<p><strong>ಕುರುಗೋಡು:</strong> ತಾಲ್ಲೂಕಿನ ದಮ್ಮೂರು ಗ್ರಾಮದ ಹುಲಿಗೆಮ್ಮ, ಫಕ್ಕೀರಮ್ಮ, ಉಪ್ಪಾರಳ್ಳಿ ಹೊನ್ನೂರಪ್ಪ ಸಿರಿಗೇರಿ ಗ್ರಾಮದ ಸುಗ್ನಳ್ಳಿ ರುದ್ರಪ್ಪ, ಲಿಂಗಪ್ಪ ಮತ್ತು ಪ್ರಕಾಶ ಅವರ 15 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಲ್ಲಿ ಕೊಚ್ಚಿಹೋಗಿದೆ.</p>.<p>ಕಟಾವು ಮಾಡಿದ ಈರುಳ್ಳಿಯನ್ನು ಚೀಲಗಳಿಗೆ ತುಂಬಿ ಮಾರಾಟ ಮಾಡಬೇಕು ಎನ್ನುವ ಸಂದರ್ಭದಲ್ಲಿ ನಿರಂತರವಾಗಿ ಸುರಿದ ಮಳೆ ಅವರ ಲಾಭದ ನಿರೀಕ್ಷೆಗೆ ತಣ್ಣೀರೆರಚಿದೆ. ಮಳೆಯಲ್ಲಿ ತೋಯ್ದು ನಷ್ಟವಾಗಿರುವುದು ಒಂದಾದರೆ ಮಾರುಕಟ್ಟೆಯಲ್ಲಿ ಬೆಲೆಕುಸಿತ ರೈತರ ಗಾಯದ ಮೇಲೆ ಬಲೆ ಎಳೆದಂತಾಗಿದೆ.</p>.<p>ಈರುಳ್ಳಿ ಮಳೆಯಲ್ಲಿ ತೋಯ್ದ ಪರಿಣಾಮ ಜಮೀನುಗಳಲ್ಲಿಯೇ ಮೊಳಕೆಯೊಡೆಯಲಾರಂಭಿಸಿದೆ. ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹10 ಬೆಲೆದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಲ್ಲಿ ತೋಯ್ದ ಈರುಳ್ಳಿಯನ್ನು ಚೀಲಗಳಿಗೆ ತುಂಬಿಸಿ ಮಾರುಕಟ್ಟೆಗೆ ಸಾಗಿಸಿ ಮಾರಾಟಮಾಡಿದರೆ ಕಾರ್ಮಿಕರ ಕೂಲಿ ಮತ್ತು ಸಾಗಾಟ ವೆಚ್ಚಕೂಡ ದೊರೆಯುವುದು ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹತಾಶರಾದ ರೈತರು ಈರುಳ್ಳಿಯನ್ನು ಜಮೀನುಗಳಲ್ಲಿಯೇ ಬಿಟ್ಟು ಕೈಕಟ್ಟಿಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಕಳೆದ ವರ್ಷ ಮೆಣಸಿನಕಾಯಿ ಬೆಳೆದು ಜೇಬು ತುಂಬಿಸಿಕೊಂಡಿದ್ದೆವು. ಈ ವರ್ಷ 4 ಎಕರೆಯಲ್ಲಿ ಬೆಳೆದ ಈರುಳ್ಳಿ ಜಮೀನಿನಲ್ಲಿಯೇ ಮೊಳಕೆ ಬಂದು ಸಂಪೂರ್ಣ ನಾಶವಾಗಿದೆ. ಈ ವರ್ಷ ಈರುಳ್ಳಿ ಬೆಳೆದು ಜೇಬು ಖಾಲಿ ಮಾಡಿಕೊಂಡಿದ್ದೇವೆ ಎಂದು ರೈತರಾದ ಸುಗ್ನಳ್ಳಿ ರುದ್ರಪ್ಪ, ಲಿಂಗಪ್ಪ ಮತ್ತು ಪ್ರಕಾಶ್ ಅಳಲು ತೋಡಿಕೊಂಡರು.</p>.<p>ಜಿಲ್ಲಾಡಳಿತ ಕೂಡಲೇ ಈರುಳ್ಳಿ ಬೆಳೆದ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆಯಿಂದ ನಷ್ಟವಾದ ಈರುಳ್ಳಿ ಬೆಳೆದ ಜಮೀನುಗಳಿಗೆ ಸೋಮವಾರ ಭೇಟಿ ನೀಡಿದ್ದು, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಹಶೀಲ್ದಾರ್ ನರಸಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು:</strong> ತಾಲ್ಲೂಕಿನ ದಮ್ಮೂರು ಗ್ರಾಮದ ಹುಲಿಗೆಮ್ಮ, ಫಕ್ಕೀರಮ್ಮ, ಉಪ್ಪಾರಳ್ಳಿ ಹೊನ್ನೂರಪ್ಪ ಸಿರಿಗೇರಿ ಗ್ರಾಮದ ಸುಗ್ನಳ್ಳಿ ರುದ್ರಪ್ಪ, ಲಿಂಗಪ್ಪ ಮತ್ತು ಪ್ರಕಾಶ ಅವರ 15 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಲ್ಲಿ ಕೊಚ್ಚಿಹೋಗಿದೆ.</p>.<p>ಕಟಾವು ಮಾಡಿದ ಈರುಳ್ಳಿಯನ್ನು ಚೀಲಗಳಿಗೆ ತುಂಬಿ ಮಾರಾಟ ಮಾಡಬೇಕು ಎನ್ನುವ ಸಂದರ್ಭದಲ್ಲಿ ನಿರಂತರವಾಗಿ ಸುರಿದ ಮಳೆ ಅವರ ಲಾಭದ ನಿರೀಕ್ಷೆಗೆ ತಣ್ಣೀರೆರಚಿದೆ. ಮಳೆಯಲ್ಲಿ ತೋಯ್ದು ನಷ್ಟವಾಗಿರುವುದು ಒಂದಾದರೆ ಮಾರುಕಟ್ಟೆಯಲ್ಲಿ ಬೆಲೆಕುಸಿತ ರೈತರ ಗಾಯದ ಮೇಲೆ ಬಲೆ ಎಳೆದಂತಾಗಿದೆ.</p>.<p>ಈರುಳ್ಳಿ ಮಳೆಯಲ್ಲಿ ತೋಯ್ದ ಪರಿಣಾಮ ಜಮೀನುಗಳಲ್ಲಿಯೇ ಮೊಳಕೆಯೊಡೆಯಲಾರಂಭಿಸಿದೆ. ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹10 ಬೆಲೆದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಲ್ಲಿ ತೋಯ್ದ ಈರುಳ್ಳಿಯನ್ನು ಚೀಲಗಳಿಗೆ ತುಂಬಿಸಿ ಮಾರುಕಟ್ಟೆಗೆ ಸಾಗಿಸಿ ಮಾರಾಟಮಾಡಿದರೆ ಕಾರ್ಮಿಕರ ಕೂಲಿ ಮತ್ತು ಸಾಗಾಟ ವೆಚ್ಚಕೂಡ ದೊರೆಯುವುದು ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹತಾಶರಾದ ರೈತರು ಈರುಳ್ಳಿಯನ್ನು ಜಮೀನುಗಳಲ್ಲಿಯೇ ಬಿಟ್ಟು ಕೈಕಟ್ಟಿಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಕಳೆದ ವರ್ಷ ಮೆಣಸಿನಕಾಯಿ ಬೆಳೆದು ಜೇಬು ತುಂಬಿಸಿಕೊಂಡಿದ್ದೆವು. ಈ ವರ್ಷ 4 ಎಕರೆಯಲ್ಲಿ ಬೆಳೆದ ಈರುಳ್ಳಿ ಜಮೀನಿನಲ್ಲಿಯೇ ಮೊಳಕೆ ಬಂದು ಸಂಪೂರ್ಣ ನಾಶವಾಗಿದೆ. ಈ ವರ್ಷ ಈರುಳ್ಳಿ ಬೆಳೆದು ಜೇಬು ಖಾಲಿ ಮಾಡಿಕೊಂಡಿದ್ದೇವೆ ಎಂದು ರೈತರಾದ ಸುಗ್ನಳ್ಳಿ ರುದ್ರಪ್ಪ, ಲಿಂಗಪ್ಪ ಮತ್ತು ಪ್ರಕಾಶ್ ಅಳಲು ತೋಡಿಕೊಂಡರು.</p>.<p>ಜಿಲ್ಲಾಡಳಿತ ಕೂಡಲೇ ಈರುಳ್ಳಿ ಬೆಳೆದ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆಯಿಂದ ನಷ್ಟವಾದ ಈರುಳ್ಳಿ ಬೆಳೆದ ಜಮೀನುಗಳಿಗೆ ಸೋಮವಾರ ಭೇಟಿ ನೀಡಿದ್ದು, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಹಶೀಲ್ದಾರ್ ನರಸಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>