<p><strong>ಬಳ್ಳಾರಿ:</strong> ‘ಪಿಎಫ್ಐ ಸಂಘಟನೆ ನನ್ನ ಹತ್ಯೆಗೂ ಸಂಚು ರೂಪಿಸಿತ್ತು’ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಬಳ್ಳಾರಿ ನಗರದಲ್ಲಿರುವ ಮನೆ ದೇವರು ಚೌಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಬಂದಿದ್ದ ಈಶ್ವರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ನನ್ನ ಕೊಲೆಗೆ ಪಿಎಫ್ಐ ಸ್ಕೆಚ್ ಹಾಕಿದ್ದು ಹಿಂಡಲಗಾ ಜೈಲಿನಲ್ಲಿರುವ ಶಾಹಿರ್ ಶೇಖ್ ವಿಚಾರಣೆಯಿಂದ ಬಹಿರಂಗವಾಗಿದೆ. ಆರೋಪಿ ನಾಗ್ಪುರ ಪೊಲೀಸರ ಕಸ್ಟಡಿಯಲ್ಲಿದ್ದಾನೆ’ ಎಂದು ಈಶ್ವರಪ್ಪ ಹೇಳಿದರು.</p>.<p>‘ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿರುವೆ. ಹಿಂದೆ ಕೂಡ ನನಗೆ ಹಿಂದುತ್ವ ವಿಚಾರದಲ್ಲಿ ಕೊಲೆ ಬೆದರಿಕೆ ಬಂದಿತ್ತು. ಆಗಿನ ಕಾಂಗ್ರೆಸ್ ಸರ್ಕಾರ ಭದ್ರತೆ ಒದಗಿಸಿತ್ತು. ಇಂಥ ಬೆದರಿಕೆಗಳಿಗೆ ನಾನು ಬಗ್ಗುವುದಿಲ್ಲ’ ಎಂದರು.</p>.<p><strong>ಓದಿ... <a href="https://www.prajavani.net/bjp-high-command-instructs-jagadish-shettar-and-ks-eshwarappa-to-retire-from-politics-1031580.html" target="_blank">ರಾಜಕೀಯ ನಿವೃತ್ತಿಯಾಗುವಂತೆ ಶೆಟ್ಟರ್, ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಸೂಚನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಪಿಎಫ್ಐ ಸಂಘಟನೆ ನನ್ನ ಹತ್ಯೆಗೂ ಸಂಚು ರೂಪಿಸಿತ್ತು’ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಬಳ್ಳಾರಿ ನಗರದಲ್ಲಿರುವ ಮನೆ ದೇವರು ಚೌಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಬಂದಿದ್ದ ಈಶ್ವರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ನನ್ನ ಕೊಲೆಗೆ ಪಿಎಫ್ಐ ಸ್ಕೆಚ್ ಹಾಕಿದ್ದು ಹಿಂಡಲಗಾ ಜೈಲಿನಲ್ಲಿರುವ ಶಾಹಿರ್ ಶೇಖ್ ವಿಚಾರಣೆಯಿಂದ ಬಹಿರಂಗವಾಗಿದೆ. ಆರೋಪಿ ನಾಗ್ಪುರ ಪೊಲೀಸರ ಕಸ್ಟಡಿಯಲ್ಲಿದ್ದಾನೆ’ ಎಂದು ಈಶ್ವರಪ್ಪ ಹೇಳಿದರು.</p>.<p>‘ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿರುವೆ. ಹಿಂದೆ ಕೂಡ ನನಗೆ ಹಿಂದುತ್ವ ವಿಚಾರದಲ್ಲಿ ಕೊಲೆ ಬೆದರಿಕೆ ಬಂದಿತ್ತು. ಆಗಿನ ಕಾಂಗ್ರೆಸ್ ಸರ್ಕಾರ ಭದ್ರತೆ ಒದಗಿಸಿತ್ತು. ಇಂಥ ಬೆದರಿಕೆಗಳಿಗೆ ನಾನು ಬಗ್ಗುವುದಿಲ್ಲ’ ಎಂದರು.</p>.<p><strong>ಓದಿ... <a href="https://www.prajavani.net/bjp-high-command-instructs-jagadish-shettar-and-ks-eshwarappa-to-retire-from-politics-1031580.html" target="_blank">ರಾಜಕೀಯ ನಿವೃತ್ತಿಯಾಗುವಂತೆ ಶೆಟ್ಟರ್, ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಸೂಚನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>