<p><strong>ಬಳ್ಳಾರಿ:</strong> ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆಯಡಿ ಭಾನುವಾರ ಎಫ್ಐಆರ್ ದಾಖಲಾಗಿದೆ.</p>.<p>ನಗರದಲ್ಲಿ ನಡೆದಿದ್ದ ಘರ್ಷಣೆ, ಕೊಲೆ ಕೃತ್ಯ ಬಿಜೆಪಿ ಜನವರಿ 17ರಂದು ಏರ್ಪಡಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಭಾಷಣ ಮಾಡುವಾಗ ಶ್ರೀರಾಮುಲು ಅವರು ಪೋಕ್ಸೊ ಪ್ರಕರಣದ ಸಂತ್ರಸ್ತೆಯೊಬ್ಬರ ಗುರುತು ಬಹಿರಂಗಪಡಿಸಿದ್ದರು.</p>.<p>‘ಶಾಸಕ ಭರತ್ ರೆಡ್ಡಿ ಯುವಕರನ್ನು ಯಾವ ಹಂತಕ್ಕೆ ಮಾದಕ ವ್ಯಸನಿಗಳನ್ನಾಗಿ ಮಾಡಿದ್ದಾರೆ ಎಂದರೆ, ನಾಲ್ಕೈದು ವಿದ್ಯಾರ್ಥಿಗಳು ಡ್ರಗ್ಸ್ ತೆಗೆದುಕೊಂಡು ನಗರದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದಿದ್ದರು. ಮುಂದುವರಿದು, ವಿದ್ಯಾರ್ಥಿನಿಯ ಹೆಸರು, ಶಾಲೆ, ತರಗತಿ ಮತ್ತು ಜಾತಿಯನ್ನೂ ಬಹಿರಂಗಪಡಿಸಿದ್ದರು.</p>.<p>ಎಪಿಎಂಸಿ ಠಾಣೆ ಇನ್ಸ್ಪೆಕ್ಟರ್ ಈ ಬಗ್ಗೆ ದೂರು ನೀಡಿದ್ದಾರೆ. ‘ಶ್ರೀರಾಮುಲು ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಕರೆಯುತ್ತೇವೆ’ ಎಂದು ಎಸ್ಪಿ ಸುಮನ್ ಪೆನ್ನೇಕರ್ ತಿಳಿಸಿದರು.</p>.<p>‘ಪ್ರಜಾವಾಣಿ’ ಜ. 18ರ ಸಂಚಿಕೆಯಲ್ಲಿ ‘ಸಂತ್ರಸ್ತೆ ವಿವರ ಬಹಿರಂಗಪಡಿಸಿದ ಶ್ರೀರಾಮುಲು’ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆಯಡಿ ಭಾನುವಾರ ಎಫ್ಐಆರ್ ದಾಖಲಾಗಿದೆ.</p>.<p>ನಗರದಲ್ಲಿ ನಡೆದಿದ್ದ ಘರ್ಷಣೆ, ಕೊಲೆ ಕೃತ್ಯ ಬಿಜೆಪಿ ಜನವರಿ 17ರಂದು ಏರ್ಪಡಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಭಾಷಣ ಮಾಡುವಾಗ ಶ್ರೀರಾಮುಲು ಅವರು ಪೋಕ್ಸೊ ಪ್ರಕರಣದ ಸಂತ್ರಸ್ತೆಯೊಬ್ಬರ ಗುರುತು ಬಹಿರಂಗಪಡಿಸಿದ್ದರು.</p>.<p>‘ಶಾಸಕ ಭರತ್ ರೆಡ್ಡಿ ಯುವಕರನ್ನು ಯಾವ ಹಂತಕ್ಕೆ ಮಾದಕ ವ್ಯಸನಿಗಳನ್ನಾಗಿ ಮಾಡಿದ್ದಾರೆ ಎಂದರೆ, ನಾಲ್ಕೈದು ವಿದ್ಯಾರ್ಥಿಗಳು ಡ್ರಗ್ಸ್ ತೆಗೆದುಕೊಂಡು ನಗರದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದಿದ್ದರು. ಮುಂದುವರಿದು, ವಿದ್ಯಾರ್ಥಿನಿಯ ಹೆಸರು, ಶಾಲೆ, ತರಗತಿ ಮತ್ತು ಜಾತಿಯನ್ನೂ ಬಹಿರಂಗಪಡಿಸಿದ್ದರು.</p>.<p>ಎಪಿಎಂಸಿ ಠಾಣೆ ಇನ್ಸ್ಪೆಕ್ಟರ್ ಈ ಬಗ್ಗೆ ದೂರು ನೀಡಿದ್ದಾರೆ. ‘ಶ್ರೀರಾಮುಲು ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಕರೆಯುತ್ತೇವೆ’ ಎಂದು ಎಸ್ಪಿ ಸುಮನ್ ಪೆನ್ನೇಕರ್ ತಿಳಿಸಿದರು.</p>.<p>‘ಪ್ರಜಾವಾಣಿ’ ಜ. 18ರ ಸಂಚಿಕೆಯಲ್ಲಿ ‘ಸಂತ್ರಸ್ತೆ ವಿವರ ಬಹಿರಂಗಪಡಿಸಿದ ಶ್ರೀರಾಮುಲು’ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>