<p><strong>ಸಿರುಗುಪ್ಪ</strong>: ತಾಲ್ಲೂಕಿನ ಬೀರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರಗಾಮದಿನ್ನೆ ಗ್ರಾಮದಲ್ಲಿ ಮಳೆ ಬಂದರೆ ಶಾಲೆಯ ವಿದ್ಯಾರ್ಥಿಗಳಿಗೆ ದೇವಸ್ಥಾನದ ಆವರಣವೇ ಬಯಲು ಪಾಠಶಾಲೆ. ಹೆಚ್ಚಿನ ಮಳೆ ಬಂದರಂತೂ ವಿದ್ಯಾರ್ಥಿಗಳು ಬಯಲಲ್ಲಿ ಕುಳಿತುಕೊಳ್ಳಲು ಆಗದೇ ಶಾಲೆಯಲ್ಲಿ ನಿಂತುಕೊಳ್ಳಲು ಸಾಧ್ಯವಾಗದೆ ಮನೆ ದಾರಿ ಹಿಡಿಯುವುದು ಅನಿವಾರ್ಯವಾಗಿದೆ.</p>.<p>ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 130 ವಿದ್ಯಾರ್ಥಿಗಳು 1ರಿಂದ 5ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಐದು ತರಗತಿಗಳ ವಿದ್ಯಾರ್ಥಿಗಳಿಗಾಗಿ ಈ ಹಿಂದೆ ಕಟ್ಟಲಾಗಿರುವ ಮೂರು ಕೊಠಡಿಗಳ ಕಟ್ಟಡಗಳು ತೊಟ್ಟಿಕ್ಕುತ್ತಿದ್ದು, ಮಳೆಯಾದರೆ ಸಾಕು ತರಗತಿಗಳು ಸೋರುತ್ತಿವೆ. ವಿದ್ಯಾರ್ಥಿಗಳು ಈ ಕೊಠಡಿಗಳಲ್ಲಿ ಕುಳಿತು ಪಾಠ ಪ್ರವಚನ ಕೇಳಲು ಸಾಧ್ಯವಿಲ್ಲ.</p>.<p>ವಿದ್ಯಾರ್ಥಿಗಳು ಕುಳಿತುಕೊಂಡು ಪಾಠ ಪ್ರವಚನ ಕೇಳಲು ಈ ಗ್ರಾಮದಲ್ಲಿ ಉತ್ತಮವಾದ ಸಮುದಾಯ ಭವನ ಇಲ್ಲದ ಕಾರಣ ಶಿಕ್ಷಕರು ಅನಿವಾರ್ಯವಾಗಿ ಬಯಲು ಜಾಗದಲ್ಲಿಯೇ ವಿದ್ಯಾರ್ಥಿಗಳನ್ನು ಕೂಡಿಸುತ್ತಿದ್ದಾರೆ.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿ 5 ಹೊಸ ಶಾಲಾ ಕೊಠಡಿ ನಿರ್ಮಿಸಲು ಅನುದಾನ ಬಿಡುಗಡೆಯಾಗಿದೆ. ಆದರೆ ಸದ್ಯ ಇರುವ ಶಾಲೆಯ ಹಿಂದಿನ ಬಯಲು ಜಾಗ ತಮ್ಮದೆಂದು ಗ್ರಾಮಸ್ಥರೊಬ್ಬರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಹೊಸ ಕೊಠಡಿ ನಿರ್ಮಿಸಲು ಸಾಧ್ಯವಾಗಿಲ್ಲವೆಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.</p>.<p>‘ಸದ್ಯ ಇರುವ ಮೂರು ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ ಈ 5 ಹೊಸ ಶಾಲಾ ಕಟ್ಟಡ ನಿರ್ಮಿಸಲು ಅನುದಾನವಿದೆ. ಆದರೆ 5 ಕೊಠಡಿಗಳ ನಿರ್ಮಾಣಕ್ಕೆ ಬೇಕಾದ ಖಾಲಿ ಜಾಗ ವಿವಾದದಲ್ಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತಮವಾದ ಸ್ಥಳದಲ್ಲಿ ಪಾಠ ಪ್ರವಚನ ಮಾಡಿಸಲು ಕ್ರಮ ತೆಗೆದುಕೊಳ್ಳುವುದಾಗಿ’ ಬಿ.ಇ.ಒ. ಎಚ್.ಗುರಪ್ಪ ತಿಳಿಸಿದ್ದಾರೆ.</p>.<p>5ನೇ ತರಗತಿ ವಿದ್ಯಾರ್ಥಿಗಳನ್ನು ಸೋರುತ್ತಿರುವ ಕೊಠಡಿಯಲ್ಲಿಯೇ ನೀರು ಬೀಳದ ಜಾಗದಲ್ಲಿ ಕೂಡಿಸಿ ಪಾಠ ಮಾಡುತ್ತಿದ್ದೇವೆ </p><p><strong>-ದೊಡ್ಡಪ್ಪ ಕೋರ ಮುಖ್ಯಶಿಕ್ಷಕ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ತಾಲ್ಲೂಕಿನ ಬೀರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರಗಾಮದಿನ್ನೆ ಗ್ರಾಮದಲ್ಲಿ ಮಳೆ ಬಂದರೆ ಶಾಲೆಯ ವಿದ್ಯಾರ್ಥಿಗಳಿಗೆ ದೇವಸ್ಥಾನದ ಆವರಣವೇ ಬಯಲು ಪಾಠಶಾಲೆ. ಹೆಚ್ಚಿನ ಮಳೆ ಬಂದರಂತೂ ವಿದ್ಯಾರ್ಥಿಗಳು ಬಯಲಲ್ಲಿ ಕುಳಿತುಕೊಳ್ಳಲು ಆಗದೇ ಶಾಲೆಯಲ್ಲಿ ನಿಂತುಕೊಳ್ಳಲು ಸಾಧ್ಯವಾಗದೆ ಮನೆ ದಾರಿ ಹಿಡಿಯುವುದು ಅನಿವಾರ್ಯವಾಗಿದೆ.</p>.<p>ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 130 ವಿದ್ಯಾರ್ಥಿಗಳು 1ರಿಂದ 5ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಐದು ತರಗತಿಗಳ ವಿದ್ಯಾರ್ಥಿಗಳಿಗಾಗಿ ಈ ಹಿಂದೆ ಕಟ್ಟಲಾಗಿರುವ ಮೂರು ಕೊಠಡಿಗಳ ಕಟ್ಟಡಗಳು ತೊಟ್ಟಿಕ್ಕುತ್ತಿದ್ದು, ಮಳೆಯಾದರೆ ಸಾಕು ತರಗತಿಗಳು ಸೋರುತ್ತಿವೆ. ವಿದ್ಯಾರ್ಥಿಗಳು ಈ ಕೊಠಡಿಗಳಲ್ಲಿ ಕುಳಿತು ಪಾಠ ಪ್ರವಚನ ಕೇಳಲು ಸಾಧ್ಯವಿಲ್ಲ.</p>.<p>ವಿದ್ಯಾರ್ಥಿಗಳು ಕುಳಿತುಕೊಂಡು ಪಾಠ ಪ್ರವಚನ ಕೇಳಲು ಈ ಗ್ರಾಮದಲ್ಲಿ ಉತ್ತಮವಾದ ಸಮುದಾಯ ಭವನ ಇಲ್ಲದ ಕಾರಣ ಶಿಕ್ಷಕರು ಅನಿವಾರ್ಯವಾಗಿ ಬಯಲು ಜಾಗದಲ್ಲಿಯೇ ವಿದ್ಯಾರ್ಥಿಗಳನ್ನು ಕೂಡಿಸುತ್ತಿದ್ದಾರೆ.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿ 5 ಹೊಸ ಶಾಲಾ ಕೊಠಡಿ ನಿರ್ಮಿಸಲು ಅನುದಾನ ಬಿಡುಗಡೆಯಾಗಿದೆ. ಆದರೆ ಸದ್ಯ ಇರುವ ಶಾಲೆಯ ಹಿಂದಿನ ಬಯಲು ಜಾಗ ತಮ್ಮದೆಂದು ಗ್ರಾಮಸ್ಥರೊಬ್ಬರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಹೊಸ ಕೊಠಡಿ ನಿರ್ಮಿಸಲು ಸಾಧ್ಯವಾಗಿಲ್ಲವೆಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.</p>.<p>‘ಸದ್ಯ ಇರುವ ಮೂರು ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ ಈ 5 ಹೊಸ ಶಾಲಾ ಕಟ್ಟಡ ನಿರ್ಮಿಸಲು ಅನುದಾನವಿದೆ. ಆದರೆ 5 ಕೊಠಡಿಗಳ ನಿರ್ಮಾಣಕ್ಕೆ ಬೇಕಾದ ಖಾಲಿ ಜಾಗ ವಿವಾದದಲ್ಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತಮವಾದ ಸ್ಥಳದಲ್ಲಿ ಪಾಠ ಪ್ರವಚನ ಮಾಡಿಸಲು ಕ್ರಮ ತೆಗೆದುಕೊಳ್ಳುವುದಾಗಿ’ ಬಿ.ಇ.ಒ. ಎಚ್.ಗುರಪ್ಪ ತಿಳಿಸಿದ್ದಾರೆ.</p>.<p>5ನೇ ತರಗತಿ ವಿದ್ಯಾರ್ಥಿಗಳನ್ನು ಸೋರುತ್ತಿರುವ ಕೊಠಡಿಯಲ್ಲಿಯೇ ನೀರು ಬೀಳದ ಜಾಗದಲ್ಲಿ ಕೂಡಿಸಿ ಪಾಠ ಮಾಡುತ್ತಿದ್ದೇವೆ </p><p><strong>-ದೊಡ್ಡಪ್ಪ ಕೋರ ಮುಖ್ಯಶಿಕ್ಷಕ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>