಮ ಪಂಚಾಯಿತಿಯಿಂದ ಕ್ರಮ ಕೈಗೊಳ್ಳಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ ಹೇಳಿದರು.</p>.<p>‘ಉತ್ಸವ ನೋಡಲು ಬರುವವರ ವಾಹನ ನಿಲುಗಡೆಗೆ ವೇದಿಕೆಯ ಬಳಿಯೇ ಸ್ಥಳ ನಿಗದಿ ಮಾಡಲಾಗಿದ್ದು, 3 ಸಿಪಿಐ, 6 ಪಿಎಸ್ಐ ಹಾಗೂ ಗೃಹ ರಕ್ಷಕ ದಳ ಸೇರಿ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ, 1 ಡಿಆರ್ ತುಕಡಿಯನ್ನು ಬಂದೋಬಸ್ತಿಗಾಗಿ ನಿಯೋಜನೆ ಮಾಡಲಾಗಿದೆ’ ಎಂದು ಅವರು ವಿವರಿಸಿದರು. ಸಿಪಿಐ ಪ್ರಲ್ಹಾದ್ ಆರ್. ಚೆನ್ನಗಿರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>