<p><strong>ಬಳ್ಳಾರಿ</strong>: ಬಳ್ಳಾರಿ ತಾಲೂಕಿನ ಯಾಳ್ಪಿ ಕಗ್ಗಲ್ ಬಳಿ ಹೂವುಗಳನ್ನು ಹರಿಯಲು ಹೋಗಿ ಹಗರಿ ನದಿಯಲ್ಲಿ ಪ್ರವಾಹದಲ್ಲಿ ಹಿನ್ನೆಲೆ ಸಿಕ್ಕಿಹಾಕಿಕೊಂಡಿದ್ದ 24 ಜನರನ್ನು ಬಳ್ಳಾರಿ ಜಿಲ್ಲಾಡಳಿತ ಮತ್ತು ಅಗ್ನಿಶಾಮಕ ದಳದ ತಂಡಗಳು ವಿಶೇಷ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಣೆ ಮಾಡಿವೆ.</p>.<p>ಯಾಳ್ಪಿ ಕಗ್ಗಲ್ನ 24 ಜನರು ನಿತ್ಯದಂತೆ ಯಥಾರೀತಿ ಹೂವುಗಳನ್ನು ಹರಿಯಲು ತೆರಳಿದ್ದರು;ಹಗರಿ ನದಿಯಲ್ಲಿ ಪ್ರವಾಹ ಹೆಚ್ಚಳವಾದ ಹಿನ್ನೆಲೆ ಆ ಕಡೆ ಸಿಕ್ಕಿಹಾಕಿಕೊಂಡಿದ್ದರು.</p>.<p>ಮಾಹಿತಿ ಅರಿಯುತ್ತಲೇ ಅಗ್ನಿಶಾಮಕ ದಳದ ವಿಶೇಷ ತಂಡದ ಜೊತೆಗೆ ಸ್ಥಳಕ್ಕೆ ಧಾವಿಸಿದ ಸಹಾಯಕ ಆಯುಕ್ತ ಡಾ.ಆಕಾಶ ಮತ್ತು ಬಳ್ಳಾರಿ ತಹಸೀಲ್ದಾರ್ ವಿಶ್ವನಾಥ 24 ಜನರನ್ನು ಸುರಕ್ಷಿತವಾಗಿ ಮರಳಿ ರಕ್ಷಿಸಿದ್ದಾರೆ.</p>.<p>ಅದೇ ರೀತಿಯಲ್ಲಿ ಮೋಕಾ, ಗೋಡೆಹಾಳ್, ಸಂಗನಕಲ್ಲು, ಪರಮದೇವನಹಳ್ಳಿ ಸೇರಿದಂತೆ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಮತ್ತು ಮಳೆನೀರು ನುಗ್ಗಿ ಸಮಸ್ಯೆಯಾದ ಸ್ಥಳಗಳಿಗೆ ಸಹಾಯಕ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿ ತಾಲೂಕಿನ ಯಾಳ್ಪಿ ಕಗ್ಗಲ್ ಬಳಿ ಹೂವುಗಳನ್ನು ಹರಿಯಲು ಹೋಗಿ ಹಗರಿ ನದಿಯಲ್ಲಿ ಪ್ರವಾಹದಲ್ಲಿ ಹಿನ್ನೆಲೆ ಸಿಕ್ಕಿಹಾಕಿಕೊಂಡಿದ್ದ 24 ಜನರನ್ನು ಬಳ್ಳಾರಿ ಜಿಲ್ಲಾಡಳಿತ ಮತ್ತು ಅಗ್ನಿಶಾಮಕ ದಳದ ತಂಡಗಳು ವಿಶೇಷ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಣೆ ಮಾಡಿವೆ.</p>.<p>ಯಾಳ್ಪಿ ಕಗ್ಗಲ್ನ 24 ಜನರು ನಿತ್ಯದಂತೆ ಯಥಾರೀತಿ ಹೂವುಗಳನ್ನು ಹರಿಯಲು ತೆರಳಿದ್ದರು;ಹಗರಿ ನದಿಯಲ್ಲಿ ಪ್ರವಾಹ ಹೆಚ್ಚಳವಾದ ಹಿನ್ನೆಲೆ ಆ ಕಡೆ ಸಿಕ್ಕಿಹಾಕಿಕೊಂಡಿದ್ದರು.</p>.<p>ಮಾಹಿತಿ ಅರಿಯುತ್ತಲೇ ಅಗ್ನಿಶಾಮಕ ದಳದ ವಿಶೇಷ ತಂಡದ ಜೊತೆಗೆ ಸ್ಥಳಕ್ಕೆ ಧಾವಿಸಿದ ಸಹಾಯಕ ಆಯುಕ್ತ ಡಾ.ಆಕಾಶ ಮತ್ತು ಬಳ್ಳಾರಿ ತಹಸೀಲ್ದಾರ್ ವಿಶ್ವನಾಥ 24 ಜನರನ್ನು ಸುರಕ್ಷಿತವಾಗಿ ಮರಳಿ ರಕ್ಷಿಸಿದ್ದಾರೆ.</p>.<p>ಅದೇ ರೀತಿಯಲ್ಲಿ ಮೋಕಾ, ಗೋಡೆಹಾಳ್, ಸಂಗನಕಲ್ಲು, ಪರಮದೇವನಹಳ್ಳಿ ಸೇರಿದಂತೆ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಮತ್ತು ಮಳೆನೀರು ನುಗ್ಗಿ ಸಮಸ್ಯೆಯಾದ ಸ್ಥಳಗಳಿಗೆ ಸಹಾಯಕ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>