<p><strong>ಕಂಪ್ಲಿ: ‘</strong>ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಕೃತ್ಯ ಅಮಾನವೀಯ. ಇಂಥ ಘಟನೆ ಮರುಕಳಿಸಿದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,‘ಪಹಲ್ಗಾಮ್ ವಿಚಾರದಲ್ಲಿ ರಾಜಕೀಯ ಸಲ್ಲದು’ ಎಂದರು.</p>.<p>‘ಪ್ರವೇಶ ಪರೀಕ್ಷೆಗಳಲ್ಲಿ ಜನಿವಾರ, ತಾಳಿ ತೆಗೆಸೋದು ತಪ್ಪು. ಪರೀಕ್ಷೆ ಸಂದರ್ಭದಲ್ಲಿ ನಕಲು ಮಾಡಿದವರನ್ನು ಡಿಬಾರ್ ಮಾಡಿ ಪರೀಕ್ಷೆಗಳ ಪಾವಿತ್ರ್ಯತೆ ಕಾಪಾಡಿ’ ಎಂದು ತಿಳಿಸಿದರು.</p>.<p>‘ಪ್ರಸ್ತುತ ರಾಜಕೀಯ ರಂಗದಲ್ಲಿ ನೈತಿಕತೆ ಉಳಿದಿಲ್ಲ. ಹಣದ ಮೇಲೆ ರಾಜಕೀಯ ನಡೆಯುತ್ತಿದೆ. ಇಂದು ಮತಕ್ಕಾಗಿ ಹಣ ಕೊಡುವುದು, ಅದನ್ನು ಪಡೆದು ಮತ ಹಾಕೋದು ಮುಂದುವರಿದಿದೆ. ಈ ವ್ಯವಸ್ಥೆ ಬದಲಾಗುವವರೆಗೂ ಅಭಿವೃದ್ಧಿ ಅಸಾಧ್ಯ. ಇದು ಒಂದು ರೀತಿಯಲ್ಲಿ ಕುದುರೆ ವ್ಯಾಪಾರ’ ಎಂದು ಹೇಳಿದರು.</p>.<p>‘ಎಂ.ಪಿ. ಪ್ರಕಾಶ ಅವರು ಎಷ್ಟೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಚುನಾವಣೆಯಲ್ಲಿ ಸೋತರು. ಇದಕ್ಕೆ ಜಾತಿ ಹಾಗೂ ದುಡ್ಡೇ ಕಾರಣ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>18 ಜನ ಶಾಸಕರ ಅಮಾನತು ವಿಚಾರದ ಕುರಿತು ಪ್ರತಿಕ್ರಿಯಿಸಿ, ‘ಸಭಾಧ್ಯಕ್ಷರಿಗೆ ತಮ್ಮದೇ ಆದ ಗೌರವವಿರುತ್ತದೆ. ಸದನದಲ್ಲಿ ಪ್ರಶ್ನಿಸುವಾಗ ಬೆರಳೆತ್ತುವುದು, ಸಭಾಧ್ಯಕ್ಷರ ಮೇಲೆ ಪೇಪರ್ ಹರಿದು ಎಸೆಯುವುದು ತಪ್ಪಲ್ಲವೇ, ನಾನು ಆ ಸ್ಥಾನದಲ್ಲಿದ್ದರೂ ಇದನ್ನೇ ಮಾಡುತ್ತಿದ್ದೆ. ವಿಧಾನಪರಿಷತ್, ವಿಧಾನಸಭೆಯಲ್ಲಿ ಶಿಸ್ತು ಪಾಲಿಸಬೇಕು’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷರಾದ ಭಟ್ಟ ಪ್ರಸಾದ್, ಸದಸ್ಯರಾದ ಕೆ.ಎಸ್. ಚಾಂದ್ ಬಾಷಾ, ಮುಖಂಡರಾದ ಧಾರವಾಡ ಬಸವರಾಜ, ಬಿ. ಸಿದ್ದಪ್ಪ, ಕೆ.ಎಸ್. ಶಾರುಖ್, ಆದಿ ಶೇಷ, ವೆಂಕಟರಮಣ, ನಾಗೇಂದ್ರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ: ‘</strong>ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಕೃತ್ಯ ಅಮಾನವೀಯ. ಇಂಥ ಘಟನೆ ಮರುಕಳಿಸಿದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,‘ಪಹಲ್ಗಾಮ್ ವಿಚಾರದಲ್ಲಿ ರಾಜಕೀಯ ಸಲ್ಲದು’ ಎಂದರು.</p>.<p>‘ಪ್ರವೇಶ ಪರೀಕ್ಷೆಗಳಲ್ಲಿ ಜನಿವಾರ, ತಾಳಿ ತೆಗೆಸೋದು ತಪ್ಪು. ಪರೀಕ್ಷೆ ಸಂದರ್ಭದಲ್ಲಿ ನಕಲು ಮಾಡಿದವರನ್ನು ಡಿಬಾರ್ ಮಾಡಿ ಪರೀಕ್ಷೆಗಳ ಪಾವಿತ್ರ್ಯತೆ ಕಾಪಾಡಿ’ ಎಂದು ತಿಳಿಸಿದರು.</p>.<p>‘ಪ್ರಸ್ತುತ ರಾಜಕೀಯ ರಂಗದಲ್ಲಿ ನೈತಿಕತೆ ಉಳಿದಿಲ್ಲ. ಹಣದ ಮೇಲೆ ರಾಜಕೀಯ ನಡೆಯುತ್ತಿದೆ. ಇಂದು ಮತಕ್ಕಾಗಿ ಹಣ ಕೊಡುವುದು, ಅದನ್ನು ಪಡೆದು ಮತ ಹಾಕೋದು ಮುಂದುವರಿದಿದೆ. ಈ ವ್ಯವಸ್ಥೆ ಬದಲಾಗುವವರೆಗೂ ಅಭಿವೃದ್ಧಿ ಅಸಾಧ್ಯ. ಇದು ಒಂದು ರೀತಿಯಲ್ಲಿ ಕುದುರೆ ವ್ಯಾಪಾರ’ ಎಂದು ಹೇಳಿದರು.</p>.<p>‘ಎಂ.ಪಿ. ಪ್ರಕಾಶ ಅವರು ಎಷ್ಟೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಚುನಾವಣೆಯಲ್ಲಿ ಸೋತರು. ಇದಕ್ಕೆ ಜಾತಿ ಹಾಗೂ ದುಡ್ಡೇ ಕಾರಣ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>18 ಜನ ಶಾಸಕರ ಅಮಾನತು ವಿಚಾರದ ಕುರಿತು ಪ್ರತಿಕ್ರಿಯಿಸಿ, ‘ಸಭಾಧ್ಯಕ್ಷರಿಗೆ ತಮ್ಮದೇ ಆದ ಗೌರವವಿರುತ್ತದೆ. ಸದನದಲ್ಲಿ ಪ್ರಶ್ನಿಸುವಾಗ ಬೆರಳೆತ್ತುವುದು, ಸಭಾಧ್ಯಕ್ಷರ ಮೇಲೆ ಪೇಪರ್ ಹರಿದು ಎಸೆಯುವುದು ತಪ್ಪಲ್ಲವೇ, ನಾನು ಆ ಸ್ಥಾನದಲ್ಲಿದ್ದರೂ ಇದನ್ನೇ ಮಾಡುತ್ತಿದ್ದೆ. ವಿಧಾನಪರಿಷತ್, ವಿಧಾನಸಭೆಯಲ್ಲಿ ಶಿಸ್ತು ಪಾಲಿಸಬೇಕು’ ಎಂದು ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷರಾದ ಭಟ್ಟ ಪ್ರಸಾದ್, ಸದಸ್ಯರಾದ ಕೆ.ಎಸ್. ಚಾಂದ್ ಬಾಷಾ, ಮುಖಂಡರಾದ ಧಾರವಾಡ ಬಸವರಾಜ, ಬಿ. ಸಿದ್ದಪ್ಪ, ಕೆ.ಎಸ್. ಶಾರುಖ್, ಆದಿ ಶೇಷ, ವೆಂಕಟರಮಣ, ನಾಗೇಂದ್ರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>