<p><strong>ಹಗರಿಬೊಮ್ಮನಹಳ್ಳಿ</strong>: ಬಳ್ಳಾರಿ ಲೋಕಸಭಾ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ, ಸಂಸದನಾಗಿ ದೆಹಲಿಗೆ ಹೋಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇ.ತುಕಾರಾಂ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾನ ಮಾಡಿದ್ದಾರೆ. ಎಲ್ಲ ಕಡೆಗಳಿಂದಲೂ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿವೆ ಎಂದರು.</p>.<p>ರಾಮನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯೊಂದರಲ್ಲಿ ಸರಿಯಾಗಿ ಬೆಳಕಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಲ್ಲಿ ವಿನಂತಿಸಿಕೊಂಡರು.</p>.<p>ಕೆಎಂಎಫ್ ಅಧ್ಯಕ್ಷ ಎಲ್ಬಿಪಿ ಭೀಮನಾಯ್ಕ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ತುಕಾರಾಂ ಅವರ ಗೆಲುವಿನಲ್ಲಿ ಮುಖ್ಯವಾಗುತ್ತವೆ, ಪಕ್ಷದ ಹೈಕಮಾಂಡ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ದಿನವೇ ಗೆಲುವು ಸಿಕ್ಕಂತಾಗಿದೆ ಎಂದರು.</p>.<p>ಪುರಸಭೆ ಸದಸ್ಯ ಎಂ.ಮರಿರಾಮಪ್ಪ, ಮುಖಂಡರಾದ ಡಿಶ್ ಮಂಜುನಾಥ, ಸೆರೆಗಾರ ಹುಚ್ಚಪ್ಪ, ಕೆ.ಜಹಾಂಗೀರ್, ಅರಸಿಕೇರಿ ಹನುಮಂತಪ್ಪ, ಶಶಿ, ಎಚ್.ಎಂ.ವೀರೇಶ್ ಇದ್ದರು.</p>.<p>ಹೊರಗಡೇ ನಿಂತಿದ್ದ ಭೀಮಾ ನಾಯ್ಕ:</p>.<p>ರಾಮನಗರದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅರಳಿಹಳ್ಳಿಯ ಅಂಗನವಾಡಿ ಕೇಂದ್ರದ ಮತಗಟ್ಟೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ತುಕಾರಾಂ ತೆರಳಿದರಾದರೂ ಕೆಎಂಎಫ್ ಅಧ್ಯಕ್ಷ, ಮಾಜಿ ಶಾಸಕ ಎಲ್ಬಿಪಿ ಭೀಮನಾಯ್ಕ ಅವರು ಆವರಣವನ್ನು ಪ್ರವೇಶಿಸದೇ ಹೊರಗಡೆ ನಿಂತಿದ್ದರು.</p>.<p>ಕಳೆದ ಪುರಸಭೆ ಚುನಾವಣೆಯಲ್ಲಿ ಮತಗಟ್ಟೆ ಒಳಗೆ ಜನಪ್ರತಿನಿಧಿಗಳು ಅಲ್ಲದವರು ಪ್ರವೇಶ ಮಾಡಿದ ಕಾರಣದಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರ ನಡುವೆ ಗಲಾಟೆ ನಡೆದಿತ್ತು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ಬಳ್ಳಾರಿ ಲೋಕಸಭಾ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ, ಸಂಸದನಾಗಿ ದೆಹಲಿಗೆ ಹೋಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇ.ತುಕಾರಾಂ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾನ ಮಾಡಿದ್ದಾರೆ. ಎಲ್ಲ ಕಡೆಗಳಿಂದಲೂ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿವೆ ಎಂದರು.</p>.<p>ರಾಮನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯೊಂದರಲ್ಲಿ ಸರಿಯಾಗಿ ಬೆಳಕಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಲ್ಲಿ ವಿನಂತಿಸಿಕೊಂಡರು.</p>.<p>ಕೆಎಂಎಫ್ ಅಧ್ಯಕ್ಷ ಎಲ್ಬಿಪಿ ಭೀಮನಾಯ್ಕ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ತುಕಾರಾಂ ಅವರ ಗೆಲುವಿನಲ್ಲಿ ಮುಖ್ಯವಾಗುತ್ತವೆ, ಪಕ್ಷದ ಹೈಕಮಾಂಡ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ದಿನವೇ ಗೆಲುವು ಸಿಕ್ಕಂತಾಗಿದೆ ಎಂದರು.</p>.<p>ಪುರಸಭೆ ಸದಸ್ಯ ಎಂ.ಮರಿರಾಮಪ್ಪ, ಮುಖಂಡರಾದ ಡಿಶ್ ಮಂಜುನಾಥ, ಸೆರೆಗಾರ ಹುಚ್ಚಪ್ಪ, ಕೆ.ಜಹಾಂಗೀರ್, ಅರಸಿಕೇರಿ ಹನುಮಂತಪ್ಪ, ಶಶಿ, ಎಚ್.ಎಂ.ವೀರೇಶ್ ಇದ್ದರು.</p>.<p>ಹೊರಗಡೇ ನಿಂತಿದ್ದ ಭೀಮಾ ನಾಯ್ಕ:</p>.<p>ರಾಮನಗರದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅರಳಿಹಳ್ಳಿಯ ಅಂಗನವಾಡಿ ಕೇಂದ್ರದ ಮತಗಟ್ಟೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ತುಕಾರಾಂ ತೆರಳಿದರಾದರೂ ಕೆಎಂಎಫ್ ಅಧ್ಯಕ್ಷ, ಮಾಜಿ ಶಾಸಕ ಎಲ್ಬಿಪಿ ಭೀಮನಾಯ್ಕ ಅವರು ಆವರಣವನ್ನು ಪ್ರವೇಶಿಸದೇ ಹೊರಗಡೆ ನಿಂತಿದ್ದರು.</p>.<p>ಕಳೆದ ಪುರಸಭೆ ಚುನಾವಣೆಯಲ್ಲಿ ಮತಗಟ್ಟೆ ಒಳಗೆ ಜನಪ್ರತಿನಿಧಿಗಳು ಅಲ್ಲದವರು ಪ್ರವೇಶ ಮಾಡಿದ ಕಾರಣದಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರ ನಡುವೆ ಗಲಾಟೆ ನಡೆದಿತ್ತು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>