ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀನದಯಾಳ್‌ ಉಪಾಧ್ಯಾಯ ಜನ್ಮ ದಿನ: ಸರ್ಕಾರಿ ಆಸ್ಪತ್ರೆಯಲ್ಲಿ ಹಾಲು ವಿತರಣೆ

Last Updated 25 ಸೆಪ್ಟೆಂಬರ್ 2018, 12:15 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ಬಿಜೆಪಿ ಮಂಡಲದಿಂದ ಮಂಗಳವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪಂಡಿತ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮ ದಿನ ಆಚರಿಸಲಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ ಅವರು ಉಪಾಧ್ಯಾಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಇತ್ತೀಚೆಗೆ ಚಿತ್ತವಾಡ್ಗಿಯ ಪೀರಲ ಮೆರವಣಿಗೆ ಸಂದರ್ಭದಲ್ಲಿ ಕಟ್ಟಡದ ಸಜ್ಜ ಕುಸಿದು ಗಾಯಗೊಂಡಿದ್ದ ಗಾಯಾಳುಗಳಿಗೆ ಹಾಲು, ಬ್ರೆಡ್‌ ವಿತರಿಸಿದರು. ಗಾಯಗೊಂಡವರಿಗೆ ಉತ್ತಮ ರೀತಿಯಲ್ಲಿ ಉಪಚಾರ ಮಾಡಿದ ವೈದ್ಯರಿಗೆ ಸನ್ಮಾನಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಅನಂತ ಪದ್ಮನಾಭ, ಪ್ರಧಾನ ಕಾರ್ಯದರ್ಶಿ ಬಸವರಾಜ ನಾಲತ್ವಾಡ, ಮುಖಂಡರಾದ ಗೋವಿಂದರಾಜು, ಜಂಬಾನಹಳ್ಳಿ ವಸಂತ, ಪಂಚಪ್ಪ, ತಿಪ್ಪೇಸ್ವಾಮಿ, ನಾಗೇನಹಳ್ಳಿ ಚಂದ್ರಶೇಖರ್‌, ಮನೋಹರ್‌ ಗುಪ್ತಾ, ಬಿ. ಶಂಕರ್‌, ಶಂಕರ್‌ ಮೇಟಿ, ಹನುವಾಳ್‌ ದೇವರಾಜ್‌, ಆಶಾರಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT