<p><strong>ಸಿರುಗುಪ್ಪ:</strong> ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಗೋರಕ್ಷಕರು ಹಾಗೂ ವಿವಿಧ ಸಂಘಟನೆಯ ಮುಖಂಡರು ತಡೆದು ರಕ್ಷಿಸಿರುವ ಘಟನೆ ಮಂಗಳವಾರ ನಡೆಯಿತು.</p>.<p>ಮಂಗಳವಾರ ಮುಂಜನೆ ಬೆಳಗಾವಿ ಜಿಲ್ಲೆಯ ನಿಪ್ಪಣಿಯಿಂದ ಸಿರುಗುಪ್ಪ ಮೂಲಕ ಕೇರಳದ ಕಾಸರಗೋಡಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಕಂಟೇನರ್ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯಲ್ಲಿ ನಗರದ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದ ಹತ್ತಿರ ತಡೆದು ನಿಲ್ಲಿಸಿ ತಪಾಸಣೆ ನಡೆಸಿದರು.</p>.<p>ಲಾರಿಯಲ್ಲಿದ್ದ 28 ಎತ್ತುಗಳು, ಒಂದು ಕೋಣ, ಹಾಗೂ ಕಂಟೇನರ್ ಲಾರಿಯನ್ನು ವಶಪಡಿಸಿಕೊಳ್ಳಲಾಯಿತು. ಲಾರಿ ಚಾಲಕ ಹುಸೇನ್ರ, ಸಹಾಯಕ ಸೌತಾಲಿಖಾನ್ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ವಶಪಡಿಸಿಕೊಂಡ ಜಾನುವಾರುಗಳನ್ನು ಕೊಪ್ಪಳ ಜಿಲ್ಲೆಯ ಆನೆಗುಂದಿ ಗ್ರಾಮದ ದುರ್ಗಾದೇವಿ ಗೋಶಾಲೆಗೆ ಸಾಗಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಗೋರಕ್ಷಕರು ಹಾಗೂ ವಿವಿಧ ಸಂಘಟನೆಯ ಮುಖಂಡರು ತಡೆದು ರಕ್ಷಿಸಿರುವ ಘಟನೆ ಮಂಗಳವಾರ ನಡೆಯಿತು.</p>.<p>ಮಂಗಳವಾರ ಮುಂಜನೆ ಬೆಳಗಾವಿ ಜಿಲ್ಲೆಯ ನಿಪ್ಪಣಿಯಿಂದ ಸಿರುಗುಪ್ಪ ಮೂಲಕ ಕೇರಳದ ಕಾಸರಗೋಡಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಕಂಟೇನರ್ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯಲ್ಲಿ ನಗರದ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದ ಹತ್ತಿರ ತಡೆದು ನಿಲ್ಲಿಸಿ ತಪಾಸಣೆ ನಡೆಸಿದರು.</p>.<p>ಲಾರಿಯಲ್ಲಿದ್ದ 28 ಎತ್ತುಗಳು, ಒಂದು ಕೋಣ, ಹಾಗೂ ಕಂಟೇನರ್ ಲಾರಿಯನ್ನು ವಶಪಡಿಸಿಕೊಳ್ಳಲಾಯಿತು. ಲಾರಿ ಚಾಲಕ ಹುಸೇನ್ರ, ಸಹಾಯಕ ಸೌತಾಲಿಖಾನ್ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ವಶಪಡಿಸಿಕೊಂಡ ಜಾನುವಾರುಗಳನ್ನು ಕೊಪ್ಪಳ ಜಿಲ್ಲೆಯ ಆನೆಗುಂದಿ ಗ್ರಾಮದ ದುರ್ಗಾದೇವಿ ಗೋಶಾಲೆಗೆ ಸಾಗಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>