<p><strong>ಬಳ್ಳಾರಿ:</strong> ನಗರದ ‘ಹಿಂದೂಸ್ತಾನ್ ಕ್ಯಾಲ್ಸಿನ್ಡ್ ಮೆಟಲ್ಸ್ ಪ್ರೈವೆಟ್ ಲಿಮಿಟೆಡ್’ಗೆ ₹2.11 ಕೋಟಿ ವಂಚಿಸಿದ್ದ ಆನ್ಲೈನ್ ವಂಚಕರ ತಂಡದ ದುಷ್ಕರ್ಮಿಯೊಬ್ಬನನ್ನು ಬಂಧಿಸುವಲ್ಲಿ ಬಳ್ಳಾರಿಯ ಸೈಬರ್, ಆರ್ಥಿಕ, ಮಾದಕ ವಸ್ತು (ಸಿಇಎನ್) ಅಪರಾಧ ಪೊಲೀಸರು ಯಶಸ್ವಿಯಾಗಿದ್ದಾರೆ. </p>.<p>ವಂಚನೆಯ ಜಾಲ ಬೆನ್ನುಹತ್ತಿದ್ದ ಸಿಇಎನ್ ವಿಭಾಗದ ಡಿಎಸ್ಪಿ ಸಂತೋಷ್ ಚೌವ್ಹಾಣ್ ಅವರ ತಂಡ, ಮಧ್ಯಪ್ರದೇಶಕ್ಕೆ ತೆರಳಿ ಸಿದಿ ಜಿಲ್ಲೆಯ ಅಜಯ್ ಕುಮಾರ್ ಜೈಸ್ವಾಲ್ ಎಂಬಾತನನ್ನು ಬಂಧಿಸಿ ರಾಜ್ಯಕ್ಕೆ ಕರೆತಂದಿದ್ದಾರೆ. </p>.<p>‘ಅಜಯ್ ಕುಮಾರ್ ಬಂಧನದಿಂದಾಗಿ ₹1.21 ಕೋಟಿ ವಶಕ್ಕೆ ಪಡೆಯಲು ಸಾಧ್ಯವಾಗಿದೆ. ಇದರ ಜತೆಗೆ ₹27.97 ಲಕ್ಷವನ್ನು ಖಾತೆಯಲ್ಲೇ ಫ್ರೀಜ್ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ ಒಂದು ಮೊಬೈಲ್ ಜಫ್ತಿ ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಕಿಂಗ್ಪಿನ್ಗಾಗಿ ಹುಡುಕಾಟ: ‘ಅಜಯ್ ಸಿದಿ ಜಿಲ್ಲೆಯಲ್ಲಿ ಡೇಟಾ ಆಪರೇಟರ್ ಆಗಿದ್ದು, ಕಿಂಗ್ಪಿನ್ನ ಆಜ್ಞೆಯಂತೆ ನಡೆದುಕೊಳ್ಳುತ್ತಿದ್ದ. ತನಗೆ ಬಂದ ಸೂಚನೆಯಂತೆ ಹಣ ವರ್ಗಾವಣೆ, ಡ್ರಾ ಮಾಡುತ್ತಿದ್ದ. ಈ ಪ್ರಕರಣದಲ್ಲಿ ಹಣವನ್ನು 18 ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಲಾಗಿತ್ತು ಎನ್ನಲಾಗಿದೆ. ಕಿಂಗ್ಪಿನ್ ದೆಹಲಿಯಲ್ಲಿದ್ದು ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ಸಿಇಎನ್ ಠಾಣೆ ಡಿಎಸ್ಪಿ ಸಂತೋಷ ಚವ್ಹಾಣ್ ನೇತೃತ್ವದ ತಂಡದಲ್ಲಿ ಇನ್ಸ್ಪೆಕ್ಟರ್ ರಮಾಕಾಂತ್. ವೈ.ಎಚ್., ಸಿಬ್ಬಂದಿ ಎಂ.ಜಿ. ತಿಪ್ಪೇರುದ್ರಪ್ಪ, ಹನುಮಂತರೆಡ್ಡಿ, ಯಲ್ಲೇಶಿ, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ನಗರದ ‘ಹಿಂದೂಸ್ತಾನ್ ಕ್ಯಾಲ್ಸಿನ್ಡ್ ಮೆಟಲ್ಸ್ ಪ್ರೈವೆಟ್ ಲಿಮಿಟೆಡ್’ಗೆ ₹2.11 ಕೋಟಿ ವಂಚಿಸಿದ್ದ ಆನ್ಲೈನ್ ವಂಚಕರ ತಂಡದ ದುಷ್ಕರ್ಮಿಯೊಬ್ಬನನ್ನು ಬಂಧಿಸುವಲ್ಲಿ ಬಳ್ಳಾರಿಯ ಸೈಬರ್, ಆರ್ಥಿಕ, ಮಾದಕ ವಸ್ತು (ಸಿಇಎನ್) ಅಪರಾಧ ಪೊಲೀಸರು ಯಶಸ್ವಿಯಾಗಿದ್ದಾರೆ. </p>.<p>ವಂಚನೆಯ ಜಾಲ ಬೆನ್ನುಹತ್ತಿದ್ದ ಸಿಇಎನ್ ವಿಭಾಗದ ಡಿಎಸ್ಪಿ ಸಂತೋಷ್ ಚೌವ್ಹಾಣ್ ಅವರ ತಂಡ, ಮಧ್ಯಪ್ರದೇಶಕ್ಕೆ ತೆರಳಿ ಸಿದಿ ಜಿಲ್ಲೆಯ ಅಜಯ್ ಕುಮಾರ್ ಜೈಸ್ವಾಲ್ ಎಂಬಾತನನ್ನು ಬಂಧಿಸಿ ರಾಜ್ಯಕ್ಕೆ ಕರೆತಂದಿದ್ದಾರೆ. </p>.<p>‘ಅಜಯ್ ಕುಮಾರ್ ಬಂಧನದಿಂದಾಗಿ ₹1.21 ಕೋಟಿ ವಶಕ್ಕೆ ಪಡೆಯಲು ಸಾಧ್ಯವಾಗಿದೆ. ಇದರ ಜತೆಗೆ ₹27.97 ಲಕ್ಷವನ್ನು ಖಾತೆಯಲ್ಲೇ ಫ್ರೀಜ್ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ ಒಂದು ಮೊಬೈಲ್ ಜಫ್ತಿ ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಕಿಂಗ್ಪಿನ್ಗಾಗಿ ಹುಡುಕಾಟ: ‘ಅಜಯ್ ಸಿದಿ ಜಿಲ್ಲೆಯಲ್ಲಿ ಡೇಟಾ ಆಪರೇಟರ್ ಆಗಿದ್ದು, ಕಿಂಗ್ಪಿನ್ನ ಆಜ್ಞೆಯಂತೆ ನಡೆದುಕೊಳ್ಳುತ್ತಿದ್ದ. ತನಗೆ ಬಂದ ಸೂಚನೆಯಂತೆ ಹಣ ವರ್ಗಾವಣೆ, ಡ್ರಾ ಮಾಡುತ್ತಿದ್ದ. ಈ ಪ್ರಕರಣದಲ್ಲಿ ಹಣವನ್ನು 18 ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಲಾಗಿತ್ತು ಎನ್ನಲಾಗಿದೆ. ಕಿಂಗ್ಪಿನ್ ದೆಹಲಿಯಲ್ಲಿದ್ದು ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ಸಿಇಎನ್ ಠಾಣೆ ಡಿಎಸ್ಪಿ ಸಂತೋಷ ಚವ್ಹಾಣ್ ನೇತೃತ್ವದ ತಂಡದಲ್ಲಿ ಇನ್ಸ್ಪೆಕ್ಟರ್ ರಮಾಕಾಂತ್. ವೈ.ಎಚ್., ಸಿಬ್ಬಂದಿ ಎಂ.ಜಿ. ತಿಪ್ಪೇರುದ್ರಪ್ಪ, ಹನುಮಂತರೆಡ್ಡಿ, ಯಲ್ಲೇಶಿ, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>