<p><strong>ಕಂಪ್ಲಿ</strong>: ‘ಶ್ರಮ, ಖರ್ಚು ಕಡಿಮೆ ಮತ್ತು ಹೆಚ್ಚು ಆದಾಯದ ವಾಣಿಜ್ಯ ಕೃಷಿಯಾದ ತಾಳೆ ಬೆಳೆ ಕೃಷಿಯತ್ತ ಗಮನಹರಿಸುವಂತೆ’ ಜಿಲ್ಲಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೆ. ಶಂಕರ್ ರೈತರಲ್ಲಿ ಮನವಿ ಮಾಡಿದರು.</p>.<p>ತಾಲ್ಲೂಕಿನ ನಂ.3 ಸಣಾಪುರ ಗ್ರಾಮದ ತಾಳೆ ಬೆಳೆಗಾರರಾದ ಹನುಮಂತರಾವ್, ರಘುರಾಮ್ ಅವರ ತೋಟದಲ್ಲಿ, ತೋಟಗಾರಿಕೆ ಇಲಾಖೆ ಹಾಗೂ ಹಗರಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಳೆ ಬೆಳೆ ಯೋಜನೆಯ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ತಾಳೆ ಬೆಳೆಗೆ ಇಲಾಖೆಯಿಂದ ಸೂಕ್ತ ಪ್ರೋತ್ಸಾಹ ನೀಡುತ್ತಿರುವುದರಿಂದ ಸದುಪಯೋಗಪಡೆಯುವಂತೆ’ ತಿಳಿಸಿದರು.</p>.<p>ಖಾದ್ಯತೈಲ ಸ್ವಾವಲಂಬನೆ ಸಾಧಿಸಲು ತಾಲ್ಲೂಕಿನ ರೈತರು ತಾಳೆ ಬೆಳೆ ಬೆಳೆಯುವಲ್ಲಿ ಆಸಕ್ತಿ ತೋರಬೇಕು. ಸದ್ಯ ತಾಲ್ಲೂಕಿನ 45 ಹೆಕ್ಟೇರ್ ಸೇರಿ ಜಿಲ್ಲೆಯಾದ್ಯಂತ 500 ಹೆಕ್ಟೇರ್ ಪ್ರದೇಶದಲ್ಲಿ ತಾಳೆ ಬೆಳೆಯಲಾಗಿದೆ ಎಂದು ವಿವರಿಸಿದರು.</p>.<p>ಮೆಣಸಿನಕಾಯಿ ಬೆಳೆ ವಿಮೆ ಅಳವಡಿಸಿಕೊಳ್ಳಲು ಜುಲೈ 31ರೊಳಗೆ ಹೆಕ್ಟೇರ್ ಗೆ ₹ 5,375 ವಿಮಾ ಮೊತ್ತ ಪಾವತಿಸುವಂತೆ ತೋಟಗಾರಿಕೆ ರೈತರಿಗೆ ಮಾಹಿತಿ ನೀಡಿದರು. </p>.<p>ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಎಸ್.ರವಿ ತಾಳೆ ಬೆಳೆ ಕುರಿತು ಸಮಗ್ರ ಮಾಹಿತಿ ನೀಡಿದರು. ಇದಕ್ಕೂ ಮುನ್ನ ಸಣಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವೈ.ರಮಣಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. </p>.<p>ವ್ಯವಸ್ಥಾಪಕ ಎಸ್. ಹಿರೇಮಠ, ತಾಲ್ಲೂಕು ಸಹಾಯಕ ತೋಟಗಾರಿಕೆ ಅಧಿಕಾರಿ ಟಿ.ಸುನೀಲ್ಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೆಂಕಟರಾಮರಾಜು, ಗ್ರಾಮ ಪಂಚಾಯಿತಿ ಸದಸ್ಯರು, ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ‘ಶ್ರಮ, ಖರ್ಚು ಕಡಿಮೆ ಮತ್ತು ಹೆಚ್ಚು ಆದಾಯದ ವಾಣಿಜ್ಯ ಕೃಷಿಯಾದ ತಾಳೆ ಬೆಳೆ ಕೃಷಿಯತ್ತ ಗಮನಹರಿಸುವಂತೆ’ ಜಿಲ್ಲಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೆ. ಶಂಕರ್ ರೈತರಲ್ಲಿ ಮನವಿ ಮಾಡಿದರು.</p>.<p>ತಾಲ್ಲೂಕಿನ ನಂ.3 ಸಣಾಪುರ ಗ್ರಾಮದ ತಾಳೆ ಬೆಳೆಗಾರರಾದ ಹನುಮಂತರಾವ್, ರಘುರಾಮ್ ಅವರ ತೋಟದಲ್ಲಿ, ತೋಟಗಾರಿಕೆ ಇಲಾಖೆ ಹಾಗೂ ಹಗರಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಳೆ ಬೆಳೆ ಯೋಜನೆಯ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ತಾಳೆ ಬೆಳೆಗೆ ಇಲಾಖೆಯಿಂದ ಸೂಕ್ತ ಪ್ರೋತ್ಸಾಹ ನೀಡುತ್ತಿರುವುದರಿಂದ ಸದುಪಯೋಗಪಡೆಯುವಂತೆ’ ತಿಳಿಸಿದರು.</p>.<p>ಖಾದ್ಯತೈಲ ಸ್ವಾವಲಂಬನೆ ಸಾಧಿಸಲು ತಾಲ್ಲೂಕಿನ ರೈತರು ತಾಳೆ ಬೆಳೆ ಬೆಳೆಯುವಲ್ಲಿ ಆಸಕ್ತಿ ತೋರಬೇಕು. ಸದ್ಯ ತಾಲ್ಲೂಕಿನ 45 ಹೆಕ್ಟೇರ್ ಸೇರಿ ಜಿಲ್ಲೆಯಾದ್ಯಂತ 500 ಹೆಕ್ಟೇರ್ ಪ್ರದೇಶದಲ್ಲಿ ತಾಳೆ ಬೆಳೆಯಲಾಗಿದೆ ಎಂದು ವಿವರಿಸಿದರು.</p>.<p>ಮೆಣಸಿನಕಾಯಿ ಬೆಳೆ ವಿಮೆ ಅಳವಡಿಸಿಕೊಳ್ಳಲು ಜುಲೈ 31ರೊಳಗೆ ಹೆಕ್ಟೇರ್ ಗೆ ₹ 5,375 ವಿಮಾ ಮೊತ್ತ ಪಾವತಿಸುವಂತೆ ತೋಟಗಾರಿಕೆ ರೈತರಿಗೆ ಮಾಹಿತಿ ನೀಡಿದರು. </p>.<p>ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಎಸ್.ರವಿ ತಾಳೆ ಬೆಳೆ ಕುರಿತು ಸಮಗ್ರ ಮಾಹಿತಿ ನೀಡಿದರು. ಇದಕ್ಕೂ ಮುನ್ನ ಸಣಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವೈ.ರಮಣಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. </p>.<p>ವ್ಯವಸ್ಥಾಪಕ ಎಸ್. ಹಿರೇಮಠ, ತಾಲ್ಲೂಕು ಸಹಾಯಕ ತೋಟಗಾರಿಕೆ ಅಧಿಕಾರಿ ಟಿ.ಸುನೀಲ್ಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೆಂಕಟರಾಮರಾಜು, ಗ್ರಾಮ ಪಂಚಾಯಿತಿ ಸದಸ್ಯರು, ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>